Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯಡಿಯೂರಪ್ಪ ಅವರ ಕನಸಿನ ಯೋಜನೆ ಹೆಣ್ಣುಮಕ್ಕಳ ಕೈ ಸೇರುವ ಸಮಯ..!

Facebook
Twitter
Telegram
WhatsApp

ಬೆಂಗಳೂರು: ಈ ಹಿಂದೆ ಬಿಎಸ್ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಭಾಗ್ಯಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದ್ದರು. ಹುಟ್ಟಿದ ಮಗುವಿನ ಹೆಸರಿಗೆ ಹಣ ಡೆಪಾಸಿಟ್ ಮಾಡಿಸುವ ಯೋಜನೆ. ಇದೀಗ ಆ ಯೋಜನೆ ಮೆಚ್ಯುರಿಟಿ ಆಗುವ ಸಮಯ ಬಂದಿದೆ. ಅರ್ಹ ಹೆಣ್ಣು ಮಕ್ಕಳಿಗೆ ಆ ಯೋಜನೆಯ ಹಣ ಕೈ ಸೇರಲಿದೆ. ಈ ಬಗ್ಗೆ ಯಡಿಯೂರಪ್ಪ ಅವರು ಟ್ವೀಟ್ ಕೂಡ ಮಾಡಿದ್ದಾರೆ.

‘ಕುಟುಂಬದಲ್ಲಿ ಮತ್ತು ಸಮಾಜದಲ್ಲಿ ಹೆಣ್ಣುಮಗುವಿನ ಸ್ಥಾನ ಹೆಚ್ಚಿಸಲು ಹಾಗೂ ಬಡತನದ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ ಹೆಣ್ಣುಮಕ್ಕಳ ಜನನವನ್ನು ಉತ್ತೇಜಿಸಲು 2006-07ನೇ ಸಾಲಿನಲ್ಲಿ, ದೇಶದಲ್ಲೇ ಮೊದಲ ಬಾರಿಗೆ, ಹೆಣ್ಣು ಮಕ್ಕಳ ರಕ್ಷಣೆಗಾಗಿ “ಭಾಗ್ಯಲಕ್ಷ್ಮಿ” ಎಂಬ ಹೊಸ ಯೋಜನೆಯನ್ನು ಜಾರಿಗೆ ತಂದದ್ದು ನನ್ನ ರಾಜಕೀಯ ಜೀವನದ ಒಂದು ಸಂತೃಪ್ತಿಯ ಮೈಲಿಗಲ್ಲು. ಈ ಮಹತ್ವದ, ದೂರದೃಷ್ಟಿ ಯೋಜನೆಯ ಆರಂಭಿಕ ವರ್ಷದಲ್ಲಿ ನೋಂದಾಯಿಸಿದ್ದ ಸುಮಾರು 2.30 ಲಕ್ಷ ಫಲಾನುಭವಿಗಳು ಶೀಘ್ರದಲ್ಲಿ ಪರಿಪಕ್ವ ಮೊತ್ತ ಪಡೆಯಲಿರುವುದು ಅತ್ಯಂತ ಸಂತಸದ ಸಂಗತಿ. ಲಕ್ಷಾಂತರ ಬಡ ಹೆಣ್ಣುಮಕ್ಕಳ ಜೀವನವನ್ನು ಬೆಳಗುವ ಈ ಸಾರ್ಥಕ ಯೋಜನೆಯನ್ನು ರಾಜ್ಯ ಸರ್ಕಾರ ಮುಂದುವರಿಸಿಕೊಂಡು ಹೋಗಲಿ, ಬಡ ಹೆಣ್ಣುಮಕ್ಕಳ ಆತ್ಮಸ್ಥೈರ್ಯವನ್ನು ಹೆಚ್ಚಿಸುವ ತನ್ನ ಕರ್ತವ್ಯ ನಿರ್ವಹಿಸಲಿ ಎಂದು ಈ ಸಂದರ್ಭದಲ್ಲಿ ಒತ್ತಾಯಿಸುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.

 

2006-2007ರಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಹೆಣ್ಣು ಮಕ್ಕಳ ಭವಿಷ್ಯದ ಹಿತ ದೃಷ್ಟಿಯಿಂದ ಈ ಯೋಜನೆಯನ್ನು ಜಾರಿಗೆ ತಂದಿದ್ದರು. ಇದೀಗ ಮೊದಲ ಹಂತದಲ್ಲಿ ನೋಂಣಿಯಾದವರಿಗೆ ಈಗ ಹಣ ಸಿಗಲಿದೆ. 2.30 ಲಕ್ಷ ಮಂದಿ ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ. ರಾಜ್ಯ ಸರ್ಕಾರವೂ ಈ ಯೋಜನೆಯನ್ನು ಅಂಚೆ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

ದಾವಣಗೆರೆಯಲ್ಲಿ ಸೆಪ್ಟೆಂಬರ್ 20 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ,ಸೆಪ್ಟೆಂಬರ್.19 : ನ್ಯಾಷನಲ್ ಹೈವೇನಲ್ಲಿ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ಇರುವುದರಿಂದ ಸೆಪ್ಟೆಂಬರ್ 20 ರಂದು ಬೆಳ್ಳಿಗ್ಗೆ 10 ರಿಂದ ಸಂಜೆ 5 ರವರೆಗೆ ಶಾಮನೂರು, ಬನಶಂಕರಿ ಬಡಾವಣೆ, ಶಿವ ಪಾರ್ವತಿ ಬಡಾವಣೆ, ಜೆ.ಹೆಚ್ ಪಟೇಲ್

error: Content is protected !!