ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 12 : ಪಂಚಾಚಾರ್ಯ ಕಲ್ಯಾಣ ಮಂಟಪದ ಪಕ್ಕದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾ ಗಣಪತಿಯನ್ನು ವೀಕ್ಷಿಸಿ ಭಾನುಪ್ರಿಯ, ಲೀಲಾ ಜೊತೆ ಹೋಗುತ್ತಿದ್ದ ಲೈಂಗಿಕ ಅಲ್ಪಸಂಖ್ಯಾತೆ ಪ್ರೀತಿ ಮೇಲೆ ನಾಲ್ವರು ಮಂಗಳಮುಖಿಯರು ಹಲ್ಲೆ ನಡೆಸಿದ್ದು, ಬಡಾವಣೆ ಪೊಲೀಸ್ ಠಾಣೆಯಲ್ಲಿ ಸೆ.11 ರಂದು ಎಫ್.ಐ.ಆರ್.ದಾಖಲಾಗಿದೆ.
ಹಳೆ ದ್ವೇಷದಿಂದ ದೀಕ್ಷ, ಮೋಕ್ಷ, ಸ್ವೀಟಿ, ಶಿಲ್ಪ ಇವರುಗಳು ಮಂಗಳವಾರ ರಾತ್ರಿ ಸುಮಾರು 9-30 ರ ಸಮಯದಲ್ಲಿ ಮನಸೋ ಇಚ್ಚೆ ಎಳೆದಾಡಿ ಏಕಾಏಕಿ ಮುಖ, ದೇಹದ ಇನ್ನಿತರೆ ಕಡೆ ಹಲ್ಲೆ ನಡೆಸಿದಾಗ ನನ್ನ ಜೊತೆಯಿದ್ದ ಭಾನುಪ್ರಿಯ, ಲೀಲಾ ಇವರುಗಳು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದರು. ಅಕ್ರಮವಾಗಿ ನನ್ನನ್ನು ಥಳಿಸಿರುವ ನಾಲ್ವರು ಲೈಂಗಿಕ ಅಲ್ಪಸಂಖ್ಯಾತರನ್ನು ಬಂಧಿಸಿ ಕಾನೂನು ರೀತಿ ಶಿಕ್ಷೆಗೊಳಪಡಿಸಿ ನ್ಯಾಯ ದೊರಕಿಸುವಂತೆ ಪ್ರೀತಿ ಟಿ.ಜೆ. ದೂರಿನಲ್ಲಿ ಮನವಿ ಮಾಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















