ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಗಗನಾ ಬಾರಿ ಈಗ ಕರ್ನಾಟಕದಾದ್ಯಂತ ಮನೆ ಮಾತಾದ ಹೆಸರು. ಮಹಾನಟಿ ಎಂಬ ರಿಯಾಲಿಟಿ ಶೋ ಮೂಲಕ ಎಲ್ಲರಿಗೂ ಪರಿಚಿತರಾದರು. ಹೊಸದಾಗಿ ಶುರುವಾದ ಈ ಶೋಗೆ ಚಿತ್ರದುರ್ಗದಲ್ಲಿ ಆಡಿಷನ್ ನೀಡಿ, ಬೆಂಗಳೂರಿಗೆ ಬಂದು, ತನ್ನ ಮುಗ್ಧತೆಯಿಂದಾನೇ ಎಲ್ಲರನ್ನು ಸೆಳೆದವರು. ನಟನೆಯಲ್ಲಿ ಸೈ ಎನಿಸಿಕೊಂಡಿದ್ದ ಗಗನಾ ಬಾರಿಗೆ ಡ್ಯಾನ್ಸ್ ಅಷ್ಟಕ್ಕೆ ಅಷ್ಟೇ. ಕುಣಿದು ಕುಣಿದು ಬಾರೇ ಅನ್ನೋ ಸ್ಟೆಪ್ ಮಾತ್ರ ಸದಾ ಕಾಲ ಮಾಡುತ್ತಿದ್ದದ್ದು. ಇದೀಗ ದರ್ಶನ್ ಬಗ್ಗೆ ನೆನೆದು ಬೇಸರ ಹೊರ ಹಾಕಿದ್ದಾರೆ.
ಈ ಬಾರಿಯ ಡಿಕೆಡಿ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಬಾರದೆ ಇದ್ದವರಿಂದಾನೂ ಡ್ಯಾನ್ಸ್ ಮಾಡಿಸುವ ಸಾಹಸಕ್ಕೆ ಜೀ ಕನ್ನಡ ವಾಹಿನಿ ಕೈ ಹಾಕಿದೆ. ಹೀಗಾಗಿ ಮಾತಿನಲ್ಲಿಯೇ ಎಲ್ಲರನ್ನು ಮೋಡಿ ಮಾಡಿದ್ದ, ತರುಣ್ ಸುಧೀರ್ ಅವರಿಂದ ಅಡ್ವಾನ್ಸ್ ಪಡೆದಿದ್ದ ಗಗನಾ, ಈಗ ಡ್ಯಾನ್ಸ್ ನಲ್ಲೂ ಇಂಪ್ರೂವ್ ಆಗಿ ಬಿಟ್ಟಿದ್ದಾರೆ. ಡ್ಯಾನ್ಸ್ ನಲ್ಲೂ ಎಲ್ಲರಿಂದ ಹೊಗಳಿಕೆಯ ಮಾತುಗಳನ್ನು ಕೇಳಿದ್ದಾರೆ.
ನಿನ್ನೆಯ ಡಿಕೆಡಿ ಕಾರ್ಯಕ್ರಮದಲ್ಲಿ ಮಾತನಾಡುತ್ತಲೇ ಗಗನಾ ಕಣ್ಣೀರು ಹಾಕಿದರು. ದರ್ಶನ್ ವಿಚಾರ ಬಂದ ಕೂಡಲೇ ಅವರನ್ನು ನಾವೆಲ್ಲಾ ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ. ನಾನು ಅವರ ಸಿನಿಮಾಗಳನ್ನು ನೋಡಿ ಇಷ್ಟ ಪಟ್ಟೆ. ವಿ ಆಲ್ ಲವ್ ಯೂ ಅಂಡ್ ಮಿಸ್ ಯೂ ಸರ್ ಎಂದಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯ ಆರೋಪದಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್, ಜಾಮೀನಿಗೆ ಅರ್ಜಿ ಹಾಕಿದ್ದಾರೆ. ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಮುಂದಿನ ದಿನಗಳಲ್ಲಿ ದರ್ಶನ್ ಗೆ ಹೊರಗೆ ಬರ್ತಾರಾ..? ಶಿಕ್ಷೆಯಾಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್