ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬಳ್ಳಾರಿ: ನಟ ದರ್ಶನ್ ರೇಣುಕಾಸ್ವಾಮಿ ಕೊಲೆಯಲ್ಲಿ ಬಳ್ಳಾರಿ ಜೈಲಿನಲ್ಲಿ ಬಂಧಿಯಾಗಿದ್ದಾರೆ. ಜಾಮೀನಿಗೂ ಅರ್ಜಿ ಸಲ್ಲಿಕೆ ಮಾಡಿದ್ದು, ವಿಚಾರಣೆ ಕೂಡ ನಡೆಯುತ್ತಿದೆ. ಈ ಕೇಸಲ್ಲಿ ಈಗಾಗಲೇ ಮೂವರಿಗೆ ಜಾಮೀನು ಸಿಕ್ಕಿದೆ. ಆ ಮೂವರು ಕೊಲೆಯಲ್ಲಿ ಭಾಗಿಯಾದವರಲ್ಲ. ಮೃತದೇಹ ಸಾಗಿಸಲು ಹಣ ಪಡೆದು, ಸೆರಂಡರ್ ಆದವರು. ಹೀಗಾಗಿ ಆ ಮೂವರಿಗೆ ಜಾಮೀನು ನೀಡಲಾಗಿದೆ. ಇದೀಗ ಐಟಿ ಅಧಿಕಾರಿಗಳು ದರ್ಶನ್ ಹಣದ ಮೂಲದ ಹಿಂದೆ ಬಿದ್ದಿದ್ದಾರೆ.
ಅಂದ್ರೆ ರೇಣುಕಾಸ್ವಾಮಿ ಕೊಲೆಯ ಬಳಿಕ ಮೃತದೇಹ ಸಾಗಿಸುವುದಕ್ಕೇನೆ 30 ಲಕ್ಷ ಹಣ ನೀಡಿದ್ದರು. ಹೀಗಾಗಿ ಆ ಹಣವೆಲ್ಲಾ ಎಲ್ಲಿಂದ ಬಂತು ಎಂಬ ಮೂಲ ಕಂಡು ಹಿಡಿಯಲು ಹೊರಟಿದ್ದಾರೆ. ಹೀಗಾಗಿ ದರ್ಶನ್ ಅವರನ್ನು ಭೇಟಿಯಾಗಲು ಐಟಿ ಅಧಿಕಾರಿಗಳು ಜೈಲು ಅಧಿಕಾರಿಗಳಿಗೆ ಸಮಯವನ್ನು ಕೇಳಿದ್ದಾರೆ. ಸಮಯ ನೀಡಿದ ಬಳಿಕ ಐಟಿ ಅಧಿಕಾರಿಗಳು ಬಳ್ಳಾರಿ ಜೈಲಿಗೆ ಭೇಟಿ ನೀಡಲಿದ್ದಾರೆ.
ಜೈಲು ಅಧಿಕಾರಿಗಳಿಗೆ ಈ ಸಂಬಂಧ ಈಗಾಗಲೇ ಮೇಲ್ ಕೂಡ ಬಂದಿದೆ. ದರ್ಶನ್ ಅವರ ಭೇಟಿಗೆ ಸಮಯಾವಕಾಶ ನೀಡುವಂತೆ ಮನವಿ ಮಾಡಿ ಮೇಲ್ ಮಾಡಿದ್ದಾರೆ. ಯಾಕಂದ್ರೆ ರೇಣುಕಾಸ್ವಾಮಿ ಕೊಲೆಯ ಬಳಿಕ ಆ ಕೇಸನ್ನು ಇನ್ನೊಬ್ಬರ ಮೇಕೆ ಹಾಕುವ ಹುನ್ನಾರ ನಡೆದಿತ್ತು. ಹಣದ ಆಮಿಷವೊಡ್ಡಿ ಪೊಲೀಸರ ಮುಂದೆ ತಪ್ಪೊಪ್ಪಿಕೊಳ್ಳುವಂತೆ ಸೂಚನೆ ನೀಡಿದ್ದರು. ಅದಕ್ಕೆ ಸರಿಯಾಗಿ ಕೇಶವಮೂರ್ತಿ, ಕಾರ್ತಿಕ್, ನಿಖಿಲ್ ಆ ತಪ್ಪನ್ನು ಒಪ್ಪಿಕೊಂಡು ಪೊಲೀಸರ ಮುಂದೆ ಸೆರಂಡರ್ ಆಗಿದ್ದರು. ಆಮೇಲೆ ಪೊಲೀಸರ ತನಿಖೆಯ ಬಳಿಕ ಸತ್ಯ ಹೊರಗೆ ಬಂದಿದ್ದು, ದರ್ಶನ್ ಅಂಡ್ ಗ್ಯಾಂಗ್ ಸಿಕ್ಕಿಬಿದ್ದಿತ್ತು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್