Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರಿಗೂ ಆಸ್ನಾ ಎಫೆಕ್ಟ್ : ಎಲ್ಲೆಲ್ಲಿ ಮಳೆಯಾಗಲಿದೆ..?

Facebook
Twitter
Telegram
WhatsApp

ಬೆಂಗಳೂರಿಗೂ ಆಸ್ನಾ ಎಫೆಕ್ಟ್ : ಎಲ್ಲೆಲ್ಲಿ ಮಳೆಯಾಗಲಿದೆ..?

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದಲ್ಲಿ ಮಳೆ ಜೋರಾಗಿದೆ. ವಾಯುಭಾರ ಕುಸಿತ ಸೈಕ್ಲೋನ್ ಆಗಿದೆ. ಈ ಸೈಕ್ಲೋನ್ ಸದ್ಯ ಆಸ್ನಾ ಸೈಕ್ಲೋನ್ ಆಗಿ ಪರಿವರ್ತನೆಯಾಗಿದೆ. ಈ ಆಸ್ನಾ ಸೈಕ್ಲೋನ್ ಎಫೆಕ್ಟ್ ಕರ್ನಾಟಕದಲ್ಲೂ ಎಫೆಕ್ಟ್ ಆಗಿದೆ‌. ಸದ್ಯ ಇದರ ಪರಿಣಾಮ ಸಿಲಿಕಾನ್ ಸಿಟಿಯಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ವರದಿ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ ನಿನ್ನೆ ಜೋರು ಮಳೆಯಾಗಿತ್ತು. ಹಲವು ಪ್ರದೇಶಗಳಲ್ಲಿ ಮಳೆಯಿಂದಾಗಿ ಪರದಾಟ‌ ಶುರುವಾಗಿತ್ತು. ವಾಹನ ಸವಾರರಿಗೂ ಹಿಂಸೆಯಾಗಿತ್ತು. ಅಲ್ಲಲ್ಲಿ ನೀರು ನಿಂತು ಪಜೀತಿ ಕ್ರಿಯೇಟ್ ಮಾಡಿತ್ತು. ಸಿಲಿಕಾನ್ ಸಿಟಿಯಲ್ಲಿ ಇಂದು ಬೆಳಗ್ಗೆಯಿಂದಾನೂ ಮೋಡ ಕವಿದ ವಾತಾವರಣವಿದೆ. ಹೀಗಾಗಿ ಇಂದು ಸಂಜೆ ವೇಳೆಗೆ ರಾಜ್ಯದಲ್ಲಿ ಜೋರು ಮಳೆಯಾಗಲಿದೆ‌. ಹಾಗೇ ಬೆಂಗಳೂರು ಸೇರಿದಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಆಗಸ್ಟ್ ತಿಂಗಳಲ್ಲಿ ಸೈಕ್ಲೋನ್ ಕಾಣಿಸಿಕೊಳ್ಳುವುದೇ ಅಪರೂಪ. 1976ರಲ್ಲಿ ಕಾಣಿಸಿಕೊಂಡಿತ್ತು. ಅದಾದ ಬಳಿಕ ಆಗಸ್ಟ್ ತಿಂಗಳಲ್ಲಿ ಸೈಕ್ಲೋನ್ ಕಾಣಿಸಿಕೊಂಡ ದಾಖಲೆಗಳು ಇಲ್ಲ. ಇದೀಗ ಈ ವರ್ಷ ಆಗಸ್ಟ್ ತಿಂಗಳಲ್ಲಿ ಕಾಣಿಸಿಕೊಂಡಿದ್ದು, ಅದಕ್ಕೆ ಆಸ್ನಾ ಎಂದು ಹೆಸರಿಡಲಾಗಿದೆ. ಈಗಾಗಲೇ ಈ ಆಸ್ನಾ ಸೈಕ್ಲೋನ್ ನಿಂದ ಗುಜರಾತ್ ರಾಜ್ಯ ತತ್ತರಿಸಿ ಹೋಗಿದೆ. ಸಾವು ನೋವುಗಳು ಹೆಚ್ಚಾಗಿವೆ. ಕಳೆದ 4 ದಿನದಲ್ಲೊ ಆಸ್ನಾ ಸೈಕ್ಲೋನ್ ನಿಂದಾಗಿ 32 ಮಂದಿ ಸಾವನ್ನಪ್ಪಿದ್ದಾರೆ. ಸಾವಿರಾರು ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದೆ. ಸಂಕಷ್ಟಕ್ಕೆ ಸಿಲುಕಿದ 1,200 ಮಂದಿಯನ್ನು ವಿವಿಧ ರಕ್ಷಣಾ‌ ತಂಡಗಳು ರಕ್ಷಣೆ ಮಾಡಿವೆ. ಆದರೆ ಆಸ್ನಾ ಸೈಕ್ಲೋನ್ ಕರ್ನಾಟಕದ ಮೇಲೆ ಅಷ್ಟೊಂದು ಪರಿಣಾಮ ಬೀರದೆ ಹೋದರೂ ಮಳೆ ಹೆಚ್ಚಾಗಲು ಬಹುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!