Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ | ಶಾಂತಿ ವಹಿಸಿ ಸೌಹಾರ್ದತೆ ಕಾಪಾಡಿ, ಗಲಭೆಕೋರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ: ಜಿ. ಬಿ. ವಿನಯ್ ಕುಮಾರ್ ಒತ್ತಾಯ

Facebook
Twitter
Telegram
WhatsApp

 

 

ಸುದ್ದಿಒನ್, ದಾವಣಗೆರೆ, ಸೆಪ್ಟೆಂಬರ್. 20 : ದಾವಣಗೆರೆ ನಗರದ ಜನರು ಶಾಂತಿಪ್ರಿಯರು. ಸಾಮರಸ್ಯದಿಂದ ಜೀವನ ಸಾಗಿಸಬೇಕು. ಯಾವುದೇ ಕಾರಣಕ್ಕೂ ಗಲಭೆ ಮಾಡಬಾರದು. ಪೊಲೀಸರು ಗಲಭೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ವಾಭಿಮಾನಿ ಬಳಗದ ಪ್ರಮುಖರಾದ ಜಿ. ಬಿ. ವಿನಯ್ ಕುಮಾರ್ ಮನವಿ ಮಾಡಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಗರದಲ್ಲಿ ಇದುವರೆಗೆ ಯಾವುದೇ ಗಲಾಟೆಯಾಗಿರಲಿಲ್ಲ. ಎರಡೂ ಕೋಮಿನ ಜನರು  ಶಾಂತಿಯುತವಾಗಿರಬೇಕು. ಕಾನೂನು ಕೈಗೆತ್ತಿಕೊಳ್ಳಬಾರದು. ಗಲಾಟೆ ಮಾಡುವುದರಿಂದ ಯಾರಿಗೂ ಅನುಕೂಲವಾಗದು. ಬಡವರು, ವ್ಯಾಪಾರಿಗಳು ಸೇರಿದಂತೆ ಎಲ್ಲಾ ವರ್ಗದವರಿಗೂ ತೊಂದರೆ ಆಗುತ್ತಿದೆ. ಪೊಲೀಸರು ತಪ್ಪು ಯಾರೇ ಮಾಡಿದ್ದರೂ ಮುಲಾಜಿಲ್ಲದೇ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅಭಿವೃದ್ಧಿ ವಿಚಾರದಲ್ಲಿ ಎಲ್ಲರ ಸಹಕಾರ ಅಗತ್ಯ. ಕೋಮು ಪ್ರಚೋದನೆ ಯಾರೇ ಮಾಡಿದರೂ ತಪ್ಪು. ಬೇತೂರು ರಸ್ತೆಯಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಅಶಾಂತಿ ವಾತಾವರಣ ನಿರ್ಮಾಣ ಆಗಿತ್ತು. ಪೊಲೀಸರು ಬಂಧಿಸುವ ವೇಳೆ ಅಮಾಯಕರನ್ನು ಬಂಧಿಸಬಾರದು. ಕಿಡಿಗೇಡಿಗಳನ್ನು ಗುರುತಿಸಿ ಜೈಲಿಗಟ್ಟಲಿ. ಎರಡೂ ಕೋಮಿನ ಸಮಾಜದ ಮುಖಂಡರು ಯುವಕರಿಗೆ ತಿಳಿಹೇಳಬೇಕು. ಗಲಾಟೆಗೆ ಮುಂದೆ ಆಸ್ಪದ ನೀಡಬಾರದು ಎಂದು ಹೇಳಿದ್ದಾರೆ.

