ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಶಿವಮೊಗ್ಗ: ಮೂಡಾ ಹಗರಣ ರಾಜ್ಯದಲ್ಲಿಯೇ ಬಹಳ ದೊಡ್ಡ ಹಗರಣವಾಗಿ ಸದ್ದು ಮಾಡಿತ್ತು. ಕೋಟ್ಯಾಂತರ ರೂಪಾಯಿ ಅಭಿವೃದ್ಧಿಯ ಹಣವನ್ನು ಕೊಳ್ಳೆ ಹೊಡೆಯಲಾಗಿದೆ. ಇದರ ತನಿಖೆ ನಡೆದು ಚಾರ್ಜ್ ಶೀಟ್ ಕೂಡ ಸಲ್ಲಿಕೆ ಮಾಡಲಾಗಿದೆ. ಆದರೆ ಈ ಹಗರಣ ಬೆಳಕಿಗೆ ಬರುತ್ತಿದ್ದಂತೆ ಚಂದ್ರಶೇಖರ್ ಅವರು ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಅವರ ಪತ್ನಿಯನ್ನು ಭೇಟಿಯಾದ ಕೆ ಎಸ್ ಈಶ್ವರಪ್ಪ ಅವರು ಹಣದ ಸಹಾಯ ಮಾಡಿದ್ದಾರೆ.
ಮೃತ ಚಂದ್ರಶೇಖರ್ ಪತ್ನಿಗೆ ಐದು ಲಕ್ಷ ಹಣ ನೀಡಿದ್ದಾರೆ. ಈ ವೇಳೆ ಚಂದ್ರಶೇಖರ್ ಹೆಂಡತಿ ಕಣ್ಣೀರು ಹಾಕಿದರು. ಆಗ ಈಶ್ವರಪ್ಪ ಅವರೇ ಸಮಾಧಾನ ಮಾಡಿದ್ದು, ನೀವೂ ಸ್ವಾಭಿಮಾನಿಗಳು ಎಂಬುದು ನನಗೆ ಗೊತ್ತು. ನಿಮಗೆ ಅಲ್ಪಸ್ವಲ್ಪ ಆದ್ರೂ ಸಹಾಯವಾಗಲಿ ಅಂತಷ್ಟೇ ಈ ಹಣ ನೀಡುತ್ತಿರುವುದು. ತೆಗೆದುಕೊಳ್ಳಿ. ನಮ್ಮನ್ನ ಅಣ್ಣತಮ್ಮಂದಿರು ಅಂತ ತಿಳಿದುಕೊಳ್ಳಿ ಎಂದು ಹಣ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಈಶ್ವರಪ್ಪ ಅವರು, ಅವರ ಕುಟುಂಬಕ್ಕೆ ಒಳ್ಳೆಯದಾಗಲಿ, ಚಂದ್ರಶೇಖರ್ ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಅಂತ ಹೇಳಿ ಎಲ್ಲರ ಪರವಾಗಿ ಈ ಹಣವನ್ನು ನೀಡಿದ್ದೇವೆ. ಸರ್ಕಾರ ಏನು ಘೋಷಣೆ ಮಾಡಿದೆ ಆ ಹಣವನ್ನು ಸರ್ಕಾರ ನೀಡಬೇಕು. ನಮ್ಮ ಪರವಾಗಿ ಈ ಹಣವನ್ನು ನೀಡುತ್ತಿದ್ದೇವೆ. ಸಮಾಜದ ಋಣವನ್ನು ನಾವೂ ತೀರಿಸುತ್ತಿದ್ದೇವೆ. ಅವತ್ತು ಹೇಳಿದ್ರಿ ನೀವೂ ಕೊಡದೆ ಇದ್ದರೂ ನಾವೂ ಹೇಗೋ ಜೀವನ ಮಾಡಿಕೊಳ್ಳುತ್ತೇವೆ ಅಂತ.
ಸರ್ಕಾರದ ಋಣವನ್ನು ಅವರು ಆದಷ್ಟು ಬೇಗ ತೀರಿಸಬೇಕು. ತೀರಿಸದೆ ಇದ್ದಲ್ಲಿ ಹೇಗೆ ಎಚ್ಚರಿಕೆ ಕೊಡಬೇಕೋ ಆ ರೀತಿ ಕೊಡುತ್ತೇವೆ. ನಿಮಗೆ ಒಳ್ಳೆಯದಾಗಲಿ ಎಂದೇ ಬಯಸುತ್ತೇವೆ ಎಂದು ಚಂದ್ರಶೇಖರ್ ಪತ್ನಿಗೆ ಹಣ ಕೊಟ್ಟು, ಹಾರೈಸಿದ್ದಾರೆ. ಈ ವೇಳೆ ಈಶ್ವರಪ್ಪ ಪರವಾಗಿ ಘೋಷಣೆಗಳು ಕೇಳಿ ಬಂದಿವೆ ಜೈ ಈಶ್ವರಪ್ಪ ಎಂದು ಘೋಷಣೆ ಕೂಗಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್