Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನೇತ್ರದಾನ ಮಾನವತ್ವದ ಶ್ರೇಷ್ಠ ಸೇವೆ : ಡಾ. ರವೀಂದ್ರ

Facebook
Twitter
Telegram
WhatsApp

ಚಿತ್ರದುರ್ಗ: ಸೆ.01 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣಾ ವಿಭಾಗ, ಚಿತ್ರದುರ್ಗ ಇವರ ವತಿಯಿಂದ 39ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಕಾರ್ಯಕ್ರಮವನ್ನು ಜಿಲ್ಲಾದ್ಯಂತ 2024ರ ಆಗಸ್ಟ್ 25 ರಿಂದ ಸೆಪ್ಟೆಂಬರ್ 8 ರವರೆಗೆ ಹಮ್ಮಿಕೊಳ್ಳಲಾಗಿದೆ.

ನಗರದ ಜಿಲ್ಲಾ ಆರೋಗ್ಯಾಧಿಕಾರಿಗಳ ಕಛೇರಿಯಲ್ಲಿ ಇತ್ತೀಚೆಗೆ ನಡೆಸಲಾದ ಕಾರ್ಯಕ್ರಮದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ರವೀಂದ್ರ ಅವರು ಮಾತನಾಡಿ “ಒಬ್ಬ ವ್ಯಕ್ತಿಯು ದಾನ ಮಾಡಿದ ನೇತ್ರಗಳು ಇಬ್ಬರು ಕಾರ್ನಿಯಾ ಅಂಧರಿಗೆ ದೃಷ್ಟಿ ನೀಡುತ್ತವೆ. ಪ್ರತಿ ವರ್ಷ ಸರಾಸರಿ 5600 ನೇತ್ರದಾನಗಳಾಗುತ್ತಿವೆ. ಅಂದಾಜು 1.25 ಲಕ್ಷ ಜನರು ಕಾರ್ನಿಯಾ ಸಂಬಂಧಿತ ಅಂಧತ್ವದಿಂದ ಬಳಲುತ್ತಿದ್ದು, ದಾನಕ್ಕಾಗಿ ಕಾಯುತ್ತಿರುತ್ತಾರೆ. ವಿಶ್ವದಾದ್ಯಂತ ಧಾರ್ಮಿಕ ನಾಯಕರು ನೇತ್ರದಾನಕ್ಕೆ ಬೆಂಬಲ ಸೂಚಿಸಿದ್ದು, ನೇತ್ರದಾನ ಅತ್ಯುತ್ತಮ ಮಾನವೀಯ ಸೇವೆ” ಎಂದು ಅಭಿಪ್ರಾಯ ಪಟ್ಟರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಅಂದತ್ವ ನಿವಾರಣೆ ಅಧಿಕಾರಿಗಳಾದ ಡಾ. ನಾಗರಾಜ್, ನೇತ್ರ ತಜ್ಞರಾದ
ಡಾ. ಶಿಲ್ಪಾ ಹಾಗೂ ಡಾ. ಪ್ರದೀಪ್, ಅರೋಗ್ಯ ಶಿಕ್ಷಣ ಅಧಿಕಾರಿಗಳಾದ ಗೌರಮ್ಮ,, ಜಾನಕೀ ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!