Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗಣಪತಿ ಬಿಡುವ ವೇಳೆ ಗಲಭೆ : ಈಗ ನಾಗಮಂಗಲ ಸ್ಥಿತಿ ಹೇಗಿದೆ..?

Facebook
Twitter
Telegram
WhatsApp

 

ಮಂಡ್ಯ: ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಕಳೆದ ರಾತ್ರಿ ಗಣಪತಿ ವಿಸರ್ಜನೆ ವೇಳೆ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಗುಂಪು ಗಲಭೆ ನಡೆದಿದೆ. ಕೆಲ ಮುಸ್ಲಿಂ ಸಮುದಾಯದವರು ಗಣಪತಿ ಮೂರ್ತಿ ಮೇಲೆ ಕಲ್ಲು ಹಾಗೂ ಚಪ್ಪಲಿ ತೂರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದೇ ವೇಳೆ ಕೆಲ ಅಂಗಡಿಗಳಿಗೂ ಬೆಂಕಿ ಇಟ್ಟಿದ್ದಾರೆ.

ಬುಧವಾರ ಸಂಜೆ 6.30ರ ಸುಮಾರಿಗೆ ನಾಗಮಂಗಲ ಪಟ್ಟಣದ ಬದರಿಕೊಪ್ಪಲಿನಿಂದ ಗಣೇಶ ವಿಸರ್ಜನಾ ಮೆರವಣಿಗೆ ಹೊರಟಿತ್ತು. ಮಂಡ್ಯ ಸರ್ಕಲ್ ಮಾರ್ಗವಾಗಿ ಪಟಾಕಿ ಸಿಡಿಸುತ್ತಾ, ಡೊಳ್ಳು, ತಮಟೆ, ಡಿಜೆ ಸೌಂಡ್ ನೊಂದಿಗೆ ಗಣೇಶನ ಮೂರ್ತಿ ವಿಸರ್ಜನಾ ಮೆರವಣಿಗೆ ಹೊರಟಿತ್ತು. ಅಲ್ಲಿಂದ ಯಾ ಅಲ್ಲಾ ಮಸೀದಿ ಹಾಗೂ ದರ್ಗಾ ಮುಂಭಾಗದ ರಸ್ತೆಯತ್ತ ಮೆರವಣಿಗೆ ಸಾಗುತ್ತಿತ್ತು. ಈ ವೇಳೆ ಹಿಂದೂ ಕಾರ್ಯಕರ್ತರು ಜೈಶ್ರೀರಾಮ್ ಘೊಇಷಣೆಯನ್ನು ಕೂಗಿದ್ದಾರೆ. ಇದೇ ವೇಳೆ ಮಸೀದಿಯೊಳಗಿದ್ದ ಮುಸ್ಲಿಂ ಯುವಕರು ಅಲ್ಲಾ ಹು ಅಕ್ಬರ್ ಅಂತ ಜೋರಾಗಿ ಕೂಗಿದ್ದಾರೆ ಎನ್ನಲಾಗಿದೆ. ಇದರಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಕಲ್ಲು ತೂರಾಟ ಕೂಡ ನಡೆದಿದೆ. ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಗಣೇಶ‌ ಮೂರ್ತಿಯನ್ನು ಪೊಲೀಸ್ ಠಾಣೆಯ ಮುಂದೆಯೇ ಇರಿಸಿ, ಪ್ರತಿಭಟನೆ ನಡೆಸಿದ್ದಾರೆ.

ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಮಾತನಾಡಿ, ಘಟನೆಯಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಈಗಾಗಲೇ 52 ಮಂದಿಯನ್ನು ಬಂಧಿಸಲಾಗಿದೆ. ಅವಶ್ಯಕತೆ ಬಿದ್ರೆ ನಾನು ನಾಗಮಂಗಲಕ್ಕೆ ಹೋಗುತ್ತೇನೆ. ಪೊಲೀಸರು ಹತೋಟಿಗೆ ತಂದಿದ್ದಾರೆ. ಪ್ರಾಣಹಾನಿಯಂತ ಸಮಸ್ಯೆಗಳು ಆಗಿಲ್ಲ. ಇದರಲ್ಲಿ ರಾಜಕೀಯ ಮಾಡಬೇಡಿ ಎಂದು ಮನವಿ ಮಾಡುತ್ತೇನೆ. ಘಟನೆ ಹೆಚ್ಚಾಗದ ರೀತಿಯಲ್ಲಿ ಏನಾದರೂ ಸಲಹೆ ಕೊಡಿ ಎಂದು ಕೇಳಿದ್ದಾರೆ. ಸದ್ಯ ನಾಗಮಂಗಲದ ಪರಿಸ್ಥಿತಿ ಹತೋಟಿಯಲ್ಲಿದ್ದು, ಸೆಪ್ಟೆಂಬರ್ 14ರವರೆಗೂ 144 ಸೆಕ್ಷನ್ ಜಾರಿಯಲ್ಲಿರುತ್ತದೆ.

