Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅತ್ಯಾಚಾರ ಆರೋಪದಲ್ಲಿ ತಲೆಮರೆಸಿಕೊಂಡಿದ್ದ ಜಾನಿ ಮಾಸ್ಟರ್ ಅರೆಸ್ಟ್..!

---Advertisement---

 

ಬೆಂಗಳೂರು: ಅತ್ಯಾಚಾರ ಆರೋಪ ಕೇಳಿ ಬಂದಾಗಲೇ ತಲೆ ಮರೆಸಿಕೊಂಡಿದ್ದ ಜಾನಿ ಮಾಸ್ಟರ್ ಬಂಧನವಾಗಿದೆ. ಇವರು ಖ್ಯಾತ ನೃತ್ಯ ಸಂಯೋಜಕರಾಗಿದ್ದಾರೆ. 21 ವರ್ಷದ ಡ್ಯಾನ್ಸರ್ ತನ್ನ ಮೇಲೆ ಅತ್ಯಾಚಾರವಾಗಿದೆ ಎಂದು ದೂರಿನ ಆಧಾರದ ಮೇಲೆ, ಜಾನಿ ಮಾಸ್ಟರ್ ಬಂಧನವಾಗಿದೆ. ಬೆಂಗಳೂರಿನಲ್ಲಿ ಪೊಲಿಒಸರು ಬಂಧಿಸಿದ್ದಾರೆ.

ಜಾನಿ ಮಾಸ್ಟರ್ ರಾಷ್ಟ್ರಪ್ರಶಸ್ತಿ ವಿಜೇತರಾಗಿದ್ದಾರೆ. ಆದರೆ ಈಗ ಮಾಡಿರುವ ಕೆಲಸಕ್ಕೆ ಬಹಳಷ್ಟು ಜನರಿಂದ ನಿಂದನೆ ಎದುರಿಸುತ್ತಿದ್ದಾರೆ. ಅತ್ಯಾಚಾರ ಆರೋಪ ಕೇಳಿ ಬಂದಾಗ ಮೊದಲಿಗೆ ಇದು ಸುಳ್ಳೆಂದೆ ವಾದಿಸಿದ್ದರು. ಚಿತ್ರರಂಗವೂ ಸಂತ್ರಸ್ತೆಯ ಪರವಾಗಿ ನಿಂತಾಗ ಜಾನಿ ಮಾಸ್ಟರ್ ತಲೆ ಮರೆಸಿಕೊಂಡಿದ್ದರು. ಟ್ರಾನ್ಸಿಟಿ ವಾರೆಂಟ್ ಮೇಲೆ ಅರೆಸ್ಟ್ ಮಾಡಲಾಗಿದೆ.

ಯುವತಿ ಇತ್ತೀಚೆಗೆ ಸೈಬರಾಬಾದ್ ಪೊಲೀಸರಿಗೆ, ಜಾನಿ ಮಾಸ್ಟರ್ ವಿರುದ್ಧ ದೂರು ದಾಖಲಾಗಿತ್ತು. 2019ರಲ್ಲಿ ತನ್ನನ್ನು ರಿಯಾಲಿಟಿ ಶೋ ಒಂದರಲ್ಲಿ ನೋಡಿ, ಆಕೆಗೆ ಅಸಿಸ್ಟೆಂಟ್ ಕೋರಿಯೋಗ್ರಾಫರ್ ಅವಕಾಶ ಕೊಡಿಸುವುದಾಗಿ ಹೇಳಿದ್ದರಂತೆ. ಅಸಿಸ್ಟೆಂಟ್ ಕೊರಿಯೋಗ್ರಾಫರ್ ಕೆಲಸ ನೀಡಿದ ಬಳಿಕ ಯುವತಿಯನ್ನು ಲೈಂಗಿಕ ತೃಷೆಗೆ ಬಳಸಿಕಿಂಡಿದ್ದಾರೆ. ಅಲ್ಲದೆ ನಟಿ ಕೊಟ್ಟಿರುವ ದೂರಿನಂತೆ ಜಾನಿ ಮಾಸ್ಟರ್ ಜೊತೆಗೆ ಸೇರಿ ಅವರ ಪತ್ನಿಯೂ ಹಲ್ಲೆ ಮಾಡಿದ್ದರಂತೆ.

 

ಪ್ರಕರಣ ಬೆಳಕಿಗೆ ಬಂದ ಬಳಿಕ ಸಂತ್ರಸ್ತ ಯುವತಿಗೆ ಚಿತ್ರರಂಗದ ಹಲವು ಗಣ್ಯರಿಂದ ಬೆಂಬಲ ಸಿಕ್ಕಿದೆ. ನಟ, ನಿರ್ದೇಶಕ, ನಟಿಯರು ಕೂಡ ಸಂತ್ರಸ್ತೆಯ ಪರವಾಗಿ ನಿಂತಾಗ, ಕೇಸ್ ಸ್ಟ್ರಾಂಗ್ ಆಗಿದೆ. ಹೀಗಾಗಿ ಜಾನಿ ಮಾಸ್ಟರ್ ಅನ್ನು ಬಂಧಿಸಿಲಾಗಿದೆ.

ಜಾನಿ ಮಾಸ್ಟರ್ ದಕ್ಷಿಣ ಭಾರತದ ಖ್ಯಾತ ಕೊರಿಯೋಗ್ರಾಫರ್. ದಕ್ಷಿಣ ಭಾಗದ ಎಲ್ಲಾ ಸ್ಟಾರ್ ನಟರೊಂದಿಗೆ ಕೆಲಸ ಮಾಡಿದ್ದಾರಡ. ಬಾಲಿವುಡ್ ನಲ್ಲಿ ಸಲ್ಮಾನ್ ಖಾನ್, ಅಕ್ಷಯ್ ಕುಮಾರ್ ಸೇರಿದಂತೆ ಹಲವರ ಜೊತೆಗೆ ವರ್ಕ್ ಮಾಡಿದ್ದಾರೆ. ಇನ್ನು ಸ್ಯಾಂಡಲ್ ವುಡ್ ನಲ್ಲಿಯೂ ಗುರುತಿಸಿಕೊಂಡಿದ್ದು, ಅಪ್ಪುಗೆ ಕೊರಿಯೋಗ್ರಫಿ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment