Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಡೆಗೂ ಮಣಿದ ಸರ್ಕಾರ : ಪಿಎಸ್ಐ ಪರೀಕ್ಷೆ ಮುಂದೂಡಿಕೆ..!

Facebook
Twitter
Telegram
WhatsApp

 

ಬೆಂಗಳೂರು: ಯುಪಿಎಸ್ಸಿ ಪರೀಕ್ಷೆಯ ದಿನವೇ ಪಿಎಸ್ಐ ಪರೀಕ್ಷೆಯನ್ನು ನಿಗದಿ ಮಾಡಲಾಗಿತ್ತು. ಇದರಿಂದ ಅಭ್ಯರ್ಥಿಗಳಿಗೆ ಕಷ್ಟವಾಗುತ್ತೆ ಎಂದು ಸರ್ಕಾರಕ್ಕೆ ಸಾಕಷ್ಟು ಬಾರಿ ಮನವಿ ಮಾಡಲಾಗಿತ್ತು. ಆದರೆ ಪರೀಕ್ಷೆ ಮುಂದೂಡುವ ಪ್ರಮೇಯವೇ ಇಲ್ಲ ಎಂದು ಸರ್ಕಾರ ಹೇಳುತ್ತಲೇ ಬಂದಿತ್ತು. ನಿಗಧಿತ ಸಮಯಕ್ಕೇನೆ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಿದ್ದರು. ಆದರೆ ಈಗ ಅಭ್ಯರ್ಥಿಗಳ ಮನವಿಗೆ ಸರ್ಕಾರ ಮಣಿದಿದೆ. ಪರೀಕ್ಷೆಯ ದಿನಾಂಕವನ್ನು ಮುಂದೂಡಿದೆ. ಈ ಬಗ್ಗೆ ಗೃಹ ಸಚುವ ಜಿ.ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಪಿಎಸ್ಐ ಪರೀಕ್ಷೆ ಮುಂದೂಡುವ ವಿಚಾರವಾಗಿ ಮಾತನಾಡಿದ ಪರಮೇಶ್ವರ್ ಅವರು, ಒಂದು ಶನಿವಾರ ಸ್ಲಾಟ್ ನೀಡುವಂತೆ ಮನವಿ ಮಾಡಲಾಗಿದೆ. ಪಿಎಸ್ಐ ಪರೀಕ್ಷೆ 22ಕ್ಕೆ ನಿಗಧಿಯಾಗಿತ್ತು. ಆದರೆ ಪರೀಕ್ಷೆಯನ್ನು ಮುಂದೂಡುವಂತೆ ಮನವಿ ಮಾಡಲಾಗಿತ್ತು.

ಯುಪಿಎಸ್ಸಿ ಎಕ್ಸಾಂ ಕೂಡ ಅದೇ ದಿನ ನಡೆಯುತ್ತಿದೆ. ಹೀಗಾಗಿ ಮುಂದೂಡುವಂತೆ ಮನವಿ‌ ಮಾಡಿದ್ದರು. ಬಿಜೆಪಿಯ ಅಶ್ವತ್ಥ್ ನಾರಾಯಣ್ ಅವರು ಕೂಡ ಮನವಿ ಮಾಡಿದ್ದರು. KEA ಯವರು ಕೂಡ ಡಿಸೆಂಬರ್ ತನಕ ಯಾವುದೇ ಸ್ಲಾಟ್ ಇಲ್ಲ ಎಂದಿದ್ದರು. ಈ ವಿಚಾರವಾಗಿ ಶಿಕ್ಷಣ ಅಚಿವ ಮಧು ಬಂಗಾರಪ್ಪ ಬಳಿಯೂ ಮಾತನಾಡಿದೆ. ಒಂದು ಶನಿವಾರ ಸ್ಲಾಟ್ ನೀಡಿವಂತೆ ಮನವಿ ಮಾಡಲಾಗಿದೆ. ಸದ್ಯಕ್ಕೆ 402 ಹುದ್ದೆಗಳಿಗೆ ಪರೀಕ್ಷೆ ನಡೆಯುತ್ತಿದೆ. ಇದೇ ತಿಂಗಳ 28ಕ್ಕೆ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ.

