Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿಕ್ಷಕರು ವೃತ್ತಿಯಲ್ಲಿ ಆದರ್ಶ, ಬದ್ಧತೆ ಹಾಗೂ ತಲ್ಲೀನತೆ ಅಳವಡಿಸಿಕೊಳ್ಳಿ : ಸಚಿವ ಡಿ.ಸುಧಾಕರ್

---Advertisement---

 

 

ಚಿತ್ರದುರ್ಗ. ಸೆ.05: ಶಿಕ್ಷಕರು ವೃತ್ತಿಯಲ್ಲಿ ಆದರ್ಶ, ಬದ್ಧತೆ ಹಾಗೂ ತಲ್ಲೀನತೆ ಅಳವಡಿಕೊಳ್ಳಬೇಕು ಎಂದು ಯೋಜನೆ ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸಲಹೆ ನೀಡಿದರು.

ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾಪಂಚಾತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ, ಗುರುವಾರ ನಗರದ ತರಾಸು ರಂಗಮAದಿರದಲ್ಲಿ ಆಯೋಜಿಸಲಾದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಕ ಸ್ಥಾನಕ್ಕೆ ಬೆಲೆ ಕಟ್ಟಲಾಗದು. ಸ್ವತಃ ನಾನು ಪದವಿ ಶಿಕ್ಷಣ ಪೂರೈಸಿದ್ದೇನೆ ಎಂದರೆ ಅದಕ್ಕೆ ಕಾರಣ ಚಿಕ್ಕಂದಿನಲ್ಲಿ ನನಗೆ ಪಾಠ ಹೇಳಿದ ಶಿಕ್ಷಕರು. ನಾನು ಜೀವನದಲ್ಲಿ ಶಿಸ್ತು, ಬದ್ಧತೆ ರೂಡಿಸಿಕೊಳ್ಳುವುದನ್ನು ಶಿಕ್ಷಕರು ಕಲಿಸಿದರು. ದೇಶ ಹಾಗೂ ರಾಜ್ಯದಲ್ಲಿ ಸರ್ಕಾರಗಳು ಸಾವಿರಾರು ಕೋಟಿ ಹಣವನ್ನು ಶಿಕ್ಷಣದ ಮೇಲೆ ಖರ್ಚು ಮಾಡುತ್ತಿವೆ.  ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು ಶಿಕ್ಷಕರ ಬೇಡಿಕೆಗಳಿಗೆ ತಕ್ಷಣ ಸ್ಪಂದಿಸುತ್ತಿದ್ದಾರೆ. ರಾಜ್ಯದಲ್ಲಿ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡಲಾಗಿದೆ. 2017ಕ್ಕಿಂತ ಮೊದಲು ಪ್ರಾಥಮಿಕ ಶಾಲೆಗಳಿಗೆ ನೇಮಕವಾದ ಶಿಕ್ಷಕರ ಬಡ್ತಿ ಸಮಸ್ಯೆ ಹಾಗೂ ಇತರೆ ಬೇಡಿಕೆಗಳಿಗೆ ಪರಿಹಾರ ದೊರಕಿಸಲು ಸಮಿತಿ ರಚಿಸುವ ಭರವಸೆ ನೀಡಿದ್ದಾರೆ ಎಂದು ಸಚಿವ ಡಿ.ಸುಧಾಕರ್ ಹೇಳಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...