Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೀಪಿಕಾ ಪಡುಕೋಣೆಗೆ ಹೆಣ್ಣು ಮಗು ಜನನ..!

Facebook
Twitter
Telegram
WhatsApp

 

ಬಾಲಿವುಡ್ ನಲ್ಲಿ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಈ ಸಂಭ್ರಮದ ಜೊತೆಗೆ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಮನೆಯಲ್ಲಿ ಡಬ್ಬಲ್ ಸಂತಸ ಹೆಚ್ಚಿದೆ. ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ಈ ಸ್ಟಾರ್ ಜೋಡಿಗೆ ಹಬ್ಬದ ದಿನವೇ ಸಂಭ್ರಮದ ಮಗುವನ್ನು ಬರ ಮಾಡಿಕೊಂಡಿದ್ದಾರೆ. ದೀಪಿಕಾ ಹಾಗೂ ರಣವೀರ್ ಸಿಂಗ್ ದಂಪತಿಗೆ ಹೆಣ್ಣು ಮಗು ಜನಿಸಿದೆ.

ಇಂದು ದೀಪಿಕಾ ಪಡುಕೋಣೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯ ತಾಯಿ ಮಗು ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಲಿವುಡ್ ನ ಸೆಲೆಬ್ರೆಟಿಗಳು ತಾಯಿ ಮಗುವಿಗಾಗಿ ಶುಭ ಹಾರೈಸಿದ್ದಾರೆ. ನಿನ್ನೆಯಷ್ಟೇ ಡೆಲಿವರಿ ನೋವಿನಿಂದ ಆಸ್ಪತ್ರೆಗೆ ಅಡ್ಮಿಟ್ ಆಗಿದ್ದರು. ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಗೌರಿ ಹಬ್ಬದ ಬೆನ್ನಲ್ಲೇ ರಣವೀರ್ ಸಿಂಗ್ ಹಾಗೂ ದೀಪಿಕಾ ಪುಟ್ಟ ಗೌರಿಯನ್ನು ಬರ ಮಾಡಿಕೊಂಡಿದ್ದಾರೆ.

ಮುಂಬೈನ ಪ್ರತಿಷ್ಠಿತ ಆಸ್ಪತ್ರೆ ಹೆಚ್ ಎನ್ ರಿಲಯನ್ಸ್ ನಲ್ಲಿ ದೀಪಿಕಾ ಮಗುವಿಗೆ ಜನ್ಮ ನೀಡಿದ್ದಾರೆ. ನಿನ್ನೆ ಸಂಜೆ ಏಕಾಏಕಿ ದೀಪಿಕಾ ಪಡುಕೋಣೆ ಈ ಆಸ್ಪತ್ರೆಗೆ ಭೇಟಿ ನೀಡಿದರು. ಅಲ್ಲಿಯೇ ಅಡ್ಮಿಟ್ ಕೂಡ ಆದರೂ. ಇದೆಲ್ಲವು ಅಭಿಮಾನಿಗಳ ಕಣ್ಣಿಗೂ ಬಿದ್ದಿತ್ತು. ಡೆಲಿವರಿಗಾಗಿಯೇ ದೀಪಿಕಾ ಬಂದಿದ್ದಾರೆ ಎನ್ನಲಾಗಿತ್ತು. ದೀಪಿಕಾಗೆ ಹೆಣ್ಣಾಗಬಹುದು ಅಂತ ಕೆಲವರು ಊಹೆ ಮಾಡಿದರೆ ಇನ್ನು ಕೆಲವರು ಗಂಡಾಗಬಹುದು ಎಂದು ಊಹೆ ಮಾಡಿದ್ದರು. ಇದಕ್ಕೂ ಮುನ್ನ ದೀಪಿಕಾ ಬಗ್ಗೆ ಒಂದಷ್ಟು ಗಾಸಿಪ್ ಸುದ್ದಿ ಹಬ್ಬಿತ್ತು. ದೀಪಿಕಾ ಪಡುಕೋಣೆ ಗರ್ಭಿಣಿಯೇ ಅಲ್ಲ ಎಂದಿದ್ದರು. ಅದಕ್ಕೆ ಫೋಟೋಶೂಟ್ ಮಾಡಿಸುವ ಮೂಲಕ ತಕ್ಕ ಉತ್ತರ ಕೂಡ ನೀಡಿದ್ದರು ನಟಿ. ಇದೀಗ ಸಂತಸದ ವಿಚಾರವನ್ನು ಹಂಚಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!