Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೇಣುಕಾಸ್ವಾಮಿ ಮೃತದೇಹ ಸಾಗಿಸಲು ಲಕ್ಷಾಂತರ ಖರ್ಚು: ಹಣದ ಮೂಲದ ಹಿಂದೆ ಬಿದ್ದ ಐಟಿ ಅಧಿಕಾರಿಗಳು..!

Facebook
Twitter
Telegram
WhatsApp

 

ಬಳ್ಳಾರಿ: ನಟ ದರ್ಶನ್ ರೇಣುಕಾಸ್ವಾಮಿ ಕೊಲೆಯಲ್ಲಿ ಬಳ್ಳಾರಿ ಜೈಲಿನಲ್ಲಿ ಬಂಧಿಯಾಗಿದ್ದಾರೆ. ಜಾಮೀನಿಗೂ ಅರ್ಜಿ ಸಲ್ಲಿಕೆ ಮಾಡಿದ್ದು, ವಿಚಾರಣೆ ಕೂಡ ನಡೆಯುತ್ತಿದೆ. ಈ ಕೇಸಲ್ಲಿ ಈಗಾಗಲೇ ಮೂವರಿಗೆ ಜಾಮೀನು ಸಿಕ್ಕಿದೆ. ಆ ಮೂವರು ಕೊಲೆಯಲ್ಲಿ ಭಾಗಿಯಾದವರಲ್ಲ. ಮೃತದೇಹ ಸಾಗಿಸಲು ಹಣ ಪಡೆದು, ಸೆರಂಡರ್ ಆದವರು. ಹೀಗಾಗಿ ಆ ಮೂವರಿಗೆ ಜಾಮೀನು ನೀಡಲಾಗಿದೆ. ಇದೀಗ ಐಟಿ ಅಧಿಕಾರಿಗಳು ದರ್ಶನ್ ಹಣದ ಮೂಲದ ಹಿಂದೆ ಬಿದ್ದಿದ್ದಾರೆ.

ಅಂದ್ರೆ ರೇಣುಕಾಸ್ವಾಮಿ ಕೊಲೆಯ ಬಳಿಕ ಮೃತದೇಹ ಸಾಗಿಸುವುದಕ್ಕೇನೆ 30 ಲಕ್ಷ ಹಣ ನೀಡಿದ್ದರು. ಹೀಗಾಗಿ ಆ ಹಣವೆಲ್ಲಾ ಎಲ್ಲಿಂದ ಬಂತು ಎಂಬ ಮೂಲ ಕಂಡು ಹಿಡಿಯಲು ಹೊರಟಿದ್ದಾರೆ. ಹೀಗಾಗಿ ದರ್ಶನ್ ಅವರನ್ನು ಭೇಟಿಯಾಗಲು ಐಟಿ ಅಧಿಕಾರಿಗಳು ಜೈಲು ಅಧಿಕಾರಿಗಳಿಗೆ ಸಮಯವನ್ನು ಕೇಳಿದ್ದಾರೆ. ಸಮಯ ನೀಡಿದ ಬಳಿಕ ಐಟಿ ಅಧಿಕಾರಿಗಳು ಬಳ್ಳಾರಿ ಜೈಲಿಗೆ ಭೇಟಿ ನೀಡಲಿದ್ದಾರೆ.

