Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯೋಗೀಶ್ ಸಹ್ಯಾದ್ರಿ ಅವರಿಗೆ “ವರ್ಷದ ಅತ್ಯುತ್ತಮ ಶಿಕ್ಷಕ – 2024” ಪುರಸ್ಕಾರ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 12 : ನಗರದ ಸಹ್ಯಾದ್ರಿ ಇಂಗ್ಲಿಷ್ ಅಕಾಡೆಮಿಯ ಅಧ್ಯಕ್ಷ ಹಾಗೂ ಉಪನ್ಯಾಸಕ ಯೋಗೀಶ್ ಸಹ್ಯಾದ್ರಿ ಅವರು ರೋಟರಿ ಕ್ಲಬ್ ಚಿನ್ಮೂಲಾದ್ರಿ ಚಿತ್ರದುರ್ಗ ವತಿಯಿಂದ ಕೊಡಮಾಡುವ “ವರ್ಷದ ಅತ್ಯುತ್ತಮ ಶಿಕ್ಷಕ” ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.

ಯೋಗೀಶ್ ಸಹ್ಯಾದ್ರಿ ಅವರು ವೃತ್ತಿಯಲ್ಲಿ ಇಂಗ್ಲಿಷ್ ಭಾಷಾ ಉಪನ್ಯಾಸಕರಾಗಿದ್ದು, ರಾಜ್ಯದ ಪ್ರತಿಷ್ಠಿತ ಮೂಡಬಿದಿರೆಯ ಆಳ್ವಾಸ್ ಕಾಲೇಜು, ಸೈಂಟ್ ಅಲೋಶಿಯಸ್ ಕಾಲೇಜು ಹಾಗೂ ಚಿತ್ರದುರ್ಗ ಸೇರಿ ಅನೇಕ ಪಿಯು ಕಾಲೇಜುಗಳಲ್ಲಿ ಮತ್ತು ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಇಂಗ್ಲಿಷ್ ಉಪನ್ಯಾಸಕರು, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಯೋಗೀಶ್ ಸಹ್ಯಾದ್ರಿ ಎಜುಕೇಷನ್ ಟ್ರಸ್ಟ್ ಮೂಲಕ ಜಿಲ್ಲೆಯ ಸರ್ಕಾರಿ ಶಾಲೆ-ಕಾಲೇಜುಗಳು, ಸ್ಲಂ ಪ್ರದೇಶದ ಹಾಗೂ ಹಾಸ್ಟೆಲ್ ಮಕ್ಕಳಿಗೆ ಉಚಿತವಾಗಿ ಇಂಗ್ಲಿಷ್ ಕಲಿಸಿಕೊಡುತ್ತಿದ್ದು, ಇವರ ಕಾರ್ಯವನ್ನು ಗುರುತಿಸಿ ಸುವರ್ಣ Big 3 ಹೀರೋ, ಪಬ್ಲಿಕ್ ಟೀವಿ, ಟಿ.ವಿ9, BTV ಭರವಸೆಯ ಬೆಳಕು, ಹೀಗೆ ಅನೇಕ ಕನ್ನಡ ಟೀವಿ ಚಾನಲ್ ಗಳು ಹಾಗೂ ಪತ್ರಿಕೆಗಳು ಪ್ರೋತ್ಸಾಹಿಸಿರುವುದು ಗಮನಾರ್ಹ.

