Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದರ್ಶನ್ ಅವರನ್ನ ಪೊಲೀಸರು ಸುಮ್ಮ ಸುಮ್ಮನೆ ಅರೆಸ್ಟ್ ಮಾಡಿಲ್ಲ : ಸುದೀಪ್ ಹಿಂಗದಿಂದ್ಯಾಕೆ..?

Facebook
Twitter
Telegram
WhatsApp

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಹದಿನೇಳು ಮಂದಿಯ ಗ್ಯಾಂಗ್ ಅನ್ನೇ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಾರ್ಜ್ ಶೀಟ್ ಕೂಡ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಪರ ವಕೀಲರು ಇನ್ನು ಜಾಮೀನಿಗೆ ಕೂಡ ಅರ್ಜಿ ಸಲ್ಲಿಕೆ ಮಾಡಿಲ್ಲ. ದರ್ಶನ್ ವಿಚಾರವಾಗಿ ಮಾತನಾಡಿರುವ ಕಿಚ್ಚ ಸುದೀಪ್ ಪೊಲೀಸರು ಸುಮ್ಮ ಸುಮ್ಮನೆ ಅರೆಸ್ಟ್ ಮಾಡಿರೋದಲ್ಲ ಎಂದಿದ್ದಾರೆ.

ನಟ ದರ್ಶನ್ ರೀತಿಯ ದೊಡ್ಡ ಸ್ಟಾರ್ ಅನ್ನು ಪೊಲೀಸರು ಸುಮ್ಮನೆ ಅರೆಸ್ಟ್ ಮಾಡಲು ಸಾಧ್ಯವಿಲ್ಲ. ಮೊದಲಿಗೆ ದರ್ಶನ್ ಈ ರೀತಿ ಮಾಡಿರಲು ಸಾಧ್ಯವಿಲ್ಲ ಅಂತ ನನಗೂ ಅನ್ನಿಸಿತ್ತು. ನನಗೂ ಪೊಲೀಸರು ಪರಿಚಯವಿದ್ದಾರೆ. ಸುಮ್ಮನೆ ಅಷ್ಟು ದೊಡ್ಡ ವ್ಯಕ್ತಿಯನ್ನು ಪೊಲೀಸರು ಕರೆದುಕೊಂಡು ಹೋಗುವುದಕ್ಕೆ ಸಾಧ್ಯವಿಲ್ಲ. ನನಗೆ ಆ ವಿಚಾರ ಒಂದು ರೀತಿಯ ಮೋಡ ಕವಿದ ವಾತಾವರಣವಾಗಿತ್ತು. ಏನು ಸತ್ಯ ಏನು ಸುಳ್ಳು ಎಂದು ತಿಳಿಯಲು ನ್ಯೂಸ್ ನೋಡುತ್ತಿದ್ದೆವು. ಒಂದಂತು ಸತ್ಯ. ಯಾರನ್ನ ಎಷ್ಟು ಇಷ್ಟ ಪಡುತ್ತೀರಿ..? ದ್ವೇಷ‌ ಮಾಡುತ್ತೀರಿ ಅನ್ನೋದು ಅವರವರ ವೈಯಕ್ತಿಕ ವಿಚಾರ. ಫೈಟ್ ಮಾಡ್ತೀವಿ, ಸ್ಪರ್ಧೆ ಇರುತ್ತದೆ. ಅದೆಲ್ಲವೂ ವೈಯಕ್ತಿಕವಾದದ್ದು.

ಆದರೆ ಆ ವ್ಯಕ್ತಿಗೆ ತೊಂದರೆಯಾಗ್ತಿದೆ ಎಂದರೆ ಖುಷಿ ಪಡುವ ವ್ಯಕ್ತಿ ನಾನಲ್ಲ. ನನಗೂ ನೋವಾಗಿದೆ. ನಮ್ಮ ಜೊತೆಗೆ ಮಾತನಾಡದಿದ್ದರೂ ಪರವಾಗಿಲ್ಲ, ಖುಷಿಯಾಗಿ ಓಡಾಡಿಕೊಂಡಿದ್ದರೆ ಸಾಕು ಅನ್ನಿಸುತ್ತೆ. ತೊಂದರೆ ಆದಾಗ ನನಗೂ ಅನ್ನಿಸಿದೆ ಯಾಕೆ ಬೇಕಿತ್ತು ಇದು ಅಂತ‌ ಎಂದು ಕಿಚ್ಚ ಸುದೀಪ್ ಬೇಸರ ಹೊರ ಹಾಕಿದ್ದಾರೆ. ಕನ್ನಡ ಇಂಡಸ್ಟ್ರಿಯಲ್ಲಿ ಅಂಬಿ-ವಿಷ್ಣು ಬಿಟ್ಟರೆ ಈ ಇಬ್ಬರ ಸ್ನೇಹವೇ ನೆಕ್ಸ್ಟ್ ಲೆವೆಲ್ ಗೆ ಇದ್ದದ್ದು. ಆದರೆ ಯಾವುದೋ ಕಾರಣಕ್ಕೆ ಆ ಸ್ನೇಹವೇ‌ ಮುರಿದು ಬಿದ್ದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!