Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೊಲೆ ಬೆದರಿಕೆ, ಜಾತಿ ನಿಂದನೆ ಕೇಸ್ ನಲ್ಲಿ ಶಾಸಕ ಮುನಿರತ್ನ ಬಂಧನ : ವಿಚಾರ ಕೇಳಿ ಖುಷಿಯಾಯ್ತು ಎಂದ ದೂರುದಾರ..!

Facebook
Twitter
Telegram
WhatsApp

ಬೆಂಗಳೂರು: ನಿನ್ನೆಯೆಲ್ಲಾ ಶಾಸಕ ಮುನಿರತ್ನ ಅವರು ಧಮ್ಕಿ ಹಾಕಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿತ್ತು. ಜೀವ ಬೆದರಿಕೆ ಹಾಗೂ ಜಾತಿ ನಿಂದನೆಯನ್ನು ಆ ಆಡಿಯೋದಲ್ಲಿ ಮಾಡಲಾಗಿತ್ತು. ಇದೀಗ ಶಾಸಕ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆಂಧ್ರದ ಚಿತ್ತೂರಿಗೆ ಹೊರಟಿದ್ದ ಮುನಿರತ್ನ ಅವರನ್ನು ಮುಳುಬಾಗಿಲ ಬಳಿ ಬಂಧಿಸಲಾಗಿದೆ.

ಈ ಸಂಬಂಧ ಮಾತನಾಡಿರುವ ದೂರುದಾರ ಚೆಲುವರಾಜು, ನಾನೊಬ್ಬ ಸಣ್ಣ ಗುತ್ತಿಗೆದಾರ. ನನಗೆ ಮೋಸವಾಗಿದೆ. ನನ್ಮ ದೂರಿನ ಹಿಂದೆ‌ ಯಾವುದೇ ರಾಜಕೀಯ ಶಕ್ತಿಗಳು ಅಡಗಿಕೊಂಡಿಲ್ಲ. ಅಸಲಿಗೆ ರಾಜಕೀಯದಲ್ಲಿ ನನಗೆ ಯಾರೂ ಅಷ್ಟೊಂದು ಪರಿಚಯವೂ ಇಲ್ಲ. ಮುನಿರತ್ನ ಅವರಿಂದ ಎಷ್ಟು ಜನ ಊರು ಬಿಟ್ಟಿದ್ದಾರೆ, ಎಷ್ಟು ಜನ ಮನೆ ಖಾಲಿ ಮಾಡಿದ್ದಾರೆ ಎಂಬುದನ್ನು ಅವರನ್ನೇ ಕೇಳಿ.

 

ದುಡ್ಡು ಹೊಡೆಯುವುದು ಬಿಟ್ಟರೆ ಅವರಿಗೆ ಬೇರೆ ಏನು ಗೊತ್ತಿಲ್ಲ. ಮುನಿರತ್ನ ಅವರು ನನಗೆ ಮೂರರಿಂದ ನಾಲ್ಕು ವರ್ಷದಿಂದ ಪರಿಚಯವಿದ್ದಾರೆ. ನನಗೆ 20 ಲಕ್ಷ ಮೋಸವಾದಾಗ ಅವರ ವಿರುದ್ಧ ತಿರುಗಿ ನಿಂತೆ. ನಾನು ಯಾವುದೇ ರಾಜಕೀಯ ಪ್ರೇರಣೆಯಿಂದ ದೂರು ಕೊಟ್ಟಿಲ್ಲ. ಅವರು ಅನೇಕ ಬಾರಿ ಬೆದರಿಕೆ ಹಾಕಿದ್ದಾರೆ, ಕೆಟ್ಟದಾಗಿ ಮಾತನಾಡಿದ್ದಾರೆ. ಅವರು ಬಂಧನವಾಗಿದ್ದನ್ನು ಮಾಧ್ಯಮಗಳಲ್ಲಿ ನೋಡಿ ಖುಷಿಯಾಯ್ತು. ನನ್ನ ಪರವಾಗಿ ಜನರು ನಿಂತಿದ್ದಾರೆ. ಮುನಿರತ್ನ ವಿರುದ್ಧ ಕಾನೂನು ಹೋರಾಟಕ್ಕೆ ಸಜ್ಜಾಗಿರುವ ಕಾರಣಕ್ಕೆ ದೂರು ನೀಡಿದ್ದೇನೆ. ಜನ ನನ್ನ ಜೊತೆಗೆ ಇದ್ದಾರೆ ಎಂಬುದೇ ಸಂತಸದ ವಿಚಾರ ಎಂದು ಹೇಳಿದ್ದಾರೆ. ಶಾಸಕ ಮುನಿರತ್ನ ಆಡಿಯೋ ವೈರಲ್ ಆಗುತ್ತಿದ್ದಂತೆ ದೂರು ಕೂಡ ದಾಖಲಾಗಿದೆ. ದೂರಿನ ಆಧಾರದ ಮೇಲೆ‌ಮುನಿರತ್ನ ಅವರ ಬಂಧನವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!