Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿವೃತ್ತ ನೌಕರ ಜಯರಾಮ್ ನಿಧನ

Facebook
Twitter
Telegram
WhatsApp

ಚಿತ್ರದುರ್ಗ ಆಗಸ್ಟ್. 30 :  ನಗರಸಭೆ ಸದಸ್ಯೆ ಶ್ರೀಮತಿ ನಾಗಮ್ಮ ಅವರ ಪತಿ ಹಾಗೂ ಅರೋಗ್ಯ ಇಲಾಖೆಯ ನಿವೃತ್ತ ನೌಕರ ಜಯರಾಮ್ (82 ವರ್ಷ) ಅವರು ಶುಕ್ರವಾರ ಮುಂಜಾನೆ ನಿಧನ ಹೊಂದಿದರು.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಲ್ಲಿಂದ ಬಿಡುಗಡೆಯಾದ ಬಳಿಕ ಚಿತ್ರದುರ್ಗದ ವೇದಾಂತ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ನಿಧನ ಹೊಂದಿದ್ದಾರೆ

ಮೃತರು ಪತ್ನಿ , ಇಬ್ಬರು ಹೆಣ್ಣು ಮಕ್ಕಳು, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗದವರನ್ನು  ಅಗಲಿದ್ದಾರೆ.  ಜಯರಾಮ್ ಅವರ ಪುತ್ರ ಮಹೇಶ್ ಮೂರು ಅವಧಿಗೆ ನಿರಂತರವಾಗಿ ನಗರಸಭೆಗೆ ಸದಸ್ಯರಾಗಿ ಆಯ್ಕೆ ಆಗಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಪತ್ನಿ ಶ್ರೀಮತಿ ನಾಗಮ್ಮ ಅವರು ಚುನಾವಣೆ ಸ್ಪರ್ಧಿಸಿ ಗೆದ್ದಿದ್ದರು. ಮೃತರ ಅಂತ್ಯ ಕ್ರಿಯೆ ಶುಕ್ರವಾರ ಸಂಜೆ ಜೋಗಿಮಟ್ಟಿ ರಸ್ತೆಯ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು.

ಜಯರಾಮ್ ಅವರ ನಿಧನ ವಿಷಯ ತಿಳಿದ ಕೂಡಲೇ ಅಪಾರ ಸಂಖ್ಯೆಯಲ್ಲಿ ಬಂದುಗಳು ಸಾರ್ವಜನಿಕರು ಮತ್ತು ರಾಜಕೀಯ ಮುಖಂಡರು ಆಗಮಿಸಿ ಮೃತರಿಗೆ ಅಂತಿಮ ನಮನ ಸಲ್ಲಿಸಿದರು.

ನಗರ ಸಭೆ ಅಧ್ಯಕ್ಷೆ ಸುಮಿತಾ ,ಉಪಾದ್ಯಕ್ಷರಾದ ಶ್ರೀದೇವಿ ಸದಸ್ಯರಾದ ಹೆಚ್ .ಭಾಸ್ಕರ್ , ಹೆಚ್. ಶ್ರೀನಿವಾಸ್ . ರಮೇಶ್ .ವೆಂಕಟೇಶಪ್ಪ , ದಾರುಕ ಬಡಾವಣೆಯ ಕ್ಷೇಮಾಭಿವೃದ್ಧಿ ಸಂಘದ ರಾಮಸ್ವಾಮಿ,  ಗುತ್ತಿಗೆದಾರ ಶಿವಕುಮಾರ್ . ಅಶೋಕ್ , ಸೇರಿದಂತೆ ಹಲವಾರು ಆಗಮಿಸಿ ನಮನ ಸಲ್ಲಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

ದಾವಣಗೆರೆಯಲ್ಲಿ ಸೆಪ್ಟೆಂಬರ್ 20 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ,ಸೆಪ್ಟೆಂಬರ್.19 : ನ್ಯಾಷನಲ್ ಹೈವೇನಲ್ಲಿ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ಇರುವುದರಿಂದ ಸೆಪ್ಟೆಂಬರ್ 20 ರಂದು ಬೆಳ್ಳಿಗ್ಗೆ 10 ರಿಂದ ಸಂಜೆ 5 ರವರೆಗೆ ಶಾಮನೂರು, ಬನಶಂಕರಿ ಬಡಾವಣೆ, ಶಿವ ಪಾರ್ವತಿ ಬಡಾವಣೆ, ಜೆ.ಹೆಚ್ ಪಟೇಲ್

error: Content is protected !!