Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಆಡುಮಲ್ಲೇಶ್ವರ ಕಿರು ಮೃಗಾಲಯದಲ್ಲಿ ಕಾಮಗಾರಿ ಅಕ್ರಮ : ತನಿಖೆಗೆ ಗುರುಮೂರ್ತಿ ಒತ್ತಾಯ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 24 : ಇಲಾಖೆಯ ಯಾವುದೇ ಆದೇಶವಿಲ್ಲದಿದ್ದರೂ ಆಡುಮಲ್ಲೇಶ್ವರ ಕಿರು ಮೃಗಾಲಯದಲ್ಲಿ ಎಕ್ಸಾಟಿಕ್ ಬಡ್ರ್ಸ್ ಹೌಸ್ ಕಾಮಗಾರಿಯನ್ನು ಕೊಂಡೂರು ನರಸರಾಜು ಹೇಮಂತರಾಜು ಬೆಂಗಳೂರು ಇವರಿಗೆ ಗುತ್ತಿಗೆ ನೀಡಿರುವುದಕ್ಕೆ ಸಂಬಂಧಿಸಿದಂತೆ ವಲಯ ಅರಣ್ಯಾಧಿಕಾರಿ ಅಕ್ಷತಾರವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಗುತ್ತಿಗೆದಾರನ ಹೆಸರನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ರಾಜ್ಯ ಸಂಚಾಲಕ ಗುರುಮೂರ್ತಿ ಒತ್ತಾಯಿಸಿದರು.

ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರ ಗಮನಕ್ಕೂ ತಾರದೆ ಕೊಂಡೂರು ನರಸರಾಜು ಹೇಮಂತರಾಜು ಇವರಿಗೆ ಗುತ್ತಿಗೆ ನೀಡಿರುವುದನ್ನು ಸಮಗ್ರವಾಗಿ ತನಿಖೆಗೊಳಪಡಿಸಬೇಕು. ಎಕ್ಸಾಟಿಕ್ ಬಡ್ರ್ಸ್ ಮನೆ ನಿರ್ಮಾಣ ಕಾಮಗಾರಿಗೆ ದಿನಾಂಕ;24-1-2023 ರಂದು ಈ ಟೆಂಡರ್ ಪೋರ್ಟ್‍ಲ್ ಮುಖಾಂತರ ಟೆಂಡರ್‍ನಲ್ಲಿ ಗುತ್ತಿಗೆದಾರ ಕೊಂಡೂರು ನರಸರಾಜು ಹೇಮಂತರಾಜು ಇವರು ಸಲ್ಲಿಸಿದ್ದ ದರ ಪಟ್ಟಿ ಅತ್ಯಂತ ಕಡಿಮೆಯಿದ್ದುದರಿಂದ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಸದಸ್ಯ ಕಾರ್ಯದರ್ಶಿ ಕರ್ನಾಟಕ ಮೃಗಾಲಯ ಪ್ರಾಧಿಕಾರ ಕೂರ್ಗಳ್ಳಿ ಮೈಸೂರು ಇವರು ಗುತ್ತಿಗೆದಾರರು ಸಲ್ಲಿಸಿದ್ದ ದರವನ್ನು ಅಂಗೀಕರಿಸಿ ಗುತ್ತಿಗೆದಾರರಿಂದ ಭದ್ರತಾ ಠೇವಣಿ ಹಾಗೂ ಟೆಂಡರ್ ವ್ಯತ್ಯಾಸದ ಮೊತ್ತದ ಎಫ್.ಡಿ.ಆರ್. ಪಡೆದು ದಿನಾಂಕ : 15-5-2023 ರಂದು ಎಕ್ಸಾಟಿಕ್ ಬರ್ಡ್ ಮನೆಯ ಕಾಮಗಾರಿ ಕೈಗೊಳ್ಳಲು ಕರಾರು ಒಪ್ಪಂದ ಮಾಡಿಕೊಂಡು ಕಾಮಗಾರಿ ಅವಧಿ ಪೂರ್ಣಗೊಳಿಸಲು ನೀಡಲಾದ ಅವಧಿ ದಿನಾಂಕ : 13-9-2023 ಕ್ಕೆ ಮುಕ್ತಾಯವಾಗಿದ್ದು, ಗುತ್ತಿಗೆದಾರನ ಕೋರಿಕೆ ಮೇರೆಗೆ ಎರಡು ಬಾರಿ ಅವಧಿಯನ್ನು ವಿಸ್ತರಿಸಿ ಒಟ್ಟು 320 ದಿನಗಳ ಕಾಲಾವಕಾಶ ನೀಡಿದ್ದರೂ ಕೂಡ ಕಾಮಗಾರಿ ಇನ್ನು ಪೂರ್ಣಗೊಂಡಿಲ್ಲ. ಎಕ್ಸಾಟಿಕ್ ಬರ್ಡ್ ಮನೆಯನ್ನು ಮೇಲ್ಚಾವಣಿವರೆಗೆ ಮಾತ್ರ ನಿರ್ಮಿಸಲಾಗಿದೆ. ಚೈನ್‍ಲಿಂಕ್, ಮೆಶ್, ಬೇಲಿ, ಪೇಯಿಂಟಿಂಗ್, ವ್ಯೂಪಾಯಿಂಟ್, ಗ್ಲಾಸ್ ಅಳವಡಿಕೆ, ಎಸ್.ಎಸ್.ರೇಲಿಂಗ್ಸ್ ಇತ್ಯಾದಿ ಕಾಮಗಾರಿ ಇನ್ನು ಬಾಕಿಯಿರುವುದರಿಂದ ಪ್ರಾಣಿ ಹಾಗೂ ಪಕ್ಷಿಗಳ ವೀಕ್ಷಣೆಗೆ ತೊಂದರೆಯಾಗುತ್ತಿದೆ. ಗುತ್ತಿಗೆದಾರನ ಹೆಸರನ್ನು ಕಪ್ಪುಪಟ್ಟಿಗೆ ಸೇರಿಸಿ ವಲಯ ಅರಣ್ಯಾಧಿಕಾರಿ ಅಕ್ಷತಾರನ್ನು ಸೇವೆಯಿಂದ ಅಮಾನತ್ತುಪಡಿಸಿ ತನಿಖೆ ಒಳಪಡಿಸಬೇಕೆಂದು ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರನ್ನು ಆಗ್ರಹಿಸಿದರು.

