Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಸದುರ್ಗದಲ್ಲಿ ರಾತ್ರೋ ರಾತ್ರಿ ಪ್ರತಿಷ್ಠಾಪನೆಗೊಂಡಿದೆ ಶ್ರೀಕೃಷ್ಣನ ಪ್ರತಿಮೆ..!

Facebook
Twitter
Telegram
WhatsApp

 

ಸುದ್ದಿಒನ್, ಹೊಸದುರ್ಗ, ಆಗಸ್ಟ್. 30 : ರಾತ್ರೋ ರಾತ್ರಿ ಶ್ರೀಕೃಷ್ಣನ ಪ್ರತಿಮೆ ತಲೆ ಎತ್ತಿ ನಿಂತಿದೆ. ಅದಕ್ಕೆ ಕಾರಣವೇನು..? ಪ್ರತಿಮೆಯನ್ನು ರಾತ್ರೋ ರಾತ್ರಿ ಸ್ಥಾಪನೆ ಮಾಡಿದ್ಯಾಕೆ ಅನ್ನೋದು ಆಶ್ಚರ್ಯಕರ ಪ್ರಶ್ನೆಯಾಗಿದೆ.

ಪಟ್ಟಣದ ಸಾರಿಗೆ ಬಸ್ ನಿಲ್ದಾಣ ಬಳಿ ಈ ಘಟನೆ ನಡೆದಿದೆ. ಸಾರಿಗೆ ಬಸ್ ನಿಲ್ದಾಣದ ಬಳಿ ಶ್ರೀಕೃಷ್ಣನ ಪ್ರತಿಮೆಯನ್ನು ಸ್ಥಾಪನೆ ಮಾಡಿದ್ದಾರೆ. ಯಾವುದೇ ರೀತಿಯ ಅನುಮತಿಯನ್ನು ಪಡೆಯದೆ ಹೀಗೆ ರಾತೋರಾತ್ರಿ ಶ್ರೀಕೃಷ್ಣ ಪುತ್ಥಳಿ ಸ್ಥಾಪನೆ ಮಾಡಿದ್ದಾರೆ. ಸಾರಿಗೆ ಬಸ್ ನಿಲ್ದಾಣ ಬಳಿಯ ಖಾಲಿ ಜಾಗದಲ್ಲಿ ಪ್ರತಿಮೆ ಸ್ಥಾಪನೆ ಮಾಡಿದ್ದಾರೆ. ಇದು ಪುರಸಭೆ ವ್ತಾಪ್ತಿಗೊಳಪಡುವ ಜಾಗವಾಗಿದೆ. ಇಲ್ಲಿ ಪ್ರತಿಮೆ ಸ್ಥಾಪನೆ ಮಾಡಿದ್ದು, ರಾತೋರಾತ್ರಿ ಶ್ರೀಕೃಷ್ಣ ಪ್ರತಿಮೆ ಸ್ಥಾಪನೆ ಮಾಡಿದ್ದರ ಬಗ್ಗೆ ಪೊಲೀಸರಿಂದ ಪರಿಶೀಲನೆ ನಡೆಯುತ್ತಿದೆ.

ವಿಚಾರಣೆಯ ವೇಳೆ ಪೊಲೀಸರು ಪುರಸಭೆ ಅಧಿಕಾರಿಗಳಿಗೆ ಮಾಹಿತಿ ಕೇಳಿದ್ದಾರೆ. ಇಲ್ಲಿವರೆಗೂ ಕೃಷ್ಣನ ಪ್ರತಿಮೆಯ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ, ಯೋಜನೆಗಳು ನಡೆದಿಲ್ಲ. ಆದರೆ ಕೃಷ್ಣನ ಪ್ರತಿಮೆಯನ್ನು ಇದ್ದಕ್ಕಿದ್ದ ಹಾಗೇ ತಂದಿಟ್ಟವರು ಯಾರು ಎಂಬುದೇ ಯಕ್ಷ ಪ್ರಶ್ನೆಯಾಗಿ ಕಾಡುತ್ತಿದೆ ಅಲ್ಲಿನ ಜನರಿಗೆ. ಕೃಷ್ಣ ಜನ್ಮಾಷ್ಠಮಿ ಕಳೆದು ನಾಲ್ಕು ದಿನಗಳಾಗಿವೆ. ಈಗ ಕೃಷ್ಣನನ್ನು ಪ್ರತಿಷ್ಠಾಪನೆ ಮಾಡಿದ್ದರ ಹಿಂದಿನ ಉದ್ದೇಶ ಏನು ಎಂಬುದು ಅರ್ಥವಾಗುತ್ತಿಲ್ಲ. ಸದ್ಯ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಇದರ ಹಿಂದೆ ಯಾರಿದ್ದಾರೆ..? ಯಾಕೆ ಪ್ರತಿಮೆ ಪ್ರತಿಷ್ಠಾಪನೆ ಮಾಡಿದ್ರು ಎಂಬುದೆಲ್ಲಾ ಪೊಲೀಸರ ತನಿಖೆಯ ಬಳಿಕವಷ್ಟೇ ಸತ್ಯ ಹೊರ ಬರಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!