Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆಗಳ ಪರಿಶೀಲಿಸಿ ಸೂಕ್ತ ಕ್ರಮ: ಸಿದ್ದರಾಮಯ್ಯ

---Advertisement---

 

ಬೆಂಗಳೂರು, ಸೆ.4: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಬುಧವಾರ ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದೊಂದಿಗೆ ಅವರ ಬೇಡಿಕೆಗಳ ಕುರಿತು ಸಭೆ ನಡೆಸಿದರು.

ಶಿಕ್ಷಣ ಸಚಿವರು ಹಾಗೂ ಅಧಿಕಾರಿಗಳೊಂದಿಗೆ, ಕಾನೂನು ತೊಡಕುಗಳು ಹಾಗೂ ಇನ್ನಿತರ ವಿಷಯಗಳ ಬಗ್ಗೆ ಸಮಗ್ರವಾಗಿ ಸಮಾಲೋಚನೆ ನಡೆಸಿ, ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಸಭೆಯಲ್ಲಿ ಮಾತನಾಡಿದ ನಿಯೋಗದ ಪ್ರತಿನಿಧಿಗಳು 2017ರಲ್ಲಿ ವೃಂದ ಮತ್ತು ನೇಮಕಾತಿ ನಿಯಮಾವಳಿಗೆ ತಿದ್ದುಪಡಿ ಮಾಡಿದ ಬಳಿಕ ಸೇವಾ ನಿಯಮಗಳನ್ನು ಪೂರ್ವಾನ್ವಯವಾಗುವಂತೆ ಅನುಷ್ಠಾನಗೊಳಿಸಬಾರದು. ಪದವೀಧರರಾಗಿರುವ 40 ಸಾವಿರಕ್ಕೂ ಹೆಚ್ಚು ಇರುವ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ಆದೇಶ ಹೊರಡಿಸಬೇಕು. ನೇಮಕಾತಿ 7ನೇ ತರಗತಿವರೆಗೆ ಎಂದು ಹೇಳಿ ಈಗ 5ನೇ ತರಗತಿವರೆಗೆ ಎಂದು ಹಿಂಬಡ್ತಿ ನೀಡಲಾಗಿದೆ.
ಆಯಾ ಜಿಲ್ಲಾ ನೇಮಕಾತಿ ಸಮಿತಿಯ ಮಟ್ಟದಲ್ಲಿ ಮುಖ್ಯೋಪಾಧ್ಯಾಯ ಹುದ್ದೆಗಳಿಗೆ ಈ ಮೊದಲು ಮುಂಬಡ್ತಿ ನೀಡಲಾಗುತ್ತಿತ್ತು. ಅದನ್ನು ಕಳೆದ ಮೂರು ವರ್ಷಗಳಿಂದ ನಿಲ್ಲಿಸಲಾಗಿದ್ದು, ಇದನ್ನು ಮುಂದುವರೆಸಬೇಕು.
ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಯಲ್ಲಿ, ಮುಂಬಡ್ತಿ ಹುದ್ದೆಗಳನ್ನು ಶೇ.50ರಷ್ಟು ನಿಗದಿಪಡಿಸಬೇಕು. ಮುಂಬಡ್ತಿ ಸಂದರ್ಭದಲ್ಲಿ ಸೇವಾ ಜೇಷ್ಟತೆಯನ್ನು ಪರಿಗಣಿಸಬೇಕು ಎಂದು ಶಿಕ್ಷಕರ ಸಂಘದ ನಿಯೋಗ ಮನವಿ ಸಲ್ಲಿಸಿತು.
ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜು, ನಸೀರ್‌ ಅಹ್ಮದ್‌, ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ, ಸಾಹಿತಿ ಬರಗೂರು ರಾಮಚಂದ್ರಪ್ಪ, ನಿರಂಜನಾರಾಧ್ಯ, ಇಲಾಖಾ ಪ್ರದಾನ ಕಾರ್ಯದರ್ಶಿ ರಿತೇಶ್‌ ಕುಮಾರ್‌ ಸಿಂಗ್ ಮತ್ತಿತರರು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment