Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಳೆಯಿಲ್ಲದೆ.. ಒಳಹರಿವು ಬಾರದೆ ಬತ್ತುತ್ತಿದೆ ಹಿರಿಯೂರಿನ ಗಾಯತ್ರಿ ಜಲಾಶಯ..!

Facebook
Twitter
Telegram
WhatsApp

 

ಹಿರಿಯೂರು: ಮುಂಗಾರು ಮಳೆ ಬಂದ ರೀತಿ ಕಂಡು ಈ ವರ್ಷ ಅತ್ಯದ್ಭುತವಾಗಿ ಮಳೆಯಾಗಲಿದೆ, ಎಲ್ಲಾ ಜಲಾಶಯಗಳು ತುಂಬಲಿವೆ, ಕೆರೆ ಕಟ್ಟೆಗಳು ಭರ್ತಿಯಾಗಲಿವೆ ಎಂದೇ ಭಾವಿಸಿದ್ದರು. ಆದರೆ ಅದ್ಯಾಕೋ ಮಳೆ ಈಗ ಕೈಕೊಟ್ಟಂತೆ ಕಾಣಿಸುತ್ತಿದೆ. ನಿರೀಕ್ಷಿಸಿದ ಮಟ್ಟಕ್ಕೆ ಮಳೆಯೇ ಬಂದಿಲ್ಲ. ಹೀಗಾಗಿ ಹಲವು ಜಲಾಶಯಗಳಿಗೆ ಒಳಹರಿವು ಕಡಿಮೆಯಾದಂತೆ ಆಗಿದೆ. ಅದರಲ್ಲೂ ಹಿರಿಯೂರಿನ ಜವನಗೊಂಡನಹಳ್ಳಿ ಹೋಬಳಿಯ ಗಾಯತ್ರು ಜಲಾಶಯ ನೀರಿಲ್ಲದೆ ಸೊರಗುವ ಸ್ಥಿತಿಗೆ ಬಂದಿದೆ.

ಈ ಜಲಾಶಯವನ್ನು ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ನಿರ್ಮಾಣ ಮಾಡಿದ್ದರು. ಕರಿಯಾಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸುವರ್ಣ ಮುಖಿ ನದಿಗೆ ಅಡ್ಡಲಾಗಿ 1963ರಲ್ಲಿ ಗಾಯತ್ರಿ ಜಾಲಾಶಯವನ್ನು ನಿರ್ಮಾಣ ಮಾಡಲಾಗಿತ್ತು. ಗಾಯತ್ರಿ ಜಲಾಶಯದ ನೀರಿನ ಸಂಗ್ರಹಣಾ ಸಾಮರ್ಥ್ಯವೂ 0.975 ಟಿಎಂಸಿಯಾಗಿದೆ. ಇದರಲ್ಲಿ 0.337 ಟಿಎಂಸಿ ಬಳಕೆಗೆ ಲಭ್ಯವಿದೆ.

ಆದರೆ ಮಳೆಗಾಲ ಮುಗಿಯುವ ಸಮಯ ಬಂದರು ಜಲಾಶಯಕ್ಕೆ ಮಾತ್ರ ಇನ್ನು ಯಾವುದೇ ಒಳಹರಿವು ಬಂದಿಲ್ಲ. ಇನ್ನು ಬಾಕಿ ಉಳಿದಿರುವುದು ಅತ್ತೆ, ಚಿತ್ತೆ, ಸ್ವಾತಿ ಹಾಗೂ ವಿಶಾತಿ ಮಳೆಗಳು ಮಾತ್ರ. ಈಗಾಗಲೇ ಉತ್ತರೆ ಮಳೆಯೂ ಆರಂಭವಾಗಿದೆ. ಆದರೆ ಈಗಿನ ವಾತಾವರಣ ಗಮನಿಸಿದರೆ ಉತ್ತರೆ ಮಳೆ ಉತ್ತಮವಾಗಿ ಬರುವ ನಿರೀಕ್ಷೆ ಇಲ್ಲ. ಯಾಕಂದ್ರೆ ಜೋರು ಬಿಸಿಲು ಕಾಣಿಸಬೇಕು ಆಗ ಮಾತ್ರ ಉತ್ತರೆ ಮಳೆ ಜೋರಾಗಲಿದೆ ಎಂಬ ಮಾತಿದೆ. ವಾತಾವರಣ ಮೋಡ ಕವಿದಂತೆಯೇ ಇದೆ. ಬಿಸಿಲು ಆಗಾಗ ಕಾಣಿಸಿ ಮಾಯವಾಗುತ್ತಿದೆ. ಈ ಒಂದು ಜಲಾಶಯ ಸುಮಾರು 7 ಸಾವಿರ ಎಕ್ಟೇರ್ ಅಚ್ಚುಕಟ್ಟು ಪ್ರದೇಶಕ್ಕೆ ನೀರುಣಿಸುತ್ತದೆ. ಜಲಾಶಯವೂ 145 ಅಡಿ ಎತ್ತರ ಹೊಂದಿದೆ. 0.67 ಟಿಎಂಸಿ ನೀರನ್ನು ಕೃಷಿಗೆ ಬಳಸಿಕೊಳ್ಳಲಾಗುತ್ತದೆ. ಆದರೆ ಈಗ ಜಲಾಶಯಕ್ಕೆ ಒಳ ಹರಿವೇ ಇಲ್ಲದಂತೆ ಆಗಿರುವುದು ಸುತ್ತಮುತ್ತಲಿನ ರೈತರಿಗೂ ಆತಂಕವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!