Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗುಬ್ಬಿ ಪಟ್ಟಣ ಪಂಚಾಯಿತಿ | ಅಧ್ಯಕ್ಷರಾಗಿ ಮಂಗಳಮ್ಮ ರಾಜಣ್ಣ ಉಪಾಧ್ಯಕ್ಷರಾಗಿ ಮಮತಾ ಶಿವಪ್ಪ ಅಧಿಕಾರ ಸ್ವೀಕಾರ

---Advertisement---

ವರದಿ ಮತ್ತು ಫೋಟೋ ಕೃಪೆ
ರಂಗಸ್ವಾಮಿ, ಗುಬ್ಬಿ
ಮೊ : 99019 53364

ಸುದ್ದಿಒನ್, ಗುಬ್ಬಿ, ಸೆಪ್ಟೆಂಬರ್. 13 :ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದ ಮಂಗಳಮ್ಮ ರಾಜಣ್ಣ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾದ ಮಮತಾ ಶಿವಪ್ಪ ನವರು ಇಂದು ಕಚೇರಿಗೆ ಪೂಜೆ ಸಲ್ಲಿಸಿ ಅಭಿಜಿನ್ ಲಗ್ನದಲ್ಲಿ ಅಧಿಕಾರ ಸ್ವೀಕರಿಸಿದರು.

ನಂತರ ನೂತನ ಅಧ್ಯಕ್ಷೇ ಮಂಗಳಮ್ಮ ರಾಜಣ್ಣ ಹಾಗೂ ಉಪಾಧ್ಯಕ್ಷ ಮಮತಾ ಶಿವಪ್ಪ ಮಾತನಾಡಿ ಆಯ್ಕೆಯಾದ ನಂತರ ಕಚೇರಿಗೆ ಪೂಜೆ ಸಲ್ಲಿಸಿ ಅಧಿಕಾರ ಸ್ವೀಕಾರ ಮಾಡಿದ್ದು ಮುಂದಿನ ದಿನಗಳಲ್ಲಿ ಎಲ್ಲ ಸದಸ್ಯರ ಸಹಕಾರ ಪಡೆದು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇವೆ. ಸ್ವಚ್ಛತೆ ಮೊದಲ ಆದ್ಯತೆ ನೀಡಿ ಪಟ್ಟಣ ವ್ಯಾಪ್ತಿಯಲ್ಲಿ ಸಂಚಾರ ಮಾಡಿ ಸಿಬ್ಬಂದಿಗಳೊಂದಿಗೆ ಸೇರಿ ಸಮಸ್ಯೆಗಳನ್ನು ಬಗ್ಗೆಹರಿಸಲು ಮುಂದಾಗುತ್ತೇನೆ ಎಂದರು.

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುಳಾದೇವಿ, ಹೆಲ್ತ್ ಇನ್ಸ್ಪೆಕ್ಟರ್ ವಿದ್ಯಾ ಬಡಿಗೆರೆ, ಜಿಲ್ಲಾ ಪಂಚಾಯಿತಿ, ಮಾಜಿ ಸದಸ್ಯ ಜಿಎಚ್ ಜಗನ್ನಾಥ್,ಆದಿ ಜಾಂಬವ ಯುವ ಬ್ರಿಗೇಡ್ ತಾಲೂಕು ಅಧ್ಯಕ್ಷ ಗುಬ್ಬಿ ಬಸವರಾಜು, ಪ ಪಂ ಮಾಜಿ ಅಧ್ಯಕ್ಷ ಅಣ್ಣಪ್ಪಸ್ವಾಮಿ, ಸದಸ್ಯರಾದ ಶಿವಕುಮಾರ್, ಕುಮಾರ್, ರಾಜೇಶ್ವರಿ ರಾಜಣ್ಣ, ಸವಿತಾ ಸುರೇಶ್, ಮಹಮ್ಮದ್ ಸಾಧಿಕ್, ಸಿದ್ದರಾಮಣ್ಣ, ಜಯಲಕ್ಷ್ಮಿ, ಶ್ವೇತ ಜಗದೀಶ್, ಶಶಿಕುಮಾರ್, ನ್ಯಾಮಿನಿ ಸದಸ್ಯ ಆನಂದ್, ಮುಖಂಡರಾದ ಜಿ ಎಚ್ ಹರೀಶ್, ರಾಘವೇಂದ್ರ, ದೇವರಾಜು, ಶಿವರಾಜು, ನರಸಿಂಹಮೂರ್ತಿ, ಮುಂತಾದವರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment