Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಲಯಾಳಂನ ಹೇಮಾ ವರದಿ ರೀತಿಯಲ್ಲಿಯೇ ಸ್ಯಾಂಡಲ್ ವುಡ್ ನಲ್ಲೂ ಒಂದು ಸಮಿತಿ ರಚಿಸಿ : ಶೃತಿ ಹರಿಹರನ್

Facebook
Twitter
Telegram
WhatsApp

 

 

ಬೆಂಗಳೂರು: ಮಲಯಾಳಂ ಇಂಡಸ್ಟ್ರಿಯಲ್ಲಿಯೇ ಹೇಮಾ ಸಮಿತಿ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಮಲಯಾಳಂ ಚಿತ್ರರಂಗದಲ್ಲಿ ನಟಿಯರು ಎದುರಿಸುತಚತಿರುವ ಲೈಂಗಿಕ ಕಿರುಕುಳ ಹಾಗೂ ಶೋಷಣೆಗಳ ಬಗ್ಗೆ ಈ ವರದಿಯಲ್ಲಿ ಉಲ್ಲೇಖವಿದೆ. ಈ ವರದಿಯೂ 2019ರಲ್ಲಿಯೇ ಸರ್ಕಾರದ ಕೈ ಸೇರಿತ್ತು. ಆದರೆ ಈಗ ಒಂದೊಂದೇ ವಿಚಾರಗಳು ಬಹಿರಂಗವಾಗುತ್ತಿವೆ. ಈ ಸಂಬಂಧ ಇದೀಗ ನಟಿ ಶೃತಿ ಹರಿಹರನ್ ಮಾತನಾಡಿ, ಕನ್ನಡ ಚಿತ್ರರಂಗದಲ್ಲೂ ಇಂಥದ್ದೊಂದು ಸಮಿತಿ ರಚಿಸಲಿ ಎಂದಿದ್ದಾರೆ.

ನನಗೆ ಹೇಮಾ ಸಮಿತಿಯ ವರದಿ ಬಗ್ಗೆ ತುಂಬಾನೇ ಗೌರವ ಇದೆ. ಇಷ್ಟು ದಿನಗಳಿಂದ ಈ ಬಗ್ಗೆ ನಾವು ಇದನ್ನು ಮುಚ್ಚು ಮರೆಯಲ್ಲಿ ಮಾತನಾಡುತ್ತಿದ್ದೆವು. ಸೆಕ್ಷುವಲ್ ಫೇವರ್ ಅತಿಯಾಗಿದೆ ಎಂದು ಹೇಳುತ್ತಿದ್ದೆವು. ಈ ವಿಚಾರವನ್ನು ಆಪ್ತಬಳಗದಲ್ಲಿ ಕೆಲವರು ಜೋಕ್ ಕೂಡ ಮಾಡುತ್ತಿದ್ದರು. ಆದರೆ ಈ ವುಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದು ಹೆಮ್ಮೆಯ ವಿಚಾರವೇ ಸರಿ.

ಸಿನಿಮಾ ಕಲೆಗೆ ಸಂಬಂಧಿಸಿದ್ದು. ಅದರೊಳಗೆ ಇರುವ ಕೆಲ ಒಂದು ವಿಚಾರಗಳನ್ನು ಸ್ವಚ್ಚ ಮಾಡಲು ಇದು ಸರಿಯಾದ ಸಮಯ. ನಮ್ಮ ಮನೆಯನ್ನು ನಾವೂ ಸ್ವಚ್ಛವಾಗಿಟ್ಟುಕೊಳ್ಳಬೇಕು. ಸಮಂತಾ ಅವರು ಮಾತನಾಡುವಾಗ ತೆಲುಗು ಚಿತ್ರರಂಗದಲ್ಲೂ ಇಂಥದ್ದೊಂದು ಸಮಿತಿಯ ಅಗತ್ಯವಿದೆ ಎಂದು ಹೇಳಿದ್ದರು. ಹಾಗೇ ಕನ್ನಡದಲ್ಲಿಯೂ ಇಂಥ ಸಮಿತಿಗಳು ರಚನೆ ಆಗಬೇಕು ಎಂದಿದ್ದಾರೆ.

ನಟಿ ಶೃತಿ ಹರಿಹರನ್ ಈ ಮೊದಲು ಮೀಟೂ ಕೇಸ್ ಮೂಲಕ ಸಾಕಷ್ಟು ವಿರೋಧ ಅನುಭವಿಸಿದ್ದರು. ಅರ್ಜುನ್ ಸರ್ಜಾ ಅವರ ವಿರುದ್ಧ ಮೀಟೂ ಕೇಸ್ ದಾಖಲಿಸಿದ್ದರು. ಅದಾದ ಬಳಿಕ ಸಾಕಷ್ಟು ನಟಿಯರು ಮೀಟೂ ಕೇಸ್ ಬಗ್ಗೆ ಮಾತನಾಡಿದ್ದರು. ಶೃತಿ ಹರಿಹರನ್ ಈಗಲೂ ಅವರದ್ದೇ ಸ್ಟ್ಯಾಂಡ್ ನಲ್ಲಿ ನಿಂತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!