Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಎಸ್ಐಟಿಗೆ ಮುನಿರತ್ನ ಕೇಸ್ : ಒಕ್ಕಲಿಗರ ಸಮುದಾಯಕ್ಕೆ ಮಣಿದ ರಾಜ್ಯ ಸರ್ಕಾರ..!

---Advertisement---

ಬೆಂಗಳೂರು: ಆರ್ ಆರ್ ನಗರದ ಶಾಸಕ ಮುನಿರತ್ನ ಜಾತಿ ನಿಂದನೆ ಹಾಗೂ ವಂಚನೆ ಕೇಸಲ್ಲಿ ಜಾಮೀನು ಪಡೆದಿದ್ದರು. ಆದರೆ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಅರೆಸ್ಟ್ ಆದಂತ ಮುನಿರತ್ನ ವಿರುದ್ಧ ಕೆಲವು ಗಂಭೀರ ಆರೋಪಗಳು ಕೇಳಿ ಬಂದಿವೆ. ಇದೀಗ ಸಿಎಂ ಸಿದ್ದರಾಮಯ್ಯ ಸರ್ಕಾರ ಮುನಿರತ್ನ ಕೇಸನ್ನು ಎಸ್ಐಟಿಗೆ ವಹಿಸಿದೆ.

ಇತ್ತಿಚೆಗಷ್ಟೇ ಒಕ್ಕಲಿಗರ ಸಮುದಾಯದ ಮಂದಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ಮುನಿರಯ್ನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಸರ್ಕಾರ ಒಕ್ಕಲಿಗರ ಮನವಿಗೆ ಸ್ಪಂದಿಸಿದ್ದು, ಎಸ್ಐಟಿ ತನಿಖೆಗೆ ವಹಿಸಿದೆ.

ಅತ್ಯಾಚಾರ ಪ್ರಕರಣ ಮಾತ್ರವಲ್ಲ ಮುನಿರತ್ನ ವಿರುದ್ಧ ಗಂಭೀರವಾದಂತ ಪ್ರಕರಣಗಳು ಕೇಳಿ ಬರುತ್ತಿವೆ. ಹೀಗಾಗಿ ಅವರ ವಿರುದ್ಧ ತನಿಖೆ ನಡೆಸಲು ಎಸ್ಐಟಿ ತಂಡ ರಚನೆ ಮಾಡಿದೆ. ವಿಶೇಷ ತಂಡ ಇದೀಗ ಮುನಿರತ್ನ ಮೇಲಿನ ತನಿಖೆಯನ್ನು ಚುರುಕುಗೊಳಿಸಲಿದೆ. ಹಿರಿಯ ಪೋಲಿಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡ ರಚಿಸಲಾಗಿದೆ. ಸಿಐಡಿ ಅಪರ ಪೋಲಿಸ್ ಮಹಾನಿರ್ದೇಶಕ ಬಿ.ಕೆ ಸಿಂಗ್ ನೇತೃತ್ವದಲ್ಲಿ ತನಿಖಾ ತಂಡ ರಚನೆಯಾಗಿದೆ. ತಂಡದಲ್ಲಿ ಸದಸ್ಯರಾಗಿ ಕೇಂದ್ರ ವಲಯ ಪೋಲಿಸ್ ಮಹಾನಿರೀಕ್ಷಕ ಲಭೂರಾಮ್, ರೈಲ್ವೇಸ್ ಪೋಲಿಸ್ ಅಧೀಕ್ಷಕಿ ಸೌಮ್ಯಲತಾ ಹಾಗೂ ಪೋಲಿಸ್ ಅಧೀಕ್ಷಕ ಸೈಮನ್ ಅವರು ಇದ್ದಾರೆ. ನಿನ್ನೆಯಷ್ಟೇ ಕಾಂಗ್ರೆಸ್​​ನ ಒಕ್ಕಲಿಗ ನಾಯಕರು ಎಸ್ಐಟಿ ರಚಿಸುವಂತೆ ಸಿಎಂಗೆ ಮನವಿ ಸಲ್ಲಿಸಿದ್ದರು. ಹೀಗಾಗಿ ಈಗ ಎಸ್​​ಐಟಿ ರಚನೆ ಮಾಡಲಾಗಿದೆ. ಈಗಾಗಲೇ ಮುನಿರತ್ನ ವಿರುದ್ಧ ದೂರುಗಳು ದಾಖಲಾಗಿವೆ. ಜೊತೆಗೆ ಹಳೆ ಕೇಸುಗಳು ರಿಓಪನ್ ಆಗಲಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...