 

ಗಣಪರಿ ಬಿಡುವ ವೇಳೆ ಗಲಭೆ : ಈಗ ನಾಗಮಂಗಲ ಸ್ಥಿತಿ ಹೇಗಿದೆ..?

ಮಂಡ್ಯ: ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಕಳೆದ ರಾತ್ರಿ ಗಣಪತಿ ವಿಸರ್ಜನೆ ವೇಳೆ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಗುಂಪು ಗಲಭೆ ನಡೆದಿದೆ. ಕೆಲ ಮುಸ್ಲಿಂ ಸಮುದಾಯದವರು ಗಣಪತಿ ಮೂರ್ತಿ ಮೇಲೆ ಕಲ್ಲು ಹಾಗೂ ಚಪ್ಪಲಿ ತೂರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದೇ ವೇಳೆ ಕೆಲ ಅಂಗಡಿಗಳಿಗೂ ಬೆಂಕಿ ಇಟ್ಟಿದ್ದಾರೆ.

ಬುಧವಾರ ಸಂಜೆ 6.30ರ ಸುಮಾರಿಗೆ ನಾಗಮಂಗಲ ಪಟ್ಟಣದ ಬದರಿಕೊಪ್ಪಲಿನಿಂದ ಗಣೇಶ ವಿಸರ್ಜನಾ ಮೆರವಣಿಗೆ ಹೊರಟಿತ್ತು. ಮಂಡ್ಯ ಸರ್ಕಲ್ ಮಾರ್ಗವಾಗಿ ಪಟಾಕಿ ಸಿಡಿಸುತ್ತಾ, ಡೊಳ್ಳು, ತಮಟೆ, ಡಿಜೆ ಸೌಂಡ್ ನೊಂದಿಗೆ ಗಣೇಶನ ಮೂರ್ತಿ ವಿಸರ್ಜನಾ ಮೆರವಣಿಗೆ ಹೊರಟಿತ್ತು. ಅಲ್ಲಿಂದ ಯಾ ಅಲ್ಲಾ ಮಸೀದಿ ಹಾಗೂ ದರ್ಗಾ ಮುಂಭಾಗದ ರಸ್ತೆಯತ್ತ ಮೆರವಣಿಗೆ ಸಾಗುತ್ತಿತ್ತು. ಈ ವೇಳೆ ಹಿಂದೂ ಕಾರ್ಯಕರ್ತರು ಜೈಶ್ರೀರಾಮ್ ಘೊಇಷಣೆಯನ್ನು ಕೂಗಿದ್ದಾರೆ. ಇದೇ ವೇಳೆ ಮಸೀದಿಯೊಳಗಿದ್ದ ಮುಸ್ಲಿಂ ಯುವಕರು ಅಲ್ಲಾ ಹು ಅಕ್ಬರ್ ಅಂತ ಜೋರಾಗಿ ಕೂಗಿದ್ದಾರೆ ಎನ್ನಲಾಗಿದೆ. ಇದರಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಕಲ್ಲು ತೂರಾಟ ಕೂಡ ನಡೆದಿದೆ. ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಗಣೇಶ‌ ಮೂರ್ತಿಯನ್ನು ಪೊಲೀಸ್ ಠಾಣೆಯ ಮುಂದೆಯೇ ಇರಿಸಿ, ಪ್ರತಿಭಟನೆ ನಡೆಸಿದ್ದಾರೆ.

ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಮಾತನಾಡಿ, ಘಟನೆಯಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಈಗಾಗಲೇ 52 ಮಂದಿಯನ್ನು ಬಂಧಿಸಲಾಗಿದೆ. ಅವಶ್ಯಕತೆ ಬಿದ್ರೆ ನಾನು ನಾಗಮಂಗಲಕ್ಕೆ ಹೋಗುತ್ತೇನೆ. ಪೊಲೀಸರು ಹತೋಟಿಗೆ ತಂದಿದ್ದಾರೆ. ಪ್ರಾಣಹಾನಿಯಂತ ಸಮಸ್ಯೆಗಳು ಆಗಿಲ್ಲ. ಇದರಲ್ಲಿ ರಾಜಕೀಯ ಮಾಡಬೇಡಿ ಎಂದು ಮನವಿ ಮಾಡುತ್ತೇನೆ. ಘಟನೆ ಹೆಚ್ಚಾಗದ ರೀತಿಯಲ್ಲಿ ಏನಾದರೂ ಸಲಹೆ ಕೊಡಿ ಎಂದು ಕೇಳಿದ್ದಾರೆ. ಸದ್ಯ ನಾಗಮಂಗಲದ ಪರಿಸ್ಥಿತಿ ಹತೋಟಿಯಲ್ಲಿದ್ದು, ಸೆಪ್ಟೆಂಬರ್ 14ರವರೆಗೂ 144 ಸೆಕ್ಷನ್ ಜಾರಿಯಲ್ಲಿರುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

40% ಕಮಿಷನ್ ಆರೋಪ ಮಾಡಿದ್ದ ಕೆಂಪಣ್ಣ ನಿಧನ..!

  ಬಿಜೆಪಿ ಸರ್ಕಾರದ ವಿರುದ್ಧ 40% ಆರೋಪ ಮಾಡಿದ್ದ, ಗುತ್ತಿಗೆದಾರ ಸಂಘ್ ಅಧ್ಯಕ್ಷ ಡಿ ಕೆಂಪಣ್ಣ ಇಂದು ನಿಧನರಾಗಿದ್ದಾರೆ. ಇವರಿಗೆ 84 ವರ್ಷ ವಯಸ್ದಾಗಿತ್ತು. ಹೃದಯಘಾತದಿಂದಾಗಿ ಇಂದು ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ಜ್ಯೋತಿಪುರ ನಿವಾಸದಲ್ಲಿಯೇ

ಮುನಿರತ್ನ ವಿರುದ್ಧ ರಾಮನಗರ ವ್ಯಾಪ್ತಿಯಲ್ಲಿ ದಾಖಲಾಯ್ತು ಅತ್ಯಾಚಾರ ಪ್ರಕರಣ..!

ಬೆಂಗಳೂರು: ದಲಿತ ಹಾಗೂ ಒಕ್ಕಲಿಗ ಸಮುದಾಯದವರಿಗೆ ಕೆಟ್ಟದಾಗಿ ಮಾತನಾಡಿ ಜೈಲು ಸೇರಿರುವ ಮುನಿರತ್ನ ಅವರಿಗೆ ಈಗಾಗಲೇ ಆ ಎರಡು ಸಮುದಾಯಗಳ ವಿರೋಧ ವ್ಯಕ್ತವಾಗಿದೆ. ಜೊತೆಗೆ ಮುನಿರತ್ನ ವಿರುದ್ಧ ಪ್ರತಿಭಟನೆಗಳು ಎದುರಾಗಿವೆ. ಇದೀಗ ಮುನಿರತ್ನ ವಿರುದ್ಧ

ಚಿತ್ರದುರ್ಗ ಜಿಲ್ಲಾ ದಲಿತ ಸಾಹಿತ್ಯ ಪರಿಷತ್ ಘಟಕದ ಪದಾಧಿಕಾರಿಗಳ ಆಯ್ಕೆ

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 19 : ದಲಿತ ಸಾಹಿತ್ಯ ಪರಿಷತ್ ಚಿತ್ರದುರ್ಗ ಜಿಲ್ಲಾ ಘಟಕದ ಪದಾಧಿಕಾರಿಗಳನ್ನು ಬುಧವಾರ ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ಟಿ.ಶಿವಮೂರ್ತಿ ಸಾಹಿತಿಗಳು ಕೋಡಿಹಳ್ಳಿ, ಉಪಾಧ್ಯಕ್ಷರಾಗಿ ಪ್ರೊ.ಲಿಂಗಪ್ಪ, ಹಿರಿಯ ಸಾಹಿತಿಗಳು, ಕಾರ್ಯದರ್ಶಿಗಳಾಗಿ ಪರಶುರಾಮ್.ಎಂ

error: Content is protected !!