ಡಾ. ಶ್ರೀ ಜಗದ್ಗುರು ಸಂಗನಬಸವ ಮಹಾಸ್ವಾಮಿಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ : ದೇವರಮನಿ ಶಿವಕುಮಾರ್

1 Min Read

ದಾವಣಗೆರೆ, (ನ.22) : ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ಹಾಲಕೆರೆ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠದ ಡಾ. ಶ್ರೀ ಜಗದ್ಗುರು ಸಂಗನಬಸವ ಮಹಾಸ್ವಾಮಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷರು ದಾವಣಗೆರೆ-ಹರಿಹರ ನಗರಾಭಿವೃದ್ಧಿ ಫ್ರಾಧಿಕಾದ ಅಧ್ಯಕ್ಷರಾದ ಶ್ರೀ ದೇವರಮನಿ ಶಿವಕುಮಾರ್ ಅವರು ಮಾತನಾಡಿ ಪೂಜ್ಯರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ ಉಂಟುಮಾಡಿದೆ. ರಾಜ್ಯದ ಆಧ್ಯಾತ್ಮಿಕ, ಸಾಮಾಜಿಕ ಅನೇಕ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಸಮಾಜಕ್ಕೆ ಅವಿರತ ಸೇವೆ ಸಲ್ಲಿಸಿದ ಸ್ವಾಮೀಜಿಯವರು ನಮ್ಮನ್ನು ಅಗಲಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಅವರ ಅಪಾರ ಭಕ್ತರಿಗೆ ಈ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲೆಂದು ಆಶಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರದಾನ ಕಾರ್ಯದರ್ಶಿಗಳಾದ ಕರೆಶಿವಪ್ಳರ್ ಸಿದ್ದೇಶ್,ಟಿಂಕರ್ ಮಂಜಣ್ಣ ಹಿರಿಯ ಪತ್ರಕರ್ತರಾದ ಬಕ್ಕೇಶ್ ನಾಗನೂರ,ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಿವನಗೌಡ ಟಿ.ಪಾಟೀಲ್, ಅಣಜಿ ಪ್ರಶಾಂತ, ಜಯಪ್ರಕಾಶ್ ಮಾಗಿ,ಅಭಿಷೇಕ ಗಾಂಜಿ,ಕೊರಟಿಕರಿ ಶಿವಕುಮಾರ್, ಶ್ರೀಕಂಠಯ್ಯ, ಮಹಿಳಾ ಘಟಕದ ಪ್ರದಾನ ಕಾರ್ಯದರ್ಶಿಗಳಾದ ಮಂಗಳಾ ಕರಿಬಸಪ್ಪ, ಸುಮಂಗಲಾ ಕೆ.ಬಿ,ಲಕ್ಷ್ಮಿ ಎಚ್.ಆರ್,ಶೋಭಾ ಎಸ್. ಕೆ.ಮತ್ತಿತರರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *