Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿ ತಾಲೂಕು ಅಧ್ಯಕ್ಷರಾಗಿ ಮಂಚಲದೊರೆ ರಮೇಶ್ ಆಯ್ಕೆ

Facebook
Twitter
Telegram
WhatsApp

 

ಗುಬ್ಬಿ: ಭ್ರಷ್ಟಾಚಾರ ರಹಿತ ಸಮಾಜ ನಿರ್ಮಾಣಕ್ಕಾಗಿ ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿ ಸ್ಥಾಪಿತವಾಗಿದ್ದು. ಜಿಲ್ಲೆಯ ಯಾವುದೇ ಭಾಗದಲಾಗಲಿ ಜನರಿಗೆ ತೊಂದರೆ ಆದರೆ ಕೂಡಲೇ ಸಮಿತಿ ವತಿಯಿಂದ ದಮನಿತರಿಗೆ ನ್ಯಾಯ ದೊರಕಿಸಿಕೊಡಲಾಗುವುದು ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿ ಜಿಲ್ಲಾಧ್ಯಕ್ಷ ಶೇಕ್ ಅನ್ಸರ್ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಹಾಗೂ ಜನರ ಜಾಗೃತಿ ಸಭೆ ಕುರಿತು ಮಾತನಾಡಿ ಸಾಮಾಜಿಕ ಪಿಡುಗುಗಳಿಂದ ಜನರನ್ನು ರಕ್ಷಿಸುವ ಉತ್ತಮ ಸಮಿತಿಯಾಗಿದೆ ಎಂದರು.

ಕಾನೂನು ಸಲಹೆಗಾರ ಚೇಳೂರು ಪ್ರವೀಣ್ ಗೌಡ ಮಾತನಾಡಿ ಮಾನವ ಹಕ್ಕುಗಳ ಉಲ್ಲಂಘನೆಯನ್ನು ತಡೆದು. ಬಾಲಕಾರ್ಮಿಕ ಪದ್ಧತಿ, ಬಾಲ್ಯ ವಿವಾಹ ಸೇರಿದಂತೆ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯದ ವಿರುದ್ಧ ನಿರಂತರವಾಗಿ ಹೋರಾಡುವ ಮೂಲಕ ಶಾಲಾ ಕಾಲೇಜುಗಳಲ್ಲಿ, ಗ್ರಾಮಗಳಲ್ಲಿ ಜನರಿಗೆ ಜಾಗೃತಿ ಮೂಡಿಸಿ ಸಮ ಸಮಾಜ ನಿರ್ಮಾಣ ಮಾಡುವ ಉದ್ದೇಶಗಳನ್ನು ಸಮಿತಿ ಒಳಗೊಂಡಿದೆ ಎಂದು ತಿಳಿಸಿದರು.

ತಾಲೂಕು ಅಧ್ಯಕ್ಷ ಮಂಚಲ ದೊರೆ ರಮೇಶ್ ಮಾತನಾಡಿ ನನ್ನನ್ನು ಗುರುತಿಸಿ ತಾಲೂಕ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ರಾಜ್ಯಾಧ್ಯಕ್ಷ ಸಂತೋಷ್ ರವರಿಗೆ ಹಾಗೂ ಜಿಲ್ಲಾ ಮಟ್ಟದ ಎಲ್ಲ ಪದಾಧಿಕಾರಿಗಳಿಗೆ ಅಭಿನಂದನೆ ತಿಳಿಸುತ್ತೇನೆ. ಸಮಿತಿ ವತಿಯಿಂದ ಆರೋಗ್ಯ ಶಿಬಿರ, ಮಕ್ಕಳಗೆ ಕಾನೂನಿನ ಅರಿವು ಮುಂತಾದ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಸಭೆಯಲ್ಲಿ ಗೌರವಾಧ್ಯಕ್ಷ ಹನುಮಂತರಾಯಪ್ಪ, ಕಾರ್ಯದರ್ಶಿ ಶೇಕ್ ಮಹಮ್ಮದ್, ಮಹಿಳಾ ಘಟಕದ ಸಾನಿಯ ಕೌಸರ್, ಮಂಜುಳ ಎಂ, ಅಂಜಲ, ವಿಕಾಸ್ ಮುಂತಾದವರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿ ತಾಲೂಕು ಅಧ್ಯಕ್ಷರಾಗಿ ಮಂಚಲದೊರೆ ರಮೇಶ್ ಆಯ್ಕೆ

  ಗುಬ್ಬಿ: ಭ್ರಷ್ಟಾಚಾರ ರಹಿತ ಸಮಾಜ ನಿರ್ಮಾಣಕ್ಕಾಗಿ ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿ ಸ್ಥಾಪಿತವಾಗಿದ್ದು. ಜಿಲ್ಲೆಯ ಯಾವುದೇ ಭಾಗದಲಾಗಲಿ ಜನರಿಗೆ ತೊಂದರೆ ಆದರೆ ಕೂಡಲೇ ಸಮಿತಿ ವತಿಯಿಂದ ದಮನಿತರಿಗೆ ನ್ಯಾಯ ದೊರಕಿಸಿಕೊಡಲಾಗುವುದು ಎಂದು

ಕೌಶಲ್ಯಾಭಿವೃದ್ಧಿ ಶಿಕ್ಷಣಕ್ಕೆ ಒತ್ತು ನೀಡಿ : ಡಾ. ಶಿವಕುಮಾರ್

    ಚಿತ್ರದುರ್ಗ, ಸೆ, 22 : ಸಿಟ್ಟು, ಅಹಂಕಾರ, ದ್ವೇಷ, ಅತಿಯಾಸೆ ಬಿಟ್ಟು, ಇರುಷ್ಟರಲ್ಲಿ ಸಂತೃಪ್ತಿಯಿಂದ ಜೀವನ ಸಾಗಿಸುವ, ಅಗಾಧ ಐಶ್ವರ್ಯ ಇದ್ದರೂ ಸರಳವಾದ ಬದುಕನ್ನ ನಡೆಸುವಂಥದ್ದು ಒತ್ತಡ ಮುಕ್ತ ಬದುಕಿಗೆ ರಹದಾರಿ.

ರೇಣುಕಾಸ್ವಾಮಿ ಕೊಲೆಯಲ್ಲಿ ದರ್ಶನ್ ಪಾತ್ರವಿಲ್ಲ.. ವಿನಯ್, ಪವನ್ ಸೂಚನೆ ಮೇರೆಗೆ ಅಪಹರಣವಾಗಿದೆ : ಜಾಮೀನು ಅರ್ಜಿಯಲ್ಲಿ ಉಲ್ಲೇಖ..!

ಬೆಂಗಳೂರು: ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಪ್ಲ್ಯಾನ್ ಮಾಡಿ ಕರೆತಂದು, ಪಟ್ಟಣಗೆರೆ ಶೆಡ್ ನಲ್ಲಿ ಕೊಲೆ ಮಾಡಲಾಗಿದೆ. ಈ ಸಂಬಂಧ ಪೊಲೀಸರು 17 ಆರೋಪಿಗಳನ್ನು ಬಂಧಿಸಿದ್ದಾರೆ. ಅದರಲ್ಲಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದರೆ ದರ್ಶನ್ ಎ2 ಆರೋಪಿಯಾಗಿದ್ದಾರೆ.

error: Content is protected !!