Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು | ರೈತನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

---Advertisement---

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 17 :ಜಮೀನು ಪೋಡಿ ಮಾಡಿಕೊಡಲು ರೈತರೊಬ್ಬರಿಂದ ಹತ್ತು ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಹಣ ಪಡೆಯುವ ಸಂದರ್ಭದಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಯ ಕೋಡಿಹಳ್ಳಿ ಗ್ರಾಮ ಲೆಕ್ಕಾಧಿಕಾರಿ ನಾಗಪ್ಪ ಲಮಾಣಿ ಎಂಬುವವರನ್ನು ಸೋಮವಾರ ಬಂಧಿಸಿದ್ದಾರೆ.

ತಾಲ್ಲೂಕಿನ ಹಲಗಲದ್ದಿ ಗ್ರಾಮದ ತಿಪ್ಪೇಸ್ವಾಮಿ ಎಂಬುವವರು 1.21 ಎಕರೆ ಜಮೀನನ್ನು ಇತ್ತೀಚೆಗೆ ಖರೀದಿ ಮಾಡಿರುತ್ತಾರೆ. ಅದರ ಮ್ಯುಟೇಷನ್ ಆಗಿದ್ದು, ತನ್ನ ಹೆಸರಿಗೆ ಪ್ರತ್ಯೇಕವಾಗಿ ಪಹಣಿ ಮಾಡಿಕೊಡುವಂತೆ ಅರ್ಜಿ ಸಲ್ಲಿಸಿರುತ್ತಾರೆ. ನಂತರ ಹಲಗಲದ್ದಿ ಗ್ರಾಮ ಲೆಕ್ಕಾಧಿಕಾರಿ ನಾಗಪ್ಪ ಲಮಾಣಿ ಅವರನ್ನು ಹಲವಾರು ಬಾರಿ ಭೇಟಿ ಮಾಡಿದ್ದರೂ ಸಹಾ ಅವರು ಸ್ಪಂದಿಸಿರುವುದಿಲ್ಲ. ಇದರಿಂದಾಗಿ ಬೇಸತ್ತ ರೈತ ಚಿತ್ರದುರ್ಗ ಲೋಕಾಯುಕ್ತ ಕಚೇರಿಗೆ ಬಂದು ಪೊಲೀಸ್ ನಿರೀಕ್ಷಕರಾದ ಶ್ರೀಮತಿ ವೈ.ಎಸ್. ಶಿಲ್ಪಾ ಇವರನ್ನು ಭೇಟಿಯಾಗಿ ಅವರಿಗೆ ದೂರು ಸಲ್ಲಿಸಿರುತ್ತಾರೆ.

ಚಿತ್ರದುರ್ಗ ಲೋಕಾಯುಕ್ತ ಕಛೇರಿಯ ಪೊಲೀಸ್ ಅಧೀಕ್ಷಕರಾದ ಎನ್. ವಾಸುದೇವರಾಮ ಇವರ ಮಾರ್ಗದರ್ಶನದಲ್ಲಿ ಪ್ರಕರಣ ದಾಖಲಿಸಲಾಗಿರುತ್ತದೆ.

ಈ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸ್ ನಿರೀಕ್ಷಕರಾದ ಶ್ರೀಮತಿ ವೈ.ಎಸ್. ಶಿಲ್ಪಾ ಮತ್ತು ಅವರ ತಂಡದಿಂದ ಹಿರಿಯೂರು ತಾಲ್ಲೂಕು ಕಛೇರಿ ಆವರಣದಲ್ಲಿ ಫಿರ್ಯಾದಿಯಿಂದ ರೂ.9,000/-ಗಳ ಲಂಚದ ಹಣವನ್ನು ಪಡೆಯುವಾಗ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುತ್ತಾರೆ. ಆರೋಪಿತರಿಂದ ಲಂಚದ ಹಣವನ್ನು ಜಪ್ತಿಪಡಿಸಿಕೊಂಡು ಅವರನ್ನು ಬಂಧಿಸಿದ್ದು, ಮುಂದಿನ ತನಿಖೆಯನ್ನು ಕೈಗೊಂಡಿರುತ್ತಾರೆ.

ಈ ಸಂದರ್ಭದಲ್ಲಿ ಚಿತ್ರದುರ್ಗ ಲೋಕಾಯುಕ್ತ ಕಛೇರಿಯ, ಪೊಲೀಸ್ ನಿರೀಕ್ಷಕರುಗಳಾದ ಬಿ. ಮಂಜುನಾಥ ಮತ್ತು ಸಂಗಮನಾಥ ಹೆಚ್. ಹೊಸಮನಿ ಹಾಗೂ ಪೊಲೀಸ್ ಸಿಬ್ಬಂದಿಗಳಾದ ಶ್ರೀ ಜಿ.ಎಂ.ತಿಪ್ಪೇಸ್ವಾಮಿ, ಸಿ.ಹೆಚ್.ಸಿ., ಶ್ರೀ ಹೆಚ್. ಶ್ರೀನಿವಾಸ, ಸಿ.ಹೆಚ್.ಸಿ., ಶ್ರೀಮತಿ ಎಸ್.ಆರ್.ಪುಷ್ಪ, ಮ.ಹೆಚ್.ಸಿ., ಎಲ್.ಜಿ.ಸತೀಶ, ಸಿಪಿಸಿ, ಮಂಜುನಾಥ, ಸಿಪಿಸಿ,ಎಂ. ವೀರೇಶ್, ಸಿಪಿಸಿ, ರಾಜೇಶ್, ಸಿಪಿಸಿ, ಕೆ.ಟಿ. ಮಾರುತಿ, ಸಿಪಿಸಿ, ಆರ್.ವೆಂಕಟೇಶ್ ಕುಮಾರ್, ಇತರರು ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment