Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಾಲ್ಮೀಕಿ ಹಗರಣದಲ್ಲಿ ರಾಜ್ಯ ಸರ್ಕಾರದ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಈಶ್ವರಪ್ಪ..!

---Advertisement---

 

ಶಿವಮೊಗ್ಗ: ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಕಳೆದ ಕೆಲವು ದಿನಗಳ ಹಿಂದಷ್ಟೇ ಕೆ ಎಸ್ ಈಶ್ವರಪ್ಪ ಅವರು ಚಂದ್ರಶೇಖರ್ ಕುಟುಂಬಸ್ಥರನ್ನು ಭೇಟಿಯಾಗಿ ಬಂದಿದ್ದರು. ಆ ವೇಳೆ ಹಣದ ಸಹಾಯವನ್ನು ಮಾಡಿದ್ದರು. ನಮ್ಮ ನೆರವು ನಾವೂ ನೀಡಿದ್ದೇವೆ. ಇನ್ನೇನಿದ್ದರು ಸರ್ಕಾರ ಅದರ ನೆರವು ನೀಡಬೇಕು ಎಂದು ಹೇಳಿದ್ದರು. ಇದೀಗ ರಾಜ್ಯ ಸರ್ಕಾರದ ನಡೆಯನ್ನು ಮೆಚ್ಚಿಕೊಂಡಿದ್ದಾರೆ.

ಚಂದ್ರಶೇಖರ್ ಆತ್ಮಹತ್ಯೆಯ ಬಳಿಕ ಸರ್ಕಾರದಿಂದ 25 ಲಕ್ಷ ಪರಿಹಾರ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದರು. ಇದೀಗ ಆ ಪರಿಹಾರದ ಚೆಕ್ ಪಡೆಯಲು ನಾಳೆ ಬೆಂಗಳೂರಿಗೆ ಬರುವಂತೆ ಅವರ ಕುಟುಂಬಸ್ಥರಿಗೆ ತಿಳಿಸಿದ್ದಾರೆ. ಈ ವಿಚಾರಕ್ಕೆ ಈಶ್ವರಪ್ಪ ಅವರು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಚಂದ್ರಶೇಖರ್ ಕುಟುಂಬಕ್ಕೆ 25 ಲಕ್ಷ ಪರಿಹಾರ ಕೊಡ್ತೀವಿ ಅಂತ ಸಿಎಂ ಹೇಳಿದ್ರು. ನಾವೂ ಕೊಡಲೇಬೇಕೆಂದು ಒತ್ತಾಯ ಹಾಕ್ತಿದ್ವಿ. ಇದೀಗ ನಿಗಮದ ಎಂಡಿ ಚೆಕ್ ತೆಗೆದುಕೊಳ್ಳುವುದಕ್ಕೆ ನಾಳೆ ಬೆಂಗಳೂರಿಗೆ ಬರಲು ಹೇಳಿದ್ದಾರೆ. 25 ಲಕ್ಷದ ಚೆಕ್ ಪಡೆಯಲು ನಾಳೆ ಬೆಂಗಳೂರಿಗೆ ಬರಲು ಹೇಳಿದ್ದಾರೆ. ಅಟ್ರಾಸಿಟಿ ಕೇಸ್ ದಾಖಲಾಗಿರುವ ಹಿನ್ನೆಲೆ 8 ಲಕ್ಷದ 25 ಸಾವಿರ ರೂಪಾಯಿ ಕವಿತಾ ಅವರ ಅಕೌಂಟಿಗೆ ಬಂದಿದೆ. ಕೆಲಸ ಕೊಡುವ ವಿಚಾರದಲ್ಲಿ ಎಂಡಿ ಅವರಿಗೆ ನಾನು ಕಾಲ್ ಮಾಡಿದ್ದೆ. ಚಂದ್ರಶೇಖರ್ ಮಗನಿಗೆ ಹೊಟೇಲ್ ಮ್ಯಾನೇಜ್ಮೆಂಟ್ ನಲ್ಲಿ ಕೆಲಸ ಕೊಡಿಸುತ್ತೇವೆ ಎಂದು ಹೇಳಿದ್ದಾರೆ. ಅವರಿಗೆ ಬರುವಂತಹ ಪೆನ್ಶನ್ ಕೊಡುವುದಕ್ಕೆ ಡಿಸಿ ಅವರು ಕವಿತಾ ಅವರನ್ನು ಬರುವುದಕ್ಕೆ ಹೇಳಿದ್ದಾರೆ. ನಮ್ಮ ಕಾರ್ಯಕರ್ತರ ಪ್ರಯತ್ನದಿಂದ ಪರಿಹಾರ ಸಿಕ್ಕಿದೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...