Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತೋಟಗಾರಿಕೆ  ನರ್ಸರಿ ಸರ್ಟಿಫಿಕೇಟ್ ಕೋರ್ಸ್: ಅರ್ಜಿ ಆಹ್ವಾನ

---Advertisement---

ಚಿತ್ರದುರ್ಗ. ಸೆ.24 : ಹಿರಿಯೂರು ತೋಟಗಾರಿಕೆ ಮಹಾವಿದ್ಯಾಲಯ ಮತ್ತು ಬಬ್ಬೂರು ಫಾರಂ ಕೃಷಿ ವಿಜ್ಞಾನ ಕೇಂದ್ರ ವತಿಯಿಂದ ತೋಟಗಾರಿಕಾ ಬೆಳೆಗಳಲ್ಲಿ ನರ್ಸರಿ ನಿರ್ವಹಣೆ ಕುರಿತು ಇದೇ ಸೆಪ್ಟೆಂಬರ್ 30 ರಿಂದ ಡಿಸೆಂಬರ್ 30 ರವರೆಗೆ  ಕೌಶಲ್ಯಾಧಾರಿತ ತರಬೇತಿ ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಅಹ್ವಾನಿಸಲಾಗಿದೆ.

ತರಬೇತಿಯಲ್ಲಿ ತೋಟಗಾರಿಕಾ ಬೆಳೆಗಳಲ್ಲಿ ಸಸ್ಯೋತ್ಪಾದನೆ ವಿಧಗಳಾದ ಕಸಿ, ಗೂಟಿ, ಕಾಂಡದ ತುಂಡುಗಳಿಂದ ಸಸ್ಯೋತ್ಪಾದನೆ ಮಾಡುವುದು ಹಾಗೂ ಇನ್ನಿತರೆ ಸಸ್ಯೋತ್ಪಾದನೆ ವಿಧಾನಗಳು ಮತ್ತು ಸಸ್ಯಾಗಾರದ ನಿರ್ವಹಣೆ ಕುರಿತು ಮಾಹಿತಿ ನೀಡಲಾಗುವುದು.

ಈ ತರಬೇತಿಯಲ್ಲಿ ಭಾಗವಹಿಸಲು ಇಚ್ಛೆಯುಳ್ಳವರು ತರಬೇತಿ ಶುಲ್ಕ ಒಟ್ಟು ರೂ.9,000/-ಗಳನ್ನು ಪಾವತಿಸಿ ಸೆ. 29 ರೊಳಗೆ ದೂರವಾಣಿ ಮುಖಾಂತರ ಅಥವಾ ಖುದ್ದಾಗಿ ಈ ಕೆಳಕಂಡ ವಿಳಾಸಕ್ಕೆ ಸಂಪರ್ಕಿಸಿ ತಮ್ಮ ಹೆಸರು ನೋಂದಾಯಿಸ ಬಹುದಾಗಿದೆ. ಮೊದಲು ನೋಂದಾಯಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಡಾ. ಶ್ರೀಧರ ಆರ್ (ಸಹಾಯಕ ಪ್ರಾದ್ಯಾಪಕರು), ತೋಟಗಾರಿಕೆ ಮಹಾವಿದ್ಯಾಲಯ, ಹಿರಿಯೂರು, ಮೊಬೈಲ್ ಸಂಖ್ಯೆ 9449983747, ಡಾ. ಮಹಾಂತೇಶ ಪಿ.ಎಸ್ (ತೋಟಗಾರಿಕೆ ವಿಜ್ಞಾನಿ), ಕೃಷಿ ವಿಜ್ಞಾನ ಕೇಂದ್ರ, ಬಬ್ಬೂರು ಫಾರಂ, ಹಿರಿಯೂರು. ಮೊಬೈಲ್ ಸಂಖ್ಯೆ 8088948308 ಹಾಗೂ ಡಾ. ಲತಾ ಎಸ್ (ಸಹಾಯಕ ಪ್ರಾದ್ಯಾಪಕರು), ತೋಟಗಾರಿಕೆ ಮಹಾವಿದ್ಯಾಲಯ, ಮೊಬೈಲ್ ಸಂಖ್ಯೆ 8095836162 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...