Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ವಿಚಾರಣೆ ನಡೆಯಲಿದೆ ದರ್ಶನ್ ಬೇಲ್ ಅರ್ಜಿ : ಮಗನಿಗೆ ದೈರ್ಯ ತುಂಬಿದ ಮೀನಾ ತೂಗುದೀಪ..!

---Advertisement---

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್, ನೂರು ದಿನಗಳ ಬಳಿಕ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ನಿನ್ನೆ ಅಂದ್ರೆ ಶನಿವಾರ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ 57ನೇ ಸಿಸಿಹೆಚ್ ನ್ಯಾಯಾಲಯ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಿದೆ. ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದರು ಸಹ ಟೆನ್ಶನ್ ನಲ್ಲಿಯೇ ಕಾಲ ಕಳೆಯುತ್ತಿದ್ದಾರೆ.

ದರ್ಶನ್ ಗೆ ಹಲವು ಸೌಲಭ್ಯಗಳು ಜೈಲಿನಲ್ಲಿವೆ. ದರ್ಶನ್ ಗೆ ಅಂತಲ್ಲ ಅರೋಪಿಗಳಿಗೆ ಇರುವಂತ ಸೌಲಭ್ಯಗಳು. ಅಂದ್ರೆ ದರ್ಶನ್ ಮನೆಯವರ ಜೊತೆಗೆ ದೂರವಾಣಿಯ ಮೂಲಕವೂ ಮಾತನಾಡಬಹುದು. ಅದು ಕೇವಲ 5 ನಿಮಿಷ‌ ಮಾತ್ರ. ಪ್ರಿಸನ್ ಕಾಲ್ ಸಿಸ್ಟಮ್ ನಡಿಯಲ್ಲಿ ತನ್ನ ತಾಯಿಯ ಜೊತೆಗೆ ದರ್ಶನ್ ಮಾತನಾಡಿದ್ದಾರೆ. ಈ ಪರಿಸ್ಥಿತಿಯಲ್ಲಿ ದರ್ಶನ್ ಧೈರ್ಯ ತುಂಬುವವರೇ ಬೇಕಾಗಿರುವುದು. ಹೆತ್ತ ಕರುಳು ಮಗ ಸಂಕಟ ಪಡುವುದನ್ನು ಸಹಿಸದ ಕಾರಣ ಧೈರ್ಯ ತುಂಬಿದ್ದಾರೆ.

ದೂರವಾಣಿಯಲ್ಲಿ ಮಾತನಾಡಿದ ಮೀನಾ ತೂಗುದೀಪ, ಕೆಟ್ಟ ಗಳಿಗೆಯಿಂದ ಘಟನೆ ನಡೆದು ಹೋಗಿದೆ, ಧೈರ್ಯವಾಗಿರು. ರಾಜರಾಜೇಶ್ವರಿ ತಾಯಿ, ಚಾಮುಂಡೇಶ್ವರಿ ತಾಯಿ ಆಶೀರ್ವಾದ ನಿನ್ನ ಮೇಲಿದೆ. ಒಳ್ಳೆಯದ್ದೇ ಆಗುತ್ತೆ. ನಾನು ಮತ್ತೆ ಬಳ್ಳಾರಿಗೆ ಬರುತ್ತೇನೆ ಎಂದು ಧೈರ್ಯ ತುಂಬಿದ್ದಾರೆ. ತಾಯಿಯ ಜೊತೆಗೆ ಮಾತನಾಡುತ್ತಾ, ದರ್ಶನ್ ಭಾವುಕರಾಗಿದ್ದಾರೆ ಎನ್ನಲಾಗಿದೆ.

ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದು, ನಿನ್ನೆಯಿಂದ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ದರ್ಶನ್ ಕೂಡ ಆದಷ್ಟು ಬೇಗ ಜಾಮೀನು ಸಿಗಲಿ ಎಂದು ದೇವರಲ್ಲಿ ಬೇಡಿಕೊಳ್ಳುತ್ತಿದ್ದಾರೆ. ಅವರ ಅಭಿಮಾನಿಗಳು ಎಲ್ಲಾ ದೇವರಿಗೂ ವಿಶೇಷ ಪೂಜೆ ಮಾಡಿಸುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...