ಪರೀಕ್ಷೆಯನ್ನು ಅದೇ ಸಮಯಕ್ಕೆ‌ ಮಾಡುವುದು ಬೇಡ ಎಂದು ಅಭ್ಯರ್ಥಿಗಳು ಸಾಕಷ್ಟು ಮನವಿ ಮಾಡಿದ್ದರು. ಇದೀಗ ಪರೀಕ್ಷೆ ಮುಂದೂಡಿಕೆಯಾಗಿದ್ದು, ಅಭ್ಯರ್ಥಿಗಳು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

40% ಕಮಿಷನ್ ಆರೋಪ ಮಾಡಿದ್ದ ಕೆಂಪಣ್ಣ ನಿಧನ..!

  ಬಿಜೆಪಿ ಸರ್ಕಾರದ ವಿರುದ್ಧ 40% ಆರೋಪ ಮಾಡಿದ್ದ, ಗುತ್ತಿಗೆದಾರ ಸಂಘ್ ಅಧ್ಯಕ್ಷ ಡಿ ಕೆಂಪಣ್ಣ ಇಂದು ನಿಧನರಾಗಿದ್ದಾರೆ. ಇವರಿಗೆ 84 ವರ್ಷ ವಯಸ್ದಾಗಿತ್ತು. ಹೃದಯಘಾತದಿಂದಾಗಿ ಇಂದು ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ಜ್ಯೋತಿಪುರ ನಿವಾಸದಲ್ಲಿಯೇ

ಮುನಿರತ್ನ ವಿರುದ್ಧ ರಾಮನಗರ ವ್ಯಾಪ್ತಿಯಲ್ಲಿ ದಾಖಲಾಯ್ತು ಅತ್ಯಾಚಾರ ಪ್ರಕರಣ..!

ಬೆಂಗಳೂರು: ದಲಿತ ಹಾಗೂ ಒಕ್ಕಲಿಗ ಸಮುದಾಯದವರಿಗೆ ಕೆಟ್ಟದಾಗಿ ಮಾತನಾಡಿ ಜೈಲು ಸೇರಿರುವ ಮುನಿರತ್ನ ಅವರಿಗೆ ಈಗಾಗಲೇ ಆ ಎರಡು ಸಮುದಾಯಗಳ ವಿರೋಧ ವ್ಯಕ್ತವಾಗಿದೆ. ಜೊತೆಗೆ ಮುನಿರತ್ನ ವಿರುದ್ಧ ಪ್ರತಿಭಟನೆಗಳು ಎದುರಾಗಿವೆ. ಇದೀಗ ಮುನಿರತ್ನ ವಿರುದ್ಧ

ಚಿತ್ರದುರ್ಗ ಜಿಲ್ಲಾ ದಲಿತ ಸಾಹಿತ್ಯ ಪರಿಷತ್ ಘಟಕದ ಪದಾಧಿಕಾರಿಗಳ ಆಯ್ಕೆ

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 19 : ದಲಿತ ಸಾಹಿತ್ಯ ಪರಿಷತ್ ಚಿತ್ರದುರ್ಗ ಜಿಲ್ಲಾ ಘಟಕದ ಪದಾಧಿಕಾರಿಗಳನ್ನು ಬುಧವಾರ ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ಟಿ.ಶಿವಮೂರ್ತಿ ಸಾಹಿತಿಗಳು ಕೋಡಿಹಳ್ಳಿ, ಉಪಾಧ್ಯಕ್ಷರಾಗಿ ಪ್ರೊ.ಲಿಂಗಪ್ಪ, ಹಿರಿಯ ಸಾಹಿತಿಗಳು, ಕಾರ್ಯದರ್ಶಿಗಳಾಗಿ ಪರಶುರಾಮ್.ಎಂ

error: Content is protected !!