Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸೆಪ್ಟೆಂಬರ್ 04ರಂದು ಬಿಎಸ್‌ಎಫ್ ನಿವೃತ್ತ ಯೋಧ ಡಿ.ತಿಪ್ಪೇಸ್ವಾಮಿಗೆ ಅಭಿನಂದನಾ ಸಮಾರಂಭ : ಯೋಧನ ಸ್ವಾಗತಕ್ಕೆ ಜಿ.ಆರ್.ಹಳ್ಳಿ ಗ್ರಾಮಸ್ಥರಿಂದ ಸಿದ್ಧತೆ

Facebook
Twitter
Telegram
WhatsApp

ಚಿತ್ರದುರ್ಗ: ಭಾರತೀಯ ಗಡಿಭದ್ರತಾ ಪಡೆಯಲ್ಲಿ (ಬಿಎಸ್‌ಎಫ್) ಸುಧೀರ್ಘ 22 ವರ್ಷ ದೇಶ ಸೇವೆ ಸಲ್ಲಿಸಿ ನಿವೃತ್ತರಾಗಿ ಸ್ವಗ್ರಾಮವಾದ ಚಿತ್ರದುರ್ಗ ತಾಲ್ಲೂಕಿನ ಗುಡ್ಡದ ರಂಗವ್ವನಹಳ್ಳಿ ಗ್ರಾಮಕ್ಕೆ ಸೆಪ್ಟೆಂಬರ್ 04ರಂದು ಬುಧವಾರ ಆಗಮಿಸುತ್ತಿರುವ ಡಿ.ತಿಪ್ಪೇಸ್ವಾಮಿ ಅವರ ವಿಜೃಂಭಣೆಯ ಸ್ವಾಗತಕ್ಕೆ ಗ್ರಾಮಸ್ಥರು ಸಿದ್ಧತೆ ಮಾಡಿಕೊಂಡಿದ್ದಾರೆ.


ಗ್ರಾಮದ ಶ್ರೀಮತಿ ದೊಡ್ಡಕ್ಕ ದಿ.ದಾಸಪ್ಪ ಅವರ ಅವರಿಗೆ ಮೂರು ಜನ ಮಕ್ಕಳು. ಅದರಲ್ಲಿ ಎರಡನೇ ಮಗ ಡಿ.ಜಯ್ಯಣ್ಣ ಅವರು 1993ರಲ್ಲಿ ಗಡಿಭದ್ರತಾ ಪಡೆಯಲ್ಲಿ 20 ವರ್ಷ 6 ತಿಂಗಳು ಸೇವೆ ಸಲ್ಲಿಸಿ ನಿವೃತ್ತರಾಗಿರುತ್ತಾರೆ. ಮೂರನೇ ಮಗ ಆದ ಡಿ.ತಿಪ್ಪೇಸ್ವಾಮಿ ಅವರು 2002ರಲ್ಲಿ ದೇಶಸೇವೆಗೆ ಸೇರಿ 22 ವರ್ಷ ಸೇವೆ ಸಲ್ಲಿಸಿದ್ದಾರೆ. ಡಿ.ತಿಪ್ಪೇಸ್ವಾಮಿ ಅವರು ಜಮ್ಮುಕಾಶ್ಮಿರ, ಛತ್ತಿಸ್ ಘಡ್, ಪಶ್ಚಿಮ ಬಂಗಾಳ, ತ್ರಿಪುರ ಸೇರಿದಂತೆ ವಿವಿಧ ರಾಜ್ಯದಲ್ಲಿಯೂ ಸೇವೆ ಸಲ್ಲಿಸಿದ್ದಾರೆ.
ದೇಶಸೇವೆ ಸಲ್ಲಿಸಿ ನಿವೃತ್ತರಾಗಿ ತಮ್ಮ ತಾಯ್ನಾಡಿಗೆ ಆಗಮಿಸುತ್ತರುವ ಡಿ.ತಿಪ್ಪೇಸ್ವಾಮಿ ಅವರಿಗೆ ಹೃದಯಪೂರ್ವ ಅಭಿನಂದನಾ ಸಮಾರಂಭವನ್ನು ಸೆಪ್ಟೆಂಬರ್ 04ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ತಾಲ್ಲೂಕಿನ ಗುಡ್ಡದರಂಗವ್ವನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.


ಅಭಿನಂದನಾ ಸಮಾರಂಭಕ್ಕೆ ವಿಶೇಷ ಆಹ್ವಾನಿತರಾಗಿ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಮುದ್ದರಾಜ, ಜಿ.ಆರ್.ಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರುದ್ರಮ್ಮ, ಉಪಾಧ್ಯಕ್ಷೆ ವಿ.ಟಿ.ರೂಪ ಮಂಜುನಾಥ್, ಸದಸ್ಯರಾದ ಬಿ.ಎನ್.ಜ್ಯೋತಿ, ಟಿ.ರುದ್ರಸ್ವಾಮಿ, ಮಾರುತಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆನಂದ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಟಿ.ಗುರುಮೂರ್ತಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಎನ್.ಬಿ.ಪ್ರಸನ್ನ, ಜಿ.ಆರ್.ಹಳ್ಳಿ ಗ್ರಾ.ಪಂ ಮಾಜಿ ಅಧ್ಯಕ್ಷ ಎ.ಕೆ.ಹೊನ್ನೂರಪ್ಪ, ಕೆಎಸ್‌ಎಫ್‌ಸಿ ಮ್ಯಾನೇಜರ್ ಆರ್.ಬಾಬು, ಚಿತ್ರದುರ್ಗ ಅರೆಸೇನ ಮಾಜಿ ಯೋಧರ ಸಂಘದ ಅಧ್ಯಕ್ಷ ಲಿಂಗರಾಜು, ಉಪಾಧ್ಯಕ್ಷ ಡಿ.ಜಯ್ಯಣ್ಣ, ಕಾರ್ಯದರ್ಶಿ ರವಿಶಂಕರ್, ಖಜಾಂಚಿ ಮಂಜುನಾಥ, ಮಾಜಿ ಸೈನಿಕರಾದ ಹಾಲಪ್ಪ ನಾಗಜ್ಜಿ, ಎನ್.ಬಿ.ಹನುಮಂತರೆಡ್ಡಿ, ಎನ್.ಜಯ್ಯಣ್ಣ, ವಿ.ಪಿ.ಸಂದೀಪ್ ಪಾಟೇಲ್, ಪಿ.ಆರ್.ಶ್ರೀನಿವಾಸರೆಡ್ಡಿ, ಜೋಡಿ ಚಿಕ್ಕೇನಹಳ್ಳಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಆರ್.ಸೋಮಣ್ಣ, ಮುಖ್ಯಶಿಕ್ಷಕಿ ನೇತ್ರಾವತಿ, ಜಿ.ಆರ್.ಹಳ್ಳಿಯ ಎಸ್‌ಡಿಎಂಸಿ ಅಧ್ಯಕ್ಷ ರಾಘು, ಉಪಾಧ್ಯಕ್ಷೆ ಶಿಲ್ಪಾ ಹಾಗೂ ಸದಸ್ಯರು ಭಾಗವಹಿಸುವರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!