Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಗಣೇಶ ಚತುರ್ಥಿ : ಗಮನ ಸೆಳೆದ ವೈವಿಧ್ಯಮಯ ಮೂರ್ತಿಗಳು

Facebook
Twitter
Telegram
WhatsApp

 

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 09 : ವಿಘ್ನಗಳ ನಿವಾರಕ ವಿನಾಯಕ ಚತುರ್ಥಿ ಪ್ರಯುಕ್ತ ನಗರದ ವಿವಿಧೆಡೆ ಬಗೆ ಬಗೆಯ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಶ್ರದ್ದಾಭಕ್ತಿಯಿಂದ ಪೂಜೆ ಸಲ್ಲಿಸಲಾಗುತ್ತಿದೆ.

ಬಸವೇಶ್ವರ ನಗರದ ಪೊಲೀಸ್ ಕ್ವಾರ್ಟರ್ಸ್ ನಲ್ಲಿ ವಸತಿಗೃಹಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದ್ದು, ಇಲ್ಲಿನ ಎಲ್ಲಾ ವಸತಿಗೃಹಗಳ ನಿವಾಸಿಗಳು ಒಂದೇ ಕುಟುಂಬದವರಂತೆ ಒಂದುಗೂಡಿ ಪ್ರತಿವರ್ಷವೂ ಗಣೇಶ ಚತುರ್ಥಿ ಹಬ್ಬವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ವಿಶೇಷವಾಗಿ ಈ ಹಬ್ಬದ ಸಂದರ್ಭದಲ್ಲಿ ಮಕ್ಕಳು ಅತ್ಯಂತ ಸಡಗರ ಸಂಭ್ರಮದಿಂದ ಈ ಹಬ್ಬವನ್ನು ಆಚರಿಸುವುದು ಇಲ್ಲಿನ ವಿಶೇಷ.


ಜೋಗಿಮಟ್ಟಿ ರಸ್ತೆಯಲ್ಲಿರುವ ಫ್ರೆಂಡ್ಸ್ ಗಣಪತಿ ಒಂದು ಕೈಯಲ್ಲಿ ಚಕ್ರ ಹಾಗೂ ಮತ್ತೊಂದು ಕೈಯಲ್ಲಿ ಶಂಖು ಹಿಡಿದು ಭಕ್ತರ ಗಮನ ಸೆಳೆಯುತ್ತಿದೆ. ಕರುವಿನಕಟ್ಟೆ ವೃತ್ತದಲ್ಲಿ ಮಹಾರಾಜ್ ಗಣಪ ಭಕ್ತರನ್ನು ಆಕರ್ಷಿಸುತ್ತಿದೆ. ಹೊಳಲ್ಕೆರೆ ರಸ್ತೆಯಲ್ಲಿ ಸ್ನೇಹ ಜೀವಿ ಬಳಗದಿಂದ ಪ್ರತಿಷ್ಠಾಪನೆಗೊಂಡಿರುವ ಗಣಪತಿ ಕೈಯಲ್ಲಿ ಕತ್ತಿ ಹಿಡಿದು ರಾರಾಜಿಸುತ್ತಿದೆ. ಮತ್ತೊಂದು ಗಣಪ ತಲೆಗೆ ಪೇಟ ಸುತ್ತಿಕೊಂಡು ವಿರಾಜಮಾನವಾಗಿರುವುದು ಮತ್ತೊಂದು ವಿಶೇಷ.


ನಗರದೆಲ್ಲೆಡೆ ಅಲ್ಲಲ್ಲಿ ಪ್ರತಿಷ್ಟಾಪಿಸಲಾಗಿರುವ ಗಣೇಶ ಮೂರ್ತಿಗೆ ದಿನವೂ ಒಂದೊಂದು ಬಗೆಯ ಪ್ರಸಾದದ ನೈವೇದ್ಯವಿರಿಸಿ ಪೂಜಿಸಲಾಗುತ್ತಿದೆ.

ವಿಶ್ವಹಿಂದೂ ಪರಿಷತ್, ಭಜರಂಗದಳದ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ಗರುಡಾವಳಿ ಗಣಪನನ್ನು ಕಣ್ತುಂಬಿಕೊಳ್ಳಲು ದಿನವೂ ಬೆಳಗಿನಿಂದ ಸಂಜೆಯತನಕ ಸಾವಿರಾರು ಭಕ್ತರು ಧಾವಿಸುತ್ತಿದ್ದಾರೆ. ಅಲ್ಲಲ್ಲಿ ಭಜನೆ, ಸುಗಮ ಸಂಗೀತ, ಜಾನಪದ ನೃತ್ಯಗಳು ಮೇಳೈಸುತ್ತಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!