Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಳ್ಳಕೆರೆ | ಹಸು ಹಾಗು ವ್ಯಕ್ತಿ ಮೇಲೆ ಚಿರತೆ ದಾಳಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಸೆಪ್ಟೆಂಬರ್. 24 : ಆಹಾರ ಅರಸಿ ಕಾಡುಪ್ರಾಣಿಗಳು ನಾಡಿನತ್ತ ಬಂದು ಪ್ರಾಣಿಗಳ ಮೇಲೆ ಮನುಷ್ಯರ ಮೇಲೆ ದಾಳಿ ಮಾಡುತ್ತಿರುವುದು ದಿನೇ ದಿನೇ ಹೆಚ್ಚುತ್ತಿದೆ.

ಹಸುಗಳು ಮೇಯಿಸಿಕೊಂಡು ಬರುವಾಗ ಹಸು ಹಾಗೂ ವ್ಯಕ್ತಿ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಭಾನುವಾರ ಸಂಜೆ ತಾಲ್ಲೂಕಿನ ಬಂಡೆಹಟ್ಟಿ ಅರಣ್ಯ ಪ್ರದೇಶದಲ್ಲಿ ಘಟನೆ ಜರುಗಿದೆ.

ಬಂಡೆಹಟ್ಟಿ ಸಮೀಪ ಅರಣ್ಯ ಪ್ರದೇಶದಲ್ಲಿ ಬಂಡಿಹಟ್ಟಿ ಗ್ರಾಮದ ರಘು ಎನ್ನುವ ವ್ಯಕ್ತಿ ಹಸುಗಳು ಮೇಯಿಸಿಕೊಂಡು ಅರಣ್ಯದಿಂದ ಹಸುಗಳನ್ನ ಹೊಡೆದುಕೊಂಡು ಹಟ್ಟಿಗೆ ಬರುವಾಗ ಏಕಾಏಕಿ ಚಿರತೆ ಹಸುವಿನ ಮೇಲೆ ದಾಳಿ ಮಾಡಿದೆ. ಈ ಸಮಯದಲ್ಲಿ ಮಾಲೀಕ ರಘು ಚಿರತೆಯನ್ನು ಒಡಿಸಲು ಹಸುವಿನ ಬಳಿ ಒಡಿದಾಗ ರಘು ಮೇಲೆ ಸಹ ಚಿರತೆ ಎಗರಿ ದಾಳಿಗೆ ಮುಂದಾಗಿದ್ದಾಗ ರಸ್ತೆಯಲ್ಲಿ ಬರುತ್ತಿದ್ದ ಟ್ರಾಕ್ಟರ್ ಚಾಲಕ ಹಾಗೂ ಕುರಿಗಾಯಿಗಳು ಕಿರುಚಾಟ ನಡೆಸಿದಾಗ ವ್ಯಕ್ತಿ ಮೇಲೆ ದಾಳಿ ಮಾಡಿದೆ ಚಿರತೆ ಬಿಟ್ಟು ಅರಣ್ಯ ಪ್ರದೇಶದಲ್ಲಿ ಒಡಿಹೋಗಿದ್ದು, ರಘು ಪ್ರಾಣಪಾಯದಿಂದ ಪಾರಾಗಿದ್ದಾನೆ.

ಈ ಹಿಂದೆ ಗ್ರಾಮದ ಕುರಿ, ಮೇಕೆ, ನಾಯಿಗಳ ಮೇಲೆ ಚಿರತೆ ದಾಳಿ ಮಾಡಿದೆ, ಈಗ ಮತ್ತೆ ದಾಳಿ ಮಾಡಿರುವುದರಿಂದ ಗ್ರಾಮದ ಕುರಿಗಾಯಿಗಳು ಆತಂಕಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನನ್ನ ಬಳಿ ಇರುವ ದಾಖಲೆ ಕೊಟ್ಟರೆ ಇನ್ನು 6-7 ಸಚಿವರು ರಾಜೀನಾಮೆ ಕೊಡಬೇಕಾಗುತ್ತದೆ : ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ

  ಬೆಂಗಳೂರು: ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಕುಮಾರಸ್ವಾಮಿ ಅವರನ್ನು ವಿಚಾರಣೆಗೆ ಕರೆದಿದ್ದರು. ವಿಚಾರಣೆಗೆ ಹಾಜರಾಗಿ ಬಂದ ಮರುದಿನವೇ ಸುದ್ದಿಗೋಷ್ಟಿ ನಡೆಸಿರುವ ಕುಮಾರಸ್ವಾಮಿ ಅವರು, ಕಾಂಗ್ರೆಸ್ ಮೇಲೆ ಕಿಡಿಕಾರಿದ್ದಾರೆ. ವಿಚಾರಣೆ ಮಾಡುವುದಕ್ಕೆ

ನಿರ್ಮಲಾ ಸೀತರಾಮನ್ ವಿರುದ್ಧ FIR ದಾಖಲಿಸಲು ಬೆಂಗಳೂರು ಕೋರ್ಟ್ ಆದೇಶ : ಕಾರಣವೇನು ಗೊತ್ತಾ..?

  ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ವಿರುದ್ಧ ಎಫ್ಐಆರ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಗಳ ನ್ಯಾಯಾಲಯ ಆದೇಶ ಹೊರಡಿಸಿದೆ. ನ್ಯಾಯಾಲಯಕ್ಕೆ ನಿರ್ಮಲಾ ಸೀತರಾಮನ್ ವಿರುದ್ಧ ದೂರು ಸಲ್ಲಿಕೆಯಾದ ಹಿನ್ನೆಲೆ ಎಫ್ಐಆರ್ ದಾಖಲಿಸಲು ಸೂಚನೆ

ಮೈಸೂರು ದಸರಾ 2024 ವೇಳಾಪಟ್ಟಿ ಬಿಡುಗಡೆ : ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ..?

  ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದೆ. ಅಂಬಾರಿ ಮೇಲೆ ನಾಡ ಅಧಿದೇವತೆಯನ್ನು ಕಣ್ತುಂಬಿಕೊಳ್ಳಲು ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ. ಅದ್ದೂರಿ ಆಚರಣೆಗಾಗಿ ಸರ್ಕಾರ ಹಾಗೂ ಜಿಲ್ಲಾಡಳಿತ ಬರದ ಸಿದ್ಧತೆ ಮಾಡಿಕೊಂಡಿದೆ. ದಸರಾ

error: Content is protected !!