ವರದಿ ಮತ್ತು ಫೋಟೋ ಕೃಪೆ
ರಂಗಸ್ವಾಮಿ, ಗುಬ್ಬಿ
ಮೊ : 99019 53364
ಸುದ್ದಿಒನ್, ಗುಬ್ಬಿ, ಸೆಪ್ಟೆಂಬರ್. 13 : ತಾಲೂಕಿನ ಕಲ್ಲೂರು ಗ್ರಾಮದ ಕೆರೆ ಕೋಡಿಬಿದ್ದ ಹಿನ್ನೆಲೆ ತುರುವೇಕೆರೆ ಶಾಸಕ ಎಂ ಟಿ ಕೃಷ್ಣಪ್ಪ ಗಂಗಾ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಈ ಬಾರಿ ಎಲ್ಲಾ ಕೆರೆಗಳು ತುಂಬಿ ಕೋಡಿ ಬೀಳುವ ಹಂತದಲ್ಲಿವೆ. ಕೆರೆ,ಕಟ್ಟೆಗಳು ತುಂಬಿದರೆ ರೈತರು ಸಂತೋಷದಿಂದ ಇರುತ್ತಾರೆ. ಸೇತುವೆ ನಿರ್ಮಾಣ ಜನರ ಬಹಳ ವರ್ಷಗಳ ಬೇಡಿಕೆ ಬೇಡಿಕೆಯಾಗಿತ್ತು. ಅದರಂತೆ ಚಿಕ್ಕ ಕಲ್ಲೂರಿನಲ್ಲಿ 1.50 ಕೋಟಿ ಹಣ ಹಾಕಿ ಕಾಮಗಾರಿ ಪೂರ್ಣಗೊಂಡು ಚಾಲನೆ ನೀಡಲಾಗಿದೆ.
ಸಿ ಎಸ್ ಪುರ ಗ್ರಾಮದಲ್ಲಿ ದೇವೇಗೌಡರ ಸಮುದಾಯ ಭವನವನ್ನು ಉದ್ಘಾಟಿಸಲಾಗುತ್ತಿದೆ. ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಮೂಲಕ ರಾಮನಗರಕ್ಕೆ ನೀರು ಹರಿಸುವ ಕಾಮಗಾರಿಯನ್ನು ಸರ್ಕಾರಕ್ಕೆ ಸೆಡ್ಡು ಹೊಡೆದು ನಿಲ್ಲಿಸಿದ್ದೇವೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಇ ಓ ಶಿವಪ್ರಕಾಶ್, ಗ್ರಾ ಪಂ ಅಧ್ಯಕ್ಷೆ ಜುಲೆಖಾಬಿ ಯುಸೆಫ್,ಉಪಾಧ್ಯಕ್ಷೆ ಸುಮಿತ್ರ, ಮುಖಂಡರಾದ ನವೀನ್ ಕುಮಾರ್, ರಾಮಣ್ಣ, ಕಲ್ಲೂರು ಮಂಜುನಾಥ್, ನರಸೇಗೌಡ, ಜಗದೀಶ್,ಕುಮಾರ್, ನರಸಿಂಹ ಮೂರ್ತಿ, ಪಿಡಿಒ ಪ್ರಶಾಂತ್, ಇತರರು ಇದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












