Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿನಿಮಾ ರಂಗದಲ್ಲಿ ಮಾತ್ರವಲ್ಲ ರಾಜಕೀಯ ರಂಗದಲ್ಲೂ ಮೀಟೂ ಆತಂಕ : ರಚನೆಯಾಗುತ್ತಾ ಆಂತರಿಕ ಸಮಿತಿ..?

Facebook
Twitter
Telegram
WhatsApp

ಬೆಂಗಳೂರು: ಎಲ್ಲೆಡೆ ಸದ್ಯ ಚರ್ಚೆಯಾಗುತ್ತಿರುವುದು ಹೇಮಾ ಕಮಿಟಿ ವಿಚಾರ. ಕೇರಳದ ಚಿತ್ರರಂಗದಲ್ಲಿ ಹೇಮಾ ಕಮಿಟಿ ದೊಡ್ಡ ಅಲೆಯನ್ನೇ ಎಬ್ಬಿಸಿದೆ. ದೊಡ್ಡ ದೊಡ್ಡವರ ತಲೆ ದಂಡವೇ ನಡೆದು ಹೋಗುತ್ತಿದೆ. ಅಲ್ಲಿನ ವರದಿಯ ಪರಿಣಾಮ ಎಲ್ಲೆಡೆ ಜೋರಾಗಿದೆ. ನಮ್ಮ ಚಿತ್ರರಂಗದಲ್ಲೂ ಸಮಿತಿಯೊಂದು ಬೇಕು ಎಂದು ತೆಲುಗು, ಕನ್ನಡ ಇಂಡಸ್ಟ್ರಿ ಕೂಡ ಬೇಡಿಕೆ ಇಟ್ಟಿದೆ.

 

ಈಗಾಗಲೇ ಫೈರ್ ಎಂಬ ಕನ್ನಡ ಸಂಸ್ಥೆ ಮುಖ್ಯಮಂತ್ರಿಗಳಿಗೆ‌ ಮನವಿಯೊಂದನ್ನು ಸಲ್ಲಿಸಿದ್ದಾರೆ. ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಇದರ ನಡುವೆ ಇಂಥದ್ದೊಂದು ಸಮಿತಿ ರಾಜಕಾರಣಕ್ಕೂ ಅವಶ್ಯಕತೆ ಇದೆ ಎಂಬ ಕೂಗು ಕೇಳಿ ಬರುತ್ತಿದೆ. ರಾಜಕಾರಣದಲ್ಲೂ ಮಹಿಳೆಯರಿಗೆ ಲೈಂಗಿಕ ಕಿರುಕುಳ ಇದೆ ಎಂಬ ಆರೋಪ ಕೇಳಿ ಬಂದಿದೆ. ಬರೀ ಸಿನಿಮಾರಂಗವಲ್ಲ ರಾಜಕೀಯದಲ್ಲೂ ಮೀಟೂ ಅಲೆಯ ಬಿಸಿ ತಾಗಿದೆ.

ಬಿಜೆಪಿ ಮಹಿಳಾ‌ ಮೋರ್ಚಾದ ರಾಜ್ಯ ಘಟಕದ ಅಧ್ಯಕ್ಷೆ ಸಿ.ಮಂಜುಳಾ ಸಮಿತಿಗೆ ಆಗ್ರಹಿಸಿದ್ದಾರೆ. ಸಿನಿಮಾ ರಂಗದಲ್ಲಿ ಮಾತ್ರವಲ್ಲ, ರಾಜಕೀಯ ಪಕ್ಷಗಳಲ್ಲೂ ಆಂತರಿಕ ದೂರು ಸಮಿತಿಯನ್ನು ರಚಿಸಬೇಕು. ರಾಜಕೀಯಕ್ಕೆ ಬರುವ ಮಹಿಳೆಯರು ಲೈಂಗಿಕ ಶೋಷಣೆಗೆ ಒಳಗಾದರೆ, ಯಾವುದೇ ಮುಲಾಜಿಲ್ಲದೆ ಬಹಿರಂಗವಾಗಿ ವಿರೋಧಿಸಬೇಕು‌. ರಾಜಕೀಯ ಪಕ್ಷಗಳು ಬೆಳೆಯುತ್ತಾ ಹೋದಂತೆ, ರಾಜಕೀಯ ಪಕ್ಷಗಳಿಗೆ ಬರುವ ಜನಸಂಖ್ಯೆ ಕೂಡ ಹೆಚ್ಚಾಗುತ್ತಾ ಹೋಗುತ್ತದೆ. ಆಗ ಎಲ್ಲಾ ರೀತಿಯ ಜನರು ಬರುತ್ತಾರೆ. ಆಗ ಶೋಷಣೆಯಾದರೆ ಮಹಿಳೆಯರು ಪ್ರತಿರೋಧ ಒಡ್ಡಬೇಕು. ಇಲ್ಲವಾದರೆ ತಮಗೆ ತಾವೇ ಮೋಸ ಮಾಡಿಕೊಂಡಂತೆ ಆಗುತ್ತದೆ ಎಂದಿದ್ದಾರೆ. ಈ ಮೂಲಕ ರಾಜಕೀಯ ರಂಗಕ್ಕೂ ಸಮಿತಿ ರಚಿಸಲು ಒತ್ತಾಯ ಕೇಳಿ ಬಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!