Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಮೆರಿಕವನ್ನು ನಡುಗಿಸುತ್ತಿರುವ ಮಾರಣಾಂತಿಕ “ಟ್ರಿಪಲ್ ಇ” ವೈರಸ್

Facebook
Twitter
Telegram
WhatsApp

ಸುದ್ದಿಒನ್ | ಕೊರೊನಾ ವೈರಸ್‌ನಿಂದಾಗಿ ಇಡೀ ಜಗತ್ತು ಲಾಕ್‌ಡೌನ್‌ ಆಗಿದ್ದನ್ನು ನಾವು ನೋಡಿದ್ದೇವೆ. ನಂತರದ ದಿನಗಳಲ್ಲಿ ಅಂತಹ ಲಾಕ್‌ಡೌನ್ ವಿಧಿಸುವ ಸಂದರ್ಭ ಎದುರಾಗಿಲ್ಲ. ಆದರೆ ಸೊಳ್ಳೆಗಳ ಕಾಟ ಅಮೆರಿಕದ ಮಸಾಚುಸೆಟ್ಸ್ ರಾಜ್ಯವನ್ನೇ ನಡುಗಿಸುತ್ತಿದೆ. ಅಪರೂಪದ ಮತ್ತು ಮಾರಣಾಂತಿಕ ‘ಟ್ರಿಪಲ್ ಇ’ ವೈರಸ್ ರಾಜ್ಯವನ್ನು ಭಯಭೀತಗೊಳಿಸುತ್ತಿದೆ.

ವೈರಸ್ ಸೋಂಕಿಗೆ ಒಳಗಾದ ನ್ಯೂ ಹ್ಯಾಂಪ್‌ಶೈರ್ ನಿವಾಸಿಯೊಬ್ಬರು ಇತ್ತೀಚೆಗೆ ಸಾವನ್ನಪ್ಪಿದ್ದಾರೆ.
ಅಷ್ಟೇ ಅಲ್ಲದೇ 80 ವರ್ಷದ ಮತ್ತೊಬ್ಬ ವ್ಯಕ್ತಿ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿರುವುದು ಇದೀಗ ಬಾರಿ ಚರ್ಚೆಯ ವಿಷಯವಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಹೈ ಅಲರ್ಟ್ ಘೋಷಿಸಿದ್ದಾರೆ. ಅಲ್ಲಿನ 5 ಪಟ್ಟಣಗಳಲ್ಲಿ ಭಾಗಶಃ ಲಾಕ್‌ಡೌನ್ ಹೇರಲಾಗಿದೆ. ಜ್ವರ, ತಲೆನೋವು, ವಾಕರಿಕೆ, ವಾಂತಿ, ಅತಿಸಾರ, ಫಿಟ್ಸ್ ಮೊದಲಾದ ಲಕ್ಷಣಗಳು ಕಂಡುಬರುತ್ತಿವೆ.

ಸೊಳ್ಳೆ ಇಲ್ಲಿ ವಾಹಕವಾಗಿ ಕಾರ್ಯನಿರ್ವಹಿಸುತ್ತದೆ. ಸೊಳ್ಳೆ ಕಡಿತದಿಂದ ಹರಡುವ ವೈರಸ್ ವ್ಯಕ್ತಿಯನ್ನು ಸಾವಿನಂಚಿಗೆ ಕೊಂಡೊಯ್ಯುತ್ತಿದೆ. ಹೀಗಾಗಿ ಎಲ್ಲರೂ ಮುಂಜಾಗ್ರತೆ ವಹಿಸುವಂತೆ ಸ್ಥಳೀಯ ಆಡಳಿತ ಸೂಚನೆ ನೀಡಿದೆ. “ಟ್ರಿಪಲ್ ಇ ವೈರಸ್‌ಗೆ ಯಾವುದೇ ಚಿಕಿತ್ಸೆ ಇಲ್ಲ. ವೈರಸ್‌ನ ಇನ್ನೊಂದು ಹೆಸರು ಈಸ್ಟರ್ನ್ ಎಕ್ವೈನ್ ಎನ್ಸೆಫಾಲಿಟಿಸ್. ವೈರಸ್ ಸೋಂಕಿತರಲ್ಲಿ 33 ರಿಂದ 70 ಪ್ರತಿಶತದಷ್ಟು ಜನರು ಸಾಯುತ್ತಾರೆ ಎಂದು ಯುಎಸ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಸಿಡಿಸಿ ಎಚ್ಚರಿಸಿದೆ. ಈ ಸೋಂಕಿನಿಂದ ಬಳಲುತ್ತಿರುವವರು ನರಗಳ ಸಮಸ್ಯೆಗಳು ಎದುರಾಗುತ್ತಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!