Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ आध्यात्मिक अन्य

---Advertisement---

40% ಕಮಿಷನ್ ಆರೋಪ ಮಾಡಿದ್ದ ಕೆಂಪಣ್ಣ ನಿಧನ..!

---Advertisement---

 

ಬಿಜೆಪಿ ಸರ್ಕಾರದ ವಿರುದ್ಧ 40% ಆರೋಪ ಮಾಡಿದ್ದ, ಗುತ್ತಿಗೆದಾರ ಸಂಘ್ ಅಧ್ಯಕ್ಷ ಡಿ ಕೆಂಪಣ್ಣ ಇಂದು ನಿಧನರಾಗಿದ್ದಾರೆ. ಇವರಿಗೆ 84 ವರ್ಷ ವಯಸ್ದಾಗಿತ್ತು. ಹೃದಯಘಾತದಿಂದಾಗಿ ಇಂದು ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ಜ್ಯೋತಿಪುರ ನಿವಾಸದಲ್ಲಿಯೇ ನಿಧನರಾಗಿದ್ದಾರೆ. ಕೆಂಪಣ್ಣ ಅವರ ನಿಧನಕ್ಕೆ ಆಪ್ತರು, ಗಣ್ಯರು ಕಂಬನಿ ಮಿಡಿದಿದ್ದಾರೆ.

ಗುತ್ತಿಗೆದಾರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರು, ಗುತ್ತಿಗೆದಾರರಿಗೆ ಸಮಸ್ಯೆ ಎಂದಾಗ ಇಳಿ ವಯಸ್ಸಿನಲ್ಲೂ ಅವರ ಜೊತೆಗೆ ನಿಂತು, ಸಮಸ್ಯೆ ಬಗೆಹರಿಸುತ್ತಿದ್ದರು. ಅವರಿಗಾಗಿ ಬಿಜೆಪಿ ಸರ್ಕಾರದ ವಿರುದ್ಧವೇ ಹೋರಾಟ ಮಾಡಿದ್ದರು. ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ 40% ಕಮೀಷನ್ ಆರೋಪ ಮಾಡಿದ್ದ ಕೆಂಪಣ್ಣ, ಸಿಕ್ಕಾಪಟ್ಟೆ ಸುದ್ದಿಯಾಗಿದ್ದರು. ಆ ಸಮಯದಲ್ಲಿ ಬಸವರಾಜ್ ಬೊಮ್ಮಾಯಿ ಅವರ ಸರ್ಕಾರದ ವಿರುದ್ಧ ಹೋರಾಟ ನಡೆಸಿದ್ದರು.

ಆ ಸಮಯದಲ್ಲಿ ವಿರೋಧ ಪಕ್ಷದವರಿಗೆ ಇದೊಂದು ದೊಡ್ಡ ಅಸ್ತ್ರವಾಗಿತ್ತು. ಅದರ ವಿರುದ್ಧ ದೊಡ್ಡ ಹೋರಾಟವನ್ನೇ ಮಾಡಿದ್ದರು. ಆದರೆ ಇದೀಗ ಕೆಂಪಣ್ಣ ನಿಧನ, ಗುತ್ತಿಗೆದಾರರಿಗೆ ದುಃಖವಾಗಿದೆ.

Join WhatsApp

Join Now

Join Telegram

Join Now

Leave a Comment