Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸರ್ಕಾರಿ ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಣೆ : ಎಷ್ಟು ದಿನ..? ಯಾವಾಗಿಂದ ಎಲ್ಲಾ ಮಾಹಿತಿ ಇಲ್ಲಿದೆ..!

Facebook
Twitter
Telegram
WhatsApp

ಬೆಂಗಳೂರು: ಶಾಲಾ ಮಕ್ಕಳು ದಸರಾ ರಜೆ ಯಾವಾಗ ಬರುತ್ತೆ ಅಂತ ಕಾಯ್ತಾ ಇರ್ತಾರೆ. 15-20 ದಿನಗಳ ಕಾಲ ರಜೆ ಸಿಕ್ಕರು ಕುಟುಂಬಸ್ಥರ ಜೊತೆಗೆ ಆರಾಮವಾಗಿ ಪ್ರವಾಸ, ನೆಂಟರಿಷ್ಟರ ಮನೆ ಅಂತ ಸುತ್ತಾಡಿಕೊಂಡು ಬರಬಹುದು ಎಂಬ ಖುಷಿ. ಈಗ ನಾಡ ಅಧಿದೇವತೆಯ ಸಂಭ್ರಮಕ್ಕೂ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್ 3 ರಿಂದ ದಸರಾ ಹಬ್ಬ ಜರುಗಲಿದೆ. ಈಗಾಗಲೇ ರಾಜ್ಯ ಸರ್ಕಾರ ದಸರಾ ಉದ್ಘಾಟನೆಯ ಬಗ್ಗೆ ಅಧಿಕೃತ ಮಾಹಿತಿಯನ್ನು ನೀಡಿದ್ದಾರೆ.

ಅಕ್ಟೋಬರ್ 3ರಂದು ದಸರಾ ಮಹೋತ್ಸವ ಆರಂಭವಾಗಿ ಅಕ್ಟೋಬರ್ 12ಕ್ಕೆ ತೆರೆಬೀಳಲಿದೆ. ಅಂದು ಜಂಬೂ ಸವಾರಿ ಮೇಲೆ ತಾಯೊ ಚಾಮುಂಡಿ ಮೆರವಣಿಗೆ ಸಾಗಲಿದೆ. ಈ ಸಮಯದಲ್ಲಿ ಮಕ್ಕಳಿಗೆ ದಸರಾ ರಜೆ ಎಂದು ನೀಡಲಾಗುತ್ತದೆ. ಸರ್ಕಾರಿ ಶಾಲಾ ಮಕ್ಕಳಿಗೆ ಅಕ್ಟೋಬರ್ 3ರಿಂದ ಅಕ್ಟೋಬರ್ 20ರ ತನಕ ರಜೆ ನೀಡಲಾಗಿದೆ. ಅಕ್ಟೋಬರ್ 2ರಂದು ಗಾಂಧಿ ಜಯಂತಿ ಆಚರಣೆ ಮಾಡಿ ರಜೆ ನೀಡಲಾಗುತ್ತದೆ. ಅಕ್ಟೋಬರ್ 21ರಿಂದ ಶಾಲೆಗಳು ಆರಂಭವಾಗಲಿವೆ.

 

ಕರ್ನಾಟಕದ ಎಲ್ಲಾ ಸರ್ಕಾರಿ ಶಾಲೆಗಳು, ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳಿಗೆ ದಸರಾ ರಜೆ ಇರಲಿದೆ. ದಸರಾ ರಜೆ ಹತ್ತಿರವಾಗುತ್ತಿರುವ ಕಾರಣ, ಶಾಲೆಗೆ ಎಷ್ಟು ದಿನ ರಜೆ ಇರಲಿದೆ ಎಂಬುದನ್ನು ಅಧಿಕೃತವಾಗಿ ಘೋಷಣೆ ಮಾಡಿದೆ. ಇನ್ನು 2024ನೇ ಮೈಸೂರು ದಸರಾವನ್ನು ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ ಅವರು ಉದ್ಘಾಟನೆ ಮಾಡಲಿದ್ದಾರೆ. ಈ ಬಾರಿಯ ದಸರಾ ಕಾರ್ಯಕ್ರಮ ಬಹಳ ಅದ್ದೂರಿಯಿಂದ ನಡೆಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರತಿಯೊಬ್ಬರು ಒಂದೊಂದು ಗಿಡ ನೆಟ್ಟು ಪರಿಸರವನ್ನು ಜೋಪಾನ ಮಾಡಿ : ದಿನೇಶ್ ಪೂಜಾರಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 20 : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ತುರುವನೂರು ವಲಯದ ಚಿಪ್ಪಿನಕೆರೆ ಕಾರ್ಯಕ್ಷೇತ್ರದಲ್ಲಿ

ಒಳ ಮೀಸಲಾತಿ | ಮಾದಿಗ ಸಮುದಾಯದ ರಾಜಕಾರಣಿಗಳು ರಾಜಿನಾಮೆ ನೀಡಲಿ : ಪ್ರೊ.ಸಿ.ಕೆ.ಮಹೇಶ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 20 : ಒಳ ಮೀಸಲಾತಿ ಜಾರಿಗೊಳಿಸುವ ಅಧಿಕಾರವನ್ನು ಆಯಾ ರಾಜ್ಯ ಸರ್ಕಾರಗಳಿಗಿದೆ ಎಂದು ಸುಪ್ರೀಂಕೋರ್ಟ್

ಚಿತ್ರದುರ್ಗ | ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿ.ಐ.ಟಿ.ಯು. ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 20 : ಕೊಲ್ಕತ್ತಾದಲ್ಲಿ ಟೈನಿ ವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿರುವವರನ್ನು ಕಠಿಣ ಶಿಕ್ಷೆಗೊಳಪಡಿಸಿ ನಿಸ್ಪಕ್ಷಪಾತ

error: Content is protected !!