ಪೊಲೀಸರು ಬಂಧಿಸುವ ವೇಳೆ ಅಮಾಯಕರನ್ನು ಬಂಧಿಸುವ ಕೆಲಸ ಆಗುತ್ತಿದೆ ಎಂಬ ಮಾತೂ ಕೇಳಿ ಬರುತ್ತಿದೆ. ಸಿಸಿಟಿವಿ, ಕಲ್ಲು ಎಸೆದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಂಡರೆ ಮತ್ತೆ ಮರುಕಳಿಸುವುದಿಲ್ಲ. ಯಾರೂ ಕೋಮು ಪ್ರಚೋದಕ ಹೇಳಿಕೆ ನೀಡಬಾರದು. ಯಾವುದೇ ರಾಜಕೀಯ ಪಕ್ಷಗಳು ಓಲೈಕೆ ರಾಜಕಾರಣ ಮಾಡಬಾರದು. ಒಂದು ಕೋಮಿನ ಪರ ನಿಲ್ಲಬಾರದು. ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಆಗುವಂತೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಸಮಾಜದಲ್ಲಿ ಸಾಮರಸ್ಯ ಮೂಡಬೇಕು. ಶಾಂತಿ ನೆಲೆಸಬೇಕು. ಎಲ್ಲಾ ಧರ್ಮದವರೂ ಸಹೋದರರಂತೆ ಬಾಳಬೇಕು. ಯಾರೋ ಕೆಲ ಕಿಡಿಗೇಡಿಗಳು ಎಸಗುವ ಕೃತ್ಯಕ್ಕೆ ಸಮಾಜದ ಸ್ವಾಸ್ಥ್ಯ ಹಾಳಾಗಬಾರದು. ಯುವಕರು ಜಾಗೃತರಾಗಬೇಕು. ಯಾರೋ ನೀಡಿದ ಕುಮ್ಮಕ್ಕಿಗೆ ಬಲಿಯಾಗಬಾರದು. ಆದ್ದರಿಂದ ಎಲ್ಲಾ ಕೋಮಿನವರು ಶಾಂತಿ, ಸೌಹಾರ್ದ, ತಾಳ್ಮೆಯಿಂದ ವರ್ತಿಸಬೇಕು ಎಂದು ಜಿ. ಬಿ. ವಿನಯ್ ಕುಮಾರ್ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಖಾಲಿ ನಿವೇಶನ ಸ್ವಚ್ಚಗೊಳಿಸಿ, ನಾಮಫಲಕ ಅಳವಡಿಸಿಕೊಳ್ಳಲು ಸೂಚನೆ

ಚಿತ್ರದುರ್ಗ. ಸೆ.20: ಚಿತ್ರದುರ್ಗ ನಗರದ ವ್ಯಾಪ್ತಿಯ ಸಾರ್ವಜನಿಕರು ತಮ್ಮ ನಿವೇಶನಗಳನ್ನು ಸ್ವಚ್ಛಗೊಳಿಸಿಕೊಂಡು ನಾಮಫಲಕ ಅಳವಡಿಸಿಕೊಳ್ಳಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ. ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿರುವ ಖಾಲಿ ನಿವೇಶಗಳನ್ನು ಸ್ವಚ್ಚಗೊಳಿಸಲು ಅನೇಕ ಕಾರ್ಯಕ್ರಮ

ಬಿಜೆಪಿ ನಾಯಕರು HIV ಪರೀಕ್ಷೆ ಮಾಡಿಸಿಕೊಂಡು.. ಏಡ್ಸ್ ತಡೆಗೆ ಸಹಕರಿಸಬೇಕು : ಕಾಂಗ್ರೆಸ್ ಟ್ವೀಟ್..!

ಬೆಂಗಳೂರು: ಆರ್ ಆರ್ ನಗರ ಶಾಸಕ ಮುನಿರತ್ನ ಮಾಡಿಕೊಂಡಿದ್ದ ಪ್ಲ್ಯಾನ್ ಕೇಳಿ ರಾಜ್ಯವೇ ಬೆಚ್ಚಿ ಬಿದ್ದಿದೆ. ಏಡ್ಸ್ ತಡೆಗಾಗಿ ಎಲ್ಲಾ ರಾಜ್ಯಗಳ ಸರ್ಕಾರ ಹೋರಾಟ‌ನಡೆಸುತ್ತಿದ್ದರೆ, ಇಲ್ಲಿ ಮುನಿರತ್ನ ಅವರೇ ಏಡ್ಸ್ ಸೋಂಕು ಹತ್ತಿಸುವ ಹುನ್ನಾರ

ತಿರುಪತಿ ಲಡ್ಡು ವಿವಾದ ಕೇಳಿ ಆಶ್ಚರ್ಯ ಆಯ್ತು : ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಸದ್ಯ ದೇಶದೆಲ್ಲೆಡೆ ತಿರುಪತಿ ತಿಮ್ಮಪ್ಪನ ಪ್ರಸಾದ ಲಡ್ಡು ವಿಚಾರವೇ ಸದ್ದು ಮಾಡುತ್ತಿದೆ. ಪ್ರಸಾದಕ್ಕೆ ಪ್ರಾಣಿ ಕೊಬ್ಬನ್ನು ಬಳಕೆ ಮಾಡುತ್ತಾರೆ ಎಂಬ ವಿಚಾರ ಭಕ್ತರ ಭಾವನೆಗೆ ಧಕ್ಕೆ ತಂದಿದೆ. ಇದೀಗ ಈ ಬಗ್ಗೆ ಕೆ.ಎಸ್.ಈಶ್ವರಪ್ಪ

error: Content is protected !!