Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರಕ್ಕೆ ಸೆಡ್ಡು ಹೊಡೆದು ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ನಿಲ್ಲಿಸಿದ್ದೇವೆ : ಶಾಸಕ ಎಂ ಟಿ ಕೃಷ್ಣಪ್ಪ

---Advertisement---

 

ವರದಿ ಮತ್ತು ಫೋಟೋ ಕೃಪೆ
ರಂಗಸ್ವಾಮಿ, ಗುಬ್ಬಿ
ಮೊ : 99019 53364

ಸುದ್ದಿಒನ್, ಗುಬ್ಬಿ, ಸೆಪ್ಟೆಂಬರ್. 13 : ತಾಲೂಕಿನ ಕಲ್ಲೂರು ಗ್ರಾಮದ ಕೆರೆ ಕೋಡಿಬಿದ್ದ ಹಿನ್ನೆಲೆ ತುರುವೇಕೆರೆ ಶಾಸಕ ಎಂ ಟಿ ಕೃಷ್ಣಪ್ಪ ಗಂಗಾ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಈ ಬಾರಿ ಎಲ್ಲಾ ಕೆರೆಗಳು ತುಂಬಿ ಕೋಡಿ ಬೀಳುವ ಹಂತದಲ್ಲಿವೆ. ಕೆರೆ,ಕಟ್ಟೆಗಳು ತುಂಬಿದರೆ ರೈತರು ಸಂತೋಷದಿಂದ ಇರುತ್ತಾರೆ. ಸೇತುವೆ ನಿರ್ಮಾಣ ಜನರ ಬಹಳ ವರ್ಷಗಳ ಬೇಡಿಕೆ ಬೇಡಿಕೆಯಾಗಿತ್ತು. ಅದರಂತೆ ಚಿಕ್ಕ ಕಲ್ಲೂರಿನಲ್ಲಿ 1.50 ಕೋಟಿ ಹಣ ಹಾಕಿ ಕಾಮಗಾರಿ ಪೂರ್ಣಗೊಂಡು ಚಾಲನೆ ನೀಡಲಾಗಿದೆ.

ಸಿ ಎಸ್ ಪುರ ಗ್ರಾಮದಲ್ಲಿ ದೇವೇಗೌಡರ ಸಮುದಾಯ ಭವನವನ್ನು ಉದ್ಘಾಟಿಸಲಾಗುತ್ತಿದೆ. ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಮೂಲಕ ರಾಮನಗರಕ್ಕೆ ನೀರು ಹರಿಸುವ ಕಾಮಗಾರಿಯನ್ನು ಸರ್ಕಾರಕ್ಕೆ ಸೆಡ್ಡು ಹೊಡೆದು ನಿಲ್ಲಿಸಿದ್ದೇವೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಇ ಓ ಶಿವಪ್ರಕಾಶ್, ಗ್ರಾ ಪಂ ಅಧ್ಯಕ್ಷೆ ಜುಲೆಖಾಬಿ ಯುಸೆಫ್,ಉಪಾಧ್ಯಕ್ಷೆ ಸುಮಿತ್ರ, ಮುಖಂಡರಾದ ನವೀನ್ ಕುಮಾರ್, ರಾಮಣ್ಣ, ಕಲ್ಲೂರು ಮಂಜುನಾಥ್, ನರಸೇಗೌಡ, ಜಗದೀಶ್,ಕುಮಾರ್, ನರಸಿಂಹ ಮೂರ್ತಿ, ಪಿಡಿಒ ಪ್ರಶಾಂತ್, ಇತರರು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment