Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

Facebook
Twitter
Telegram
WhatsApp

 

ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ ಎಂದು ತಮ್ಮದೇ ಪಕ್ಷದ ರಾಜ್ಯಾಧ್ಯಕ್ಷ ವಿರುದ್ಧ ರಮೇಶ್ ಜಾರಕಿಹೊಳಿ ಹರಿಹಾಯ್ದಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷನಾಗಿ ಬಿ.ವೈ. ವಿಜಯೇಂದ್ರನನ್ನು ನಾನೆಂದು ಒಪ್ಪುವುದಿಲ್ಲ. ಮುಂದಿನ ಅಧ್ಯಕ್ಷ ಯಾರು ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕಿದೆ‌. ವಿಜಯೇಂದ್ರ ಪಕ್ಷದಲ್ಲಿ ಇನ್ನೂ ಜೂನಿಯರ್. ಅವನಿಗೆ ಏನು ಐಡಿಯಾಲಜಿ ಇಲ್ಲ. ಅವನು ಅಧ್ಯಕ್ಷನಾಗಿದ್ದಕ್ಕೆ ನನ್ನ ವಿರೋಧವಿದೆ ಎಂದು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. ಯಡಿಯೂರಪ್ಪನವರ ಬಗ್ಗೆ ಬಹಳ ಗೌರವವಿದೆ. ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ. ಅವರಿಗೆ ವಿಶ್ರಾಂತಿಯ ಅಗತ್ಯವಿದೆ. ನಮಗೆ ಸಲಹೆ ಬೇಕಾದರೆ ಯಡಿಯೂರಪ್ಪ ಅವರ ಮನೆಗೆ ಹೋಗುತ್ತೇವೆ ಎಂದಿದ್ದಾರೆ.

ಇದೆ ವೇಳೆ ಮುನಿರತ್ನ ಬಂಧನದ ಬಗ್ಗೆ ಮಾತನಾಡಿ, ಮುನಿರತ್ನ ಅವರು ಬೈದಿರುವುದು ಸಾಬೀತೆ ಆಗಿಲ್ಲ. ಆಗಲೇ ನಮ್ಮ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಫ್ಎಸ್ಎಲ್ ವರದಿ ಬರುವವರೆಗೂ ನಮ್ಮವರು ಮಾತನಾಡಬಾರದು. ಮುನಿರತ್ನ ವಿರುದ್ಧ ಕ್ರಮಕ್ಕೆ ಬಿಜೆಪಿ ನಾಯಕರೇ ಒತ್ತಡ ಹಾಕುತ್ತಿದ್ದಾರೆ. ಹಿಂದೆ ಮುಂದೆ ನೋಡದೆ ಈ ರೀತಿ ಮಾತನಾಡುವುದು ಸರಿಯಲ್ಲ. ಮುನಿರತ್ನ ಬೈದಿರುವುದು ದೃಢವಾಗಿಲ್ಲ. ಅವರ ಬೈಗುಳ ಕಟ್ ಅಂಡ್ ಪೇಸ್ಟ್ ಇರಬಹುದು. ಮುನಿರತ್ನ ವಿಚಾರದಲ್ಲಿ ನಮ್ಮವರು ದುಡಿಕಿನ ನಿರ್ಧಾರ ಮಾಡುತ್ತಿದ್ದಾರೆ. ಅವರ ವಿರುದ್ದ ವರಿಷ್ಠರು ನೋಟೀಸ್ ಜಾರಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!