Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶ್ವಾಸ ಇರುವವರೆಗೂ ವಿಶ್ವಾಸ ಕಳೆದುಕೊಳ್ಳಬೇಡಿ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

---Advertisement---

 

 

ಸುದ್ದಿಒನ್ : ಶ್ವಾಸ ಇರುವವರಿಗೂ ವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು.

ಮಾಲ್ಡೀವ್ಸ್ ದೇಶದ ವಿಲ್ಲಾ ನೌಟೀಕ ಪ್ಯಾರಡೇಸ್ ದ್ವೀಪದಲ್ಲಿ ಶುಕ್ರವಾರ ನಡೆದ ವಿಶ್ವ ಸಾಧಕರ ಶೃಂಗಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವಾಸವೇ ವಿಶ್ವ. ಮನುಜ ಮತ ವಿಶ್ವಪಥ, ದಯೆ ಎಲ್ಲಾ ಧರ್ಮಗಳ ಮೂಲ. ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ವಿಶ್ವಸಾಧಕರು ಶ್ವಾಸ ಇರುವವರಿಗೂ ವಿಶ್ವಾಸ ಉಳಿಸಿಕೊಂಡಾಗ ಅಜರಾಮರ ದೃವತಾರೆಯಾಗುತ್ತಾರೆ ಎಂದು ತಿಳಿಸಿದರು.

ಸ್ವಧರ್ಮ ನಿಷ್ಠೆ, ಪರಧರ್ಮ ಸಹಿಷ್ಣೋತೆ ಇರಲಿ. ಎಲೆಮರಿಕಾಯಿಗಳಂತಹ ಸಾಧಕರನ್ನು ವಿಶ್ವಕ್ಕೆ ಪರಿಚಯಿಸುವ ಕಾರ್ಯ ಜಗತ್ತಿಗೆ ಮಾದರಿ. ಸಂಸ್ಕೃತಿ, ಸಂಸ್ಕರ ಭಾರತದ ಹೆಮ್ಮೆ ಹಾಗೂ ಗಟ್ಟಿತನದಿಂದ ಕೂಡಿದೆ. ಹಾಗಾಗಿ ಭಾರತ ಜಗತ್ತಿಗೆ ಸಂಸ್ಕಾರದ ರಾಯಭಾರಿಯಾಗಿದೆ ಎಂದು ಹೇಳಿದರು.

ನಾಡಿನ ಆದಿಬೀದಿಗಳಲ್ಲಿ ಆಗುವ ಸಂಘರ್ಷ, ರಾಷ್ಟ್ರದ ಗಡಿ ರೇಖೆಗಳ ತನಕ ನಡೆಯುತ್ತದೆ. ಕೆಲವು ಸಂಘರ್ಷಗಳು ನಕಾರಾತ್ಮಕದಿಂದ ಕೂಡಿರುತ್ತವೆ. ಇನ್ನೂ ಕೆಲವು ಸಂಘರ್ಷಗಳು ಸಕಾರಾತ್ಮಕದಿಂದ ಕೂಡಿರುತ್ತವೆ. ಸಂಸ್ಕಾರವಂತ ಸಾಧಕರ ಸಂಘರ್ಷ ಇತಿಹಾಸದ ಪುಟಗಳಲ್ಲಿ ಸುವರ್ಣಾಕ್ಷರದಲ್ಲಿ ದಾಖಲಾಗಿದೆ. ಅಂತಹ ಸಾಧಕರು, ಸಂತರು, ಮಹಾಂತರು ದಾರ್ಶನಿಕರಾಗುತ್ತಾರೆ.

ಕನ್ನಡ ನಾಡಿನ ಬಸವ. ಸಿದ್ದರಾಮ. ಹಾಗೂ ಶರಣರು ಮತ್ತು ಕನಕದಾಸ, ಪುರಂದರದಾಸರು ನಾಡಿನ ಅಪ ಮೌಲ್ಯಗಳ ವಿರುದ್ಧ ಸಂಘರ್ಷ ಮಾಡುತ್ತಾ ಸಂಸ್ಕಾರದ ಸಧ್ಬಾವನೆ ನೀಡಿದ್ದಕ್ಕಾಗಿ ಅವರು ಎಂದಿಗೂ ಧ್ರುವತಾರೆಗಳಾಗಿದ್ದಾರೆ. ಭಾರತದ ಮಟ್ಟಿಗೆ ನಾರಾಯಣ ಗುರು, ಗೌತಮ ಬುದ್ಧ, ಅಂಬೇಡ್ಕರ್ ಹಾಗೂ ಜೈನ ತೀರ್ಥಂಕರು, ಸಿಖ್ಖ ಗುರುಗಳು ಸಮಾಜೋದ್ಧಾರ್ಮಿಕ ದಾರ್ಶನಿಕರಾಗಿದ್ದಾರೆ. ಜಗತ್ತಿನ ನೂತನ ಧರ್ಮಗಳಿಂದ ಹಿಡಿದು ಪ್ರಾಚೀನ ಧರ್ಮಗಳ ತನಕ ಮೂಲ ಸಂದೇಶ ದಯೆ ಮತ್ತು ಶಾಂತಿ. ಯಾವ ಧರ್ಮಗಳು ಅಶಾಂತಿಯನ್ನು ಬಯಸುವುದಿಲ್ಲ. ನಕಾರಾತ್ಮಕ ಸಂಘರ್ಷದ ಪ್ರಚೋದನೆ ನೀಡುವುದಿಲ್ಲ. ಹೀಗಾಗಿ ಎಲ್ಲಾ ಧರ್ಮಗಳು ಸರ್ವ ಶ್ರೇಷ್ಠ. ಜಗತ್ತಿನ ಏಳು ಪ್ರಾಚೀನ ನಾಗರಿಕತೆಯ ಸಂಸ್ಕೃತಿಗಳಲ್ಲಿ ಭಾರತೀಯ ನಾಗರಿಕತೆ ಮಾತ್ರ ಉಳಿದಿದೆ. ಕಾರಣ ಭಾರತ ದೇಶದಲ್ಲಿ ಜನ್ಮಿಸಿದಂತಹ ಧರ್ಮ ಅನೇಕ ಕಾಲಘಟ್ಟಗಳಲ್ಲಿ ಉದಯಿಸಿದ ಧಾರ್ಮಿಕರು ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಗಟ್ಟಿಗೊಳಿಸುತ್ತಾ ಬಂದರು. ಆಧುನಿಕ ಕಾಲದಲ್ಲಿ ಪ್ರತಿ ಮನೆಯ ಸ್ತ್ರೀ ಅದನ್ನು ಕಾಪಾಡುತ್ತಿದ್ದಾಳೆ. ಹಾಗಾಗಿ ಆಧುನಿಕ ನಾಗರಿಕತೆಯ ಸಂಸ್ಕಾರದ ರಾಯಭಾರಿ ಮಹಿಳೆ. ಸಂಸ್ಕೃತಿಯ ರಾಯಭಾರಿ ಈಗಿನ ಯುವ ಪೀಳಿಗೆ ಎಂದು ತಿಳಿಸಿದರು.

ವೇದಿಕೆಯಲ್ಲಿ ವಿಶ್ವವಾಣಿ ಪತ್ರಿಕೆಯ ಮುಖ್ಯ ಸಂಪಾದಕ ವಿಶ್ವೇಶ್ವರ ಭಟ್ ಅಧ್ಯಕ್ಷತೆವಹಿಸಿದ್ದರು. ಮಾಜಿ ಸಚಿವೆ, ನಟಿ ಡಾ.ಜಯಮಾಲ ಹಾಗೂ ನಟಿ ಸೌಂದರ್ಯ, ಮಾಲ್ಡೀವ್ಸ್ ಅಮಿಯದ್ ಅಬ್ದುಲ್ ಉಪಸ್ಥಿತರಿದ್ದರು. 13 ಜನ ಸಾಧಕರನ್ನು ಗೌರವಿಸಲಾಯಿತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment