Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಕ್ಟೋಬರ್ 04 ರಿಂದ 07 ರವರೆಗೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಜಯದೇವ ಕಪ್ ಕ್ರೀಡಾಕೂಟ

Facebook
Twitter
Telegram
WhatsApp

 

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 24 : ಚಿತ್ರದುರ್ಗ ಮುರುಘರಾಜೇಂದ್ರ ಶ್ರೀಮಠದ ವತಿಯಿಂದ ಪ್ರತಿ ವರ್ಷ ದಸರಾ ಹಬ್ಬದ ಪ್ರಯುಕ್ತ ಶರಣಸಂಸ್ಕೃತಿ ಉತ್ಸವ ಆಚರಿಸಲಾಗುತ್ತಿದ್ದು, ಈ ವರ್ಷ ಶ್ರೀ ಜಯದೇವ ಮುರುಘರಾಜೇಂದ್ರ ಮಹಾ ಸ್ವಾಮೀಜಿಗಳ 150ನೇ ಜಯಂತಿ ಅಂಗವಾಗಿ ಜಯದೇವ ಕಪ್-2024 ಕ್ರೀಡಾ ಜಾತ್ರೆಯನ್ನು ಸಂಘಟಿಸಲಾಗುತ್ತಿದ್ದು, ಈ ಪ್ರಯುಕ್ತ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಅಕ್ಟೋಬರ್ 04 ರಿಂದ 07 ರವರೆಗೆ ಜಿಲ್ಲಾ ಮಟ್ಟದ ಕ್ರೀಡಾ ವಿಭಾಗದಲ್ಲಿ ಸ್ಥಳೀಯ ಪ್ರತಿಭೆಗಳಿಗೆ ಸಹಕಾರಿಯಾಗುವಂತೆ ಪ್ರೌಢಶಾಲಾ ಬಾಲಕ, ಬಾಲಕಿಯರಿಗಾಗಿ (17ವರ್ಷ ಒಳಗಿನವರಿಗೆ) ಕಬಡ್ಡಿ, ಖೋ ಖೋ, ವಾಲಿಬಾಲ್ ಹಾಗೂ ಹ್ಯಾಂಡ್ ಬಾಲ್, ಹೊನಲು ಬೆಳಕಿನ ಪಂದ್ಯಾವಳಿಗಳನ್ನು ಆಯೋಜಿಸಲಾಗಿದೆ.

ಈ ಪಂದ್ಯಾವಳಿಗಳಿಗೆ ಇಲಾಖೆಯಿಂದ ತಾಲ್ಲೂಕು ಮಟ್ಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ತಂಡಗಳಿಗೆ ಅವಕಾಶ ಕಲ್ಪಿಸಲಾಗಿದೆ. ಹಾಗೆಯೇ ಹೊರ ತಾಲ್ಲೂಕುಗಳಿಂದ ಬರುವ ಕ್ರೀಡಾ ಪಟುಗಳಿಗೆ ವಸತಿ, ಊಟ, ತಿಂಡಿ, ವ್ಯವಸ್ಥೆ ಇದ್ದು, ಬಂದು ಹೋಗುವ ಪ್ರಯಾಣ ಭತ್ಯೆಯನ್ನು ಸಹ ನೀಡಲಾಗುವುದು. ಪಂದ್ಯಾವಳಿಯಲ್ಲಿ ಪ್ರಥಮ, ದ್ವಿತೀಯ, ತೃತೀಯ, ಚತುರ್ಥ ಸ್ಥಾನ ಪಡೆದ ತಂಡಗಳಿಗೆ ಕ್ರಮವಾಗಿ ರೂ.10,000, 8,000, 6,000, 4000 ನಗದು ಹಾಗೂ ಆಕರ್ಷಕ ಟ್ರೋಪಿ, ಮೆಡಲ್, ಟೀ ಷರ್ಟ್, ಕ್ರೀಡಾ ಪರಿಕರಗಳು ಮತ್ತು ವೈಯಕ್ತಿಕ ವಿಶೇಷ ಟ್ರೋಪಿ ಸಹ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನನ್ನ ಬಳಿ ಇರುವ ದಾಖಲೆ ಕೊಟ್ಟರೆ ಇನ್ನು 6-7 ಸಚಿವರು ರಾಜೀನಾಮೆ ಕೊಡಬೇಕಾಗುತ್ತದೆ : ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ

  ಬೆಂಗಳೂರು: ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಕುಮಾರಸ್ವಾಮಿ ಅವರನ್ನು ವಿಚಾರಣೆಗೆ ಕರೆದಿದ್ದರು. ವಿಚಾರಣೆಗೆ ಹಾಜರಾಗಿ ಬಂದ ಮರುದಿನವೇ ಸುದ್ದಿಗೋಷ್ಟಿ ನಡೆಸಿರುವ ಕುಮಾರಸ್ವಾಮಿ ಅವರು, ಕಾಂಗ್ರೆಸ್ ಮೇಲೆ ಕಿಡಿಕಾರಿದ್ದಾರೆ. ವಿಚಾರಣೆ ಮಾಡುವುದಕ್ಕೆ

ನಿರ್ಮಲಾ ಸೀತರಾಮನ್ ವಿರುದ್ಧ FIR ದಾಖಲಿಸಲು ಬೆಂಗಳೂರು ಕೋರ್ಟ್ ಆದೇಶ : ಕಾರಣವೇನು ಗೊತ್ತಾ..?

  ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ವಿರುದ್ಧ ಎಫ್ಐಆರ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಗಳ ನ್ಯಾಯಾಲಯ ಆದೇಶ ಹೊರಡಿಸಿದೆ. ನ್ಯಾಯಾಲಯಕ್ಕೆ ನಿರ್ಮಲಾ ಸೀತರಾಮನ್ ವಿರುದ್ಧ ದೂರು ಸಲ್ಲಿಕೆಯಾದ ಹಿನ್ನೆಲೆ ಎಫ್ಐಆರ್ ದಾಖಲಿಸಲು ಸೂಚನೆ

ಮೈಸೂರು ದಸರಾ 2024 ವೇಳಾಪಟ್ಟಿ ಬಿಡುಗಡೆ : ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ..?

  ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದೆ. ಅಂಬಾರಿ ಮೇಲೆ ನಾಡ ಅಧಿದೇವತೆಯನ್ನು ಕಣ್ತುಂಬಿಕೊಳ್ಳಲು ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ. ಅದ್ದೂರಿ ಆಚರಣೆಗಾಗಿ ಸರ್ಕಾರ ಹಾಗೂ ಜಿಲ್ಲಾಡಳಿತ ಬರದ ಸಿದ್ಧತೆ ಮಾಡಿಕೊಂಡಿದೆ. ದಸರಾ

error: Content is protected !!