ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ ಅವರಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಇನ್ನು ಕೂಡ ಉಪಚುನಾವಣೆಯ ದಿನಾಂಕವೇ ನಿಗಧಿಯಾಗಿಲ್ಲ. ಆದರೆ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಸಿಪಿ ಯೋಗೀಶ್ಚರ್ ಮುಂದಿದ್ದಾರೆ. ಟಿಕೆಟ್ ನನಗೆ ಸಿಗುತ್ತೆ ಎಂಬ ಆತ್ಮವಿಶ್ವಾಸದಲ್ಲಿ ಇದ್ದಾರೆ. ಈ ಮುಂಚೆ ಕುಮಾರಸ್ವಾಮಿ ಅವರು ಕೂಡ ಇದಕ್ಕೆ ಒಪ್ಪಿದ್ದಾರೆ ಎಂದೇ ಹೇಳಿಕೆ ನೀಡಿದ್ದರು. ಆದರೆ ಈಗ ವಿಚಾರವೇ ಬೇರೆಯಾಗಿದೆ.
ಚನ್ನಪಟ್ಟಣ ಉಪಚುನಾವಣೆಯ ಟಿಕೆಟ್ ಸಿಪಿ ಯೋಗೀಶ್ವರ್ ಗೆ ಮಿಸ್ ಆಗುವ ಸಾಧ್ಯತೆ ಇದೆ ಎಂಬ ಮಾತು ಕೇಳಿ ಬರುತ್ತಿದೆ. ಒಂದು ವೇಳೆ ಚನ್ನಪಟ್ಟಣದ ಟಿಕೆಟ್ ಸಿಗದೆ ಹೋದಲ್ಲಿ ರಾಮನಗರದಿಂದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದರು. ಈ ವಿಚಾರ ಕುಮಾರಸ್ವಾಮಿ ಅವರ ಕಿವಿಗೆ ಬಿದ್ದಿದ್ದು, ಆಪ್ತರ ಬಳಿ ಹೇಳಿಕೊಂಡು ಗರಂ ಅಗಿದ್ದಾರೆ ಎನ್ನಲಾಗಿದೆ. ಯಾವುದೇ ಕಾರಣಕ್ಕೂ ರಾಮನಗರ ಹಾಗೂ ಚನ್ನಪಟ್ಟಣವನ್ನು ಜೆಡಿಎಸ್ ನಿಂದ ಬಿಡುವುದಕ್ಕೆ ಸಾಧ್ಯವೇ ಇಲ್ಲ ಎಂದಿದ್ದಾರಂತೆ.

ಸಿಪಿ ಯೋಗೀಶ್ವರ್ ಚನ್ನಪಟ್ಟಣ ಟಿಕೆಟ್ ಗಾಗಿ ಕೊನೆ ಗಳಿಗೆಯವರೆಗೂ ಪ್ರಯತ್ನ ಪಡುತ್ತಿದ್ದಾರೆ. ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರ ಬಳಿಯೂ ಲಾಭಿ ಮಾಡಿದ್ದಾರೆ. ಆದರೆ ಕುಮಾರಸ್ವಾಮಿ ನಿರ್ಧಾರದ ಮುಂದೆ ಯಾವ ಪ್ರಯೋಜನವೂ ಆಗುವುದಿಲ್ಲ ಎನಿಸುತ್ತಿದೆ. ಚನ್ನಪಟ್ಟಣ ಬೈ ಎಲೆಕ್ಷನ್ ನಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕೆ ಇಳಿಸಲಿದ್ದಾರೆ ಎಂಬ ಸುದ್ದಿಯೂ ಇದೆ. ಯಾಕಂದ್ರೆ ರಾಜಕೀಯ ಭವಿಷ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಎರಡು ಬಾರಿ ಸೋತಿದ್ದಾರೆ. ಬೈಎಲೆಕ್ಷನ್ ನಲ್ಲಾದರೂ ಗೆಲ್ಲುತ್ತಾರೆ ಎಂಬ ನಿರೀಕ್ಷೆ ಎನ್ನಲಾಗಿದೆ. ಇತ್ತ ಡಿಕೆ ಬ್ರದರ್ಸ್ ಕೂಡ ಚನ್ನಪಟ್ಟಣ ಬೈ ಎಲೆಕ್ಷನ್ ಅನ್ನು ಪ್ರತಿಷ್ಠೆಯಾಗಿಯೇ ತೆಗೆದುಕೊಂಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