ಸಾಹಿತ್ಯ ಕ್ಷೇತ್ರದಲ್ಲಿಯೂ ಕೆಲಸ ಮಾಡುತ್ತಿರುವ ಇವರು “ಕಣ್ಣು ಕವನದ ಮುನ್ನುಡಿ”, “ದ ಹಿಲ್ಸ್ ಅಲೈವ್” ಮತ್ತು “ಅಡ್ವಾನ್ಸ್ಡ್ ಇಂಗ್ಲಿಷ್ ಗ್ರಾಮರ್” ಎಂಬ 3 ಕೃತಿಗಳನ್ನು ರಚಿಸಿದ್ದಾರೆ. ಪ್ರಸ್ತುತ ಚಿತ್ರದುರ್ಗ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್  ಅಧ್ಯಕ್ಷರಾಗಿ ಸುಮಾರು 500 ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಮಕ್ಕಳಿಗಾಗಿ ಆಯೋಜಿಸಿದ್ದಾರೆ. ಯೋಗೀಶ್ ಸಹ್ಯಾದ್ರಿ ಅವರ ಸಾಧನೆ ಹಾಗೂ ಸಾಮಾಜಿಕ, ಶೈಕ್ಷಣಿಕ ಕೊಡುಗೆಯನ್ನು ಗುರುತಿಸಿ ಶಿಕ್ಷಕರ ದಿನಾಚರಣೆ – 2024 ರ ಪ್ರಯುಕ್ತ ರೋಟರಿ ಕ್ಲಬ್ ಚಿನ್ಮೂಲಾದ್ರಿ ಚಿತ್ರದುರ್ಗ ವತಿಯಿಂದ ನಾಳೆ (13-09-2024) ಪ್ರಶಸ್ತಿ ಫಲಕಗಳನ್ನು ನೀಡಿ  ಗೌರವಿಸಲಾಗುವುದು ಎಂದು ರೋಟರಿ ಕ್ಲಬ್ ಚಿನ್ಮೂಲಾದ್ರಿ ಅಧ್ಯಕ್ಷ ರೊ|| ಮಂಜುನಾಥ್ ಭಾಗವತ್ ಮತ್ತು ಕಾರ್ಯದರ್ಶಿ
ರೊ||. ಪಿ.ಬಿ. ಶಿವರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

40% ಕಮಿಷನ್ ಆರೋಪ ಮಾಡಿದ್ದ ಕೆಂಪಣ್ಣ ನಿಧನ..!

  ಬಿಜೆಪಿ ಸರ್ಕಾರದ ವಿರುದ್ಧ 40% ಆರೋಪ ಮಾಡಿದ್ದ, ಗುತ್ತಿಗೆದಾರ ಸಂಘ್ ಅಧ್ಯಕ್ಷ ಡಿ ಕೆಂಪಣ್ಣ ಇಂದು ನಿಧನರಾಗಿದ್ದಾರೆ. ಇವರಿಗೆ 84 ವರ್ಷ ವಯಸ್ದಾಗಿತ್ತು. ಹೃದಯಘಾತದಿಂದಾಗಿ ಇಂದು ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ಜ್ಯೋತಿಪುರ ನಿವಾಸದಲ್ಲಿಯೇ

ಮುನಿರತ್ನ ವಿರುದ್ಧ ರಾಮನಗರ ವ್ಯಾಪ್ತಿಯಲ್ಲಿ ದಾಖಲಾಯ್ತು ಅತ್ಯಾಚಾರ ಪ್ರಕರಣ..!

ಬೆಂಗಳೂರು: ದಲಿತ ಹಾಗೂ ಒಕ್ಕಲಿಗ ಸಮುದಾಯದವರಿಗೆ ಕೆಟ್ಟದಾಗಿ ಮಾತನಾಡಿ ಜೈಲು ಸೇರಿರುವ ಮುನಿರತ್ನ ಅವರಿಗೆ ಈಗಾಗಲೇ ಆ ಎರಡು ಸಮುದಾಯಗಳ ವಿರೋಧ ವ್ಯಕ್ತವಾಗಿದೆ. ಜೊತೆಗೆ ಮುನಿರತ್ನ ವಿರುದ್ಧ ಪ್ರತಿಭಟನೆಗಳು ಎದುರಾಗಿವೆ. ಇದೀಗ ಮುನಿರತ್ನ ವಿರುದ್ಧ

ಚಿತ್ರದುರ್ಗ ಜಿಲ್ಲಾ ದಲಿತ ಸಾಹಿತ್ಯ ಪರಿಷತ್ ಘಟಕದ ಪದಾಧಿಕಾರಿಗಳ ಆಯ್ಕೆ

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 19 : ದಲಿತ ಸಾಹಿತ್ಯ ಪರಿಷತ್ ಚಿತ್ರದುರ್ಗ ಜಿಲ್ಲಾ ಘಟಕದ ಪದಾಧಿಕಾರಿಗಳನ್ನು ಬುಧವಾರ ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ಟಿ.ಶಿವಮೂರ್ತಿ ಸಾಹಿತಿಗಳು ಕೋಡಿಹಳ್ಳಿ, ಉಪಾಧ್ಯಕ್ಷರಾಗಿ ಪ್ರೊ.ಲಿಂಗಪ್ಪ, ಹಿರಿಯ ಸಾಹಿತಿಗಳು, ಕಾರ್ಯದರ್ಶಿಗಳಾಗಿ ಪರಶುರಾಮ್.ಎಂ

error: Content is protected !!