ಜೈಲು ಅಧಿಕಾರಿಗಳಿಗೆ ಈ ಸಂಬಂಧ ಈಗಾಗಲೇ ಮೇಲ್ ಕೂಡ ಬಂದಿದೆ. ದರ್ಶನ್ ಅವರ ಭೇಟಿಗೆ ಸಮಯಾವಕಾಶ ನೀಡುವಂತೆ ಮನವಿ ಮಾಡಿ ಮೇಲ್ ಮಾಡಿದ್ದಾರೆ. ಯಾಕಂದ್ರೆ ರೇಣುಕಾಸ್ವಾಮಿ ಕೊಲೆಯ ಬಳಿಕ ಆ ಕೇಸನ್ನು ಇನ್ನೊಬ್ಬರ ಮೇಕೆ ಹಾಕುವ ಹುನ್ನಾರ ನಡೆದಿತ್ತು. ಹಣದ ಆಮಿಷವೊಡ್ಡಿ ಪೊಲೀಸರ ಮುಂದೆ ತಪ್ಪೊಪ್ಪಿಕೊಳ್ಳುವಂತೆ ಸೂಚನೆ ನೀಡಿದ್ದರು. ಅದಕ್ಕೆ ಸರಿಯಾಗಿ ಕೇಶವಮೂರ್ತಿ, ಕಾರ್ತಿಕ್, ನಿಖಿಲ್ ಆ ತಪ್ಪನ್ನು ಒಪ್ಪಿಕೊಂಡು ಪೊಲೀಸರ ಮುಂದೆ ಸೆರಂಡರ್ ಆಗಿದ್ದರು. ಆಮೇಲೆ ಪೊಲೀಸರ ತನಿಖೆಯ ಬಳಿಕ ಸತ್ಯ ಹೊರಗೆ ಬಂದಿದ್ದು, ದರ್ಶನ್ ಅಂಡ್ ಗ್ಯಾಂಗ್ ಸಿಕ್ಕಿಬಿದ್ದಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನನ್ನ ಬಳಿ ಇರುವ ದಾಖಲೆ ಕೊಟ್ಟರೆ ಇನ್ನು 6-7 ಸಚಿವರು ರಾಜೀನಾಮೆ ಕೊಡಬೇಕಾಗುತ್ತದೆ : ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ

  ಬೆಂಗಳೂರು: ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಕುಮಾರಸ್ವಾಮಿ ಅವರನ್ನು ವಿಚಾರಣೆಗೆ ಕರೆದಿದ್ದರು. ವಿಚಾರಣೆಗೆ ಹಾಜರಾಗಿ ಬಂದ ಮರುದಿನವೇ ಸುದ್ದಿಗೋಷ್ಟಿ ನಡೆಸಿರುವ ಕುಮಾರಸ್ವಾಮಿ ಅವರು, ಕಾಂಗ್ರೆಸ್ ಮೇಲೆ ಕಿಡಿಕಾರಿದ್ದಾರೆ. ವಿಚಾರಣೆ ಮಾಡುವುದಕ್ಕೆ

ನಿರ್ಮಲಾ ಸೀತರಾಮನ್ ವಿರುದ್ಧ FIR ದಾಖಲಿಸಲು ಬೆಂಗಳೂರು ಕೋರ್ಟ್ ಆದೇಶ : ಕಾರಣವೇನು ಗೊತ್ತಾ..?

  ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ವಿರುದ್ಧ ಎಫ್ಐಆರ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಗಳ ನ್ಯಾಯಾಲಯ ಆದೇಶ ಹೊರಡಿಸಿದೆ. ನ್ಯಾಯಾಲಯಕ್ಕೆ ನಿರ್ಮಲಾ ಸೀತರಾಮನ್ ವಿರುದ್ಧ ದೂರು ಸಲ್ಲಿಕೆಯಾದ ಹಿನ್ನೆಲೆ ಎಫ್ಐಆರ್ ದಾಖಲಿಸಲು ಸೂಚನೆ

ಮೈಸೂರು ದಸರಾ 2024 ವೇಳಾಪಟ್ಟಿ ಬಿಡುಗಡೆ : ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ..?

  ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದೆ. ಅಂಬಾರಿ ಮೇಲೆ ನಾಡ ಅಧಿದೇವತೆಯನ್ನು ಕಣ್ತುಂಬಿಕೊಳ್ಳಲು ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ. ಅದ್ದೂರಿ ಆಚರಣೆಗಾಗಿ ಸರ್ಕಾರ ಹಾಗೂ ಜಿಲ್ಲಾಡಳಿತ ಬರದ ಸಿದ್ಧತೆ ಮಾಡಿಕೊಂಡಿದೆ. ದಸರಾ

error: Content is protected !!