Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೂಡಾ ಹಗರಣ : ಮೃತ ಚಂದ್ರಶೇಖರ್ ಪತ್ನಿಗೆ ಈಶ್ವರಪ್ಪ ಹಣ ಸಹಾಯ..!

Facebook
Twitter
Telegram
WhatsApp

ಶಿವಮೊಗ್ಗ: ಮೂಡಾ ಹಗರಣ ರಾಜ್ಯದಲ್ಲಿಯೇ ಬಹಳ ದೊಡ್ಡ ಹಗರಣವಾಗಿ ಸದ್ದು ಮಾಡಿತ್ತು. ಕೋಟ್ಯಾಂತರ ರೂಪಾಯಿ ಅಭಿವೃದ್ಧಿಯ ಹಣವನ್ನು ಕೊಳ್ಳೆ ಹೊಡೆಯಲಾಗಿದೆ. ಇದರ ತನಿಖೆ ನಡೆದು ಚಾರ್ಜ್ ಶೀಟ್ ಕೂಡ ಸಲ್ಲಿಕೆ ಮಾಡಲಾಗಿದೆ. ಆದರೆ ಈ ಹಗರಣ ಬೆಳಕಿಗೆ ಬರುತ್ತಿದ್ದಂತೆ ಚಂದ್ರಶೇಖರ್ ಅವರು ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಅವರ ಪತ್ನಿಯನ್ನು ಭೇಟಿಯಾದ ಕೆ ಎಸ್ ಈಶ್ವರಪ್ಪ ಅವರು ಹಣದ ಸಹಾಯ ಮಾಡಿದ್ದಾರೆ.

ಮೃತ ಚಂದ್ರಶೇಖರ್ ಪತ್ನಿಗೆ ಐದು ಲಕ್ಷ ಹಣ ನೀಡಿದ್ದಾರೆ. ಈ ವೇಳೆ ಚಂದ್ರಶೇಖರ್ ಹೆಂಡತಿ ಕಣ್ಣೀರು ಹಾಕಿದರು. ಆಗ ಈಶ್ವರಪ್ಪ ಅವರೇ ಸಮಾಧಾನ ಮಾಡಿದ್ದು, ನೀವೂ ಸ್ವಾಭಿಮಾನಿಗಳು ಎಂಬುದು ನನಗೆ ಗೊತ್ತು. ನಿಮಗೆ ಅಲ್ಪಸ್ವಲ್ಪ ಆದ್ರೂ ಸಹಾಯವಾಗಲಿ ಅಂತಷ್ಟೇ ಈ ಹಣ ನೀಡುತ್ತಿರುವುದು. ತೆಗೆದುಕೊಳ್ಳಿ. ನಮ್ಮನ್ನ ಅಣ್ಣತಮ್ಮಂದಿರು ಅಂತ ತಿಳಿದುಕೊಳ್ಳಿ ಎಂದು ಹಣ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಈಶ್ವರಪ್ಪ ಅವರು, ಅವರ ಕುಟುಂಬಕ್ಕೆ ಒಳ್ಳೆಯದಾಗಲಿ, ಚಂದ್ರಶೇಖರ್ ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಅಂತ ಹೇಳಿ ಎಲ್ಲರ ಪರವಾಗಿ ಈ ಹಣವನ್ನು ನೀಡಿದ್ದೇವೆ. ಸರ್ಕಾರ ಏನು ಘೋಷಣೆ ಮಾಡಿದೆ ಆ ಹಣವನ್ನು ಸರ್ಕಾರ ನೀಡಬೇಕು. ನಮ್ಮ ಪರವಾಗಿ ಈ ಹಣವನ್ನು ನೀಡುತ್ತಿದ್ದೇವೆ. ಸಮಾಜದ ಋಣವನ್ನು ನಾವೂ ತೀರಿಸುತ್ತಿದ್ದೇವೆ. ಅವತ್ತು ಹೇಳಿದ್ರಿ ನೀವೂ ಕೊಡದೆ ಇದ್ದರೂ ನಾವೂ ಹೇಗೋ ಜೀವನ ಮಾಡಿಕೊಳ್ಳುತ್ತೇವೆ ಅಂತ.

ಸರ್ಕಾರದ ಋಣವನ್ನು ಅವರು ಆದಷ್ಟು ಬೇಗ‌ ತೀರಿಸಬೇಕು. ತೀರಿಸದೆ ಇದ್ದಲ್ಲಿ ಹೇಗೆ ಎಚ್ಚರಿಕೆ ಕೊಡಬೇಕೋ ಆ ರೀತಿ ಕೊಡುತ್ತೇವೆ. ನಿಮಗೆ ಒಳ್ಳೆಯದಾಗಲಿ ಎಂದೇ ಬಯಸುತ್ತೇವೆ ಎಂದು ಚಂದ್ರಶೇಖರ್ ಪತ್ನಿಗೆ ಹಣ ಕೊಟ್ಟು, ಹಾರೈಸಿದ್ದಾರೆ. ಈ ವೇಳೆ ಈಶ್ವರಪ್ಪ ಪರವಾಗಿ ಘೋಷಣೆಗಳು ಕೇಳಿ ಬಂದಿವೆ ಜೈ ಈಶ್ವರಪ್ಪ ಎಂದು ಘೋಷಣೆ ಕೂಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!