Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಅರ್ಜಿ ಆಹ್ವಾನ

Facebook
Twitter
Telegram
WhatsApp

 

ಚಿತ್ರದುರ್ಗ. ಸೆ.23: ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಬಾಡಿಗೆ ಆಧಾರದಲ್ಲಿ ಒದಗಿಸುವಂತೆ ಸ್ಥಾಪಿಸಲಾಗಿರುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಲು 2024-25ನೇ ಸಾಲಿನಲ್ಲಿ ರಾಜ್ಯ ಕೃಷಿ ವಲಯ ಕೃಷಿ ಯಾಂತ್ರೀಕರಣ ಯೋಜನೆಯಡಿ ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಸರ್ಕಾರ ಅನುಮೋದನೆ ನೀಡಿದೆ.

ಅದರಂತೆ ಜಿಲ್ಲೆಗೆ ಸಾಮಾನ್ಯ ವರ್ಗದಡಿ ಎಫ್.ಫಿ.ಓ, ಎನ್,ಜಿ.ಓ, ಇತರೆ ಸಂಘ ಸಂಸ್ಥೆಗಳು ಚಾಲ್ತಿಯಲ್ಲಿರುವ ಸಿ.ಹೆಚ್.ಎಸ್.ಸಿ ಗಳಿಗೆ 1 ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ 1 ಕಂಬೈನ್ಡ್ ಹಾರ್ವೆಸ್ಟರ್ ಹಬ್‌ನ್ನು ಸ್ಥಾಪನ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಸಾಮಾನ್ಯ ವರ್ಗದ ಎಫ್.ಪಿ.ಓ, ಎನ್.ಜಿ.ಓ, ಇತರೆ ಸಂಘ ಸಂಸ್ಥೆಗಳು ಸಿ.ಹೆಚ್.ಸಿ ಹಾಗೂ ಪರಿಶಿಷ್ಟ ಪಂಗಡದಡಿ ವೈಯಕ್ತಿಕ ಫಲಾನುಭವಿಗಳಿಗೆ ಗರಿಷ್ಟ ಶೇ. 70 ರಂತೆ ಮಾರ್ಗಸೂಚಿಯ ಮಿತಿಗೆ ಒಳಪಟ್ಟು ಸಹಾಯಧನವನ್ನು ನೀಡಲಾಗುವುದು. ಸಹಾಯಧನವನ್ನು ಕ್ರೆಡಿಟ್ ಲಿಂಕ್ಡ್ ಬ್ಯಾಂಕ್ ಎನ್‌ಡೆಡ್ ಸಬ್ಸಿಡಿ ಮುಖಾಂತರ ನೀಡಲಾಗುವುದು. ಆಯ್ಕೆಯಾದ ಸಂಸ್ಥೆ, ವೈಯಕ್ತಿಕ ಫಲಾನುಭವಿಗಳಿಗೆ ಕೃಷಿ ಮೂಲಭೂತ ಸೌಕರ್ಯನಿಧಿ ಯೋಜನೆಯಡಿ ಬಡ್ಡಿ ರಿಯಾಯಿತಿಯ ನೆರವನ್ನು ಪಡೆಯಲು ಸಹ ಅವಕಾಶವಿರುತ್ತದೆ.

ಆಸಕ್ತ ಸಂಘ ಸಂಸ್ಥೆಗಳು ನೊಂದಣಿ ಪ್ರಮಾಣ ಪತ್ರ, ಜಿಎಸ್‌ಟಿ ಪ್ರತಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಸಿಹೆಚ್.ಎಸ್.ಸಿ ನಡೆಸಿದ ಅನುಭವದ ವಿವರಗಳನ್ನು ಹಾಗೂ ವೈಯಕ್ತಿಕ ಫಲಾನುಭವಿಗಳು ಅರ್ಜಿಯೊಂದಿಗೆ ಪಹಣಿ, ಎಫ್.ಐ.ಡಿ, ಜಾತಿ ಪ್ರಮಾಣ ಪತ್ರ, ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ರೂ.100 ಗಳ ಛಾಪಾ ಕಾಗದದ ಮೇಲೆ ಹಬ್‌ನ್ನು ಪರಬಾರೆ ಮಾಡುವುದಿಲ್ಲವೆಂದು ಮುಚ್ಚಳಿಕೆ ಪತ್ರದೊಂದಿಗೆ ಇದೇ ಸೆ.30ರೊಳಗೆ ಆಯಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಲು ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನನ್ನ ಬಳಿ ಇರುವ ದಾಖಲೆ ಕೊಟ್ಟರೆ ಇನ್ನು 6-7 ಸಚಿವರು ರಾಜೀನಾಮೆ ಕೊಡಬೇಕಾಗುತ್ತದೆ : ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ

  ಬೆಂಗಳೂರು: ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಕುಮಾರಸ್ವಾಮಿ ಅವರನ್ನು ವಿಚಾರಣೆಗೆ ಕರೆದಿದ್ದರು. ವಿಚಾರಣೆಗೆ ಹಾಜರಾಗಿ ಬಂದ ಮರುದಿನವೇ ಸುದ್ದಿಗೋಷ್ಟಿ ನಡೆಸಿರುವ ಕುಮಾರಸ್ವಾಮಿ ಅವರು, ಕಾಂಗ್ರೆಸ್ ಮೇಲೆ ಕಿಡಿಕಾರಿದ್ದಾರೆ. ವಿಚಾರಣೆ ಮಾಡುವುದಕ್ಕೆ

ನಿರ್ಮಲಾ ಸೀತರಾಮನ್ ವಿರುದ್ಧ FIR ದಾಖಲಿಸಲು ಬೆಂಗಳೂರು ಕೋರ್ಟ್ ಆದೇಶ : ಕಾರಣವೇನು ಗೊತ್ತಾ..?

  ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ವಿರುದ್ಧ ಎಫ್ಐಆರ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಗಳ ನ್ಯಾಯಾಲಯ ಆದೇಶ ಹೊರಡಿಸಿದೆ. ನ್ಯಾಯಾಲಯಕ್ಕೆ ನಿರ್ಮಲಾ ಸೀತರಾಮನ್ ವಿರುದ್ಧ ದೂರು ಸಲ್ಲಿಕೆಯಾದ ಹಿನ್ನೆಲೆ ಎಫ್ಐಆರ್ ದಾಖಲಿಸಲು ಸೂಚನೆ

ಮೈಸೂರು ದಸರಾ 2024 ವೇಳಾಪಟ್ಟಿ ಬಿಡುಗಡೆ : ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ..?

  ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದೆ. ಅಂಬಾರಿ ಮೇಲೆ ನಾಡ ಅಧಿದೇವತೆಯನ್ನು ಕಣ್ತುಂಬಿಕೊಳ್ಳಲು ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ. ಅದ್ದೂರಿ ಆಚರಣೆಗಾಗಿ ಸರ್ಕಾರ ಹಾಗೂ ಜಿಲ್ಲಾಡಳಿತ ಬರದ ಸಿದ್ಧತೆ ಮಾಡಿಕೊಂಡಿದೆ. ದಸರಾ

error: Content is protected !!