ಇಲ್ಲವಾದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಉಗ್ರ ಹೋರಾಟ ನಡೆಸಲಾಗುವುದೆಂದು ಗುರುಮೂರ್ತಿ ಎಚ್ಚರಿಸಿದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೆಂಗುಂಟೆ ಜಯಪ್ಪ, ಶ್ರೀನಿವಾಸ್‍ಮೂರ್ತಿ, ಚಂದ್ರಪ್ಪಜೋಗಿ, ನಾಗೇಂದ್ರ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ನನ್ನ ಬಳಿ ಇರುವ ದಾಖಲೆ ಕೊಟ್ಟರೆ ಇನ್ನು 6-7 ಸಚಿವರು ರಾಜೀನಾಮೆ ಕೊಡಬೇಕಾಗುತ್ತದೆ : ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ

  ಬೆಂಗಳೂರು: ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಕುಮಾರಸ್ವಾಮಿ ಅವರನ್ನು ವಿಚಾರಣೆಗೆ ಕರೆದಿದ್ದರು. ವಿಚಾರಣೆಗೆ ಹಾಜರಾಗಿ ಬಂದ ಮರುದಿನವೇ ಸುದ್ದಿಗೋಷ್ಟಿ ನಡೆಸಿರುವ ಕುಮಾರಸ್ವಾಮಿ ಅವರು, ಕಾಂಗ್ರೆಸ್ ಮೇಲೆ ಕಿಡಿಕಾರಿದ್ದಾರೆ. ವಿಚಾರಣೆ ಮಾಡುವುದಕ್ಕೆ

ನಿರ್ಮಲಾ ಸೀತರಾಮನ್ ವಿರುದ್ಧ FIR ದಾಖಲಿಸಲು ಬೆಂಗಳೂರು ಕೋರ್ಟ್ ಆದೇಶ : ಕಾರಣವೇನು ಗೊತ್ತಾ..?

  ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ವಿರುದ್ಧ ಎಫ್ಐಆರ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಗಳ ನ್ಯಾಯಾಲಯ ಆದೇಶ ಹೊರಡಿಸಿದೆ. ನ್ಯಾಯಾಲಯಕ್ಕೆ ನಿರ್ಮಲಾ ಸೀತರಾಮನ್ ವಿರುದ್ಧ ದೂರು ಸಲ್ಲಿಕೆಯಾದ ಹಿನ್ನೆಲೆ ಎಫ್ಐಆರ್ ದಾಖಲಿಸಲು ಸೂಚನೆ

ಮೈಸೂರು ದಸರಾ 2024 ವೇಳಾಪಟ್ಟಿ ಬಿಡುಗಡೆ : ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ..?

  ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದೆ. ಅಂಬಾರಿ ಮೇಲೆ ನಾಡ ಅಧಿದೇವತೆಯನ್ನು ಕಣ್ತುಂಬಿಕೊಳ್ಳಲು ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ. ಅದ್ದೂರಿ ಆಚರಣೆಗಾಗಿ ಸರ್ಕಾರ ಹಾಗೂ ಜಿಲ್ಲಾಡಳಿತ ಬರದ ಸಿದ್ಧತೆ ಮಾಡಿಕೊಂಡಿದೆ. ದಸರಾ

error: Content is protected !!