Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಬಾಲ್ಯ ವಿವಾಹ ಪ್ರಕರಣ ದಾಖಲು

---Advertisement---



ಚಿತ್ರದುರ್ಗ. 05: ಚಳ್ಳಕೆರೆ ತಾಲ್ಲೂಕಿನ ಕೆರೆಹಿಂದಲಹಟ್ಟಿ ಗ್ರಾಮದ ಗಂಟೆ ಮಾರಮ್ಮನ ದೇವಸ್ಥಾನದಲ್ಲಿ ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ಚಿಕ್ಕಮ್ಮನಹಳ್ಳಿಯ ಬಾಬು.ಸಿ ವಿರುದ್ದ ಬಾಲ್ಯ ವಿವಾಹ ಪ್ರಕರಣ ದಾಖಲಿಸಲಾಗಿದೆ.

ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಗಮನಕ್ಕೆ ಬಾಲ್ಯ ವಿವಾಹದ ಕುರಿತು ಮಾಹಿತಿ ಬಂದಿತ್ತು. ಕೂಡಲೇ ಆಗಸ್ಟ್ 27 ರಂದು ತಳಕು ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ದ ಪೋಕ್ಸೋ ಹಾಗೂ ಬಾಲ್ಯವಿವಾಹ ನಿಷೇದ ಕಾಯ್ದೆ-2006ರ ಪ್ರಕಾರ ಚಳ್ಳಕೆರೆ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹಾಗೂ ತಳಕು ವೃತ್ತದ ಮಹಿಳಾ ಮೇಲ್ವಿಚಾರಕಿ ಎಫ್.ಐ.ಆರ್ ದಾಖಲಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment