Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಳ್ಳಾರಿಯಲ್ಲಿ NHM/NUHM ಹುದ್ದೆಗಳು ಖಾಲಿ : ಪರೀಕ್ಷೆಯೇ ಇಲ್ಲದೆ ನೇಮಕ..!

Facebook
Twitter
Telegram
WhatsApp

ಬಳ್ಳಾರಿ: ಕೆಲಸಕ್ಕಾಗಿ ಹುಡುಕುತ್ತಿರುವ ಸ್ಥಳೀಯರಿಗೆ ಇಲ್ಲೊಂದಿಷ್ಟು ಅವಕಾಶಗಳಿವೆ. ಬಳ್ಳಾರಿ ಜಿಲ್ಲೆಯಲ್ಲಿ 2024-25ನೇ ಸಾಲಿನ NHM/NUHM ಹಾಗೂ ಪಿಎಂ ಅಭೀಮ್ ಕಾರ್ಯಕ್ರಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತಿದೆ. ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ಕೆಲಸ ಹುಡುಕುತ್ತಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಈ ಸಂಬಂಧ ಕಳೆದ ತಿಂಗಳು ಅಂದ್ರೆ ಆಗಸ್ಟ್ 8ರಂದೇ ಕಡತಗಳ ಟಿಪ್ಪಣಿಗೆ ಅನುಮೋದನೆ ಕೊಡಲಾಗಿತ್ತು. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಹಾಕಬಹುದು. ಈ ಹುದ್ದೆಗೆ ಸೇರಬೇಕೆಂದು ಬಯಸುವವರಿಗೆ ಯಾವುದೇ ಶುಲ್ಕ, ಪರೀಕ್ಷೆ ಇರುವುದಿಲ್ಲ. ನೇರವಾಗಿಯೇ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಮಾಸಿಕ ಸಂಭಾವನೆ 14,186 ರಿಂದ 30,000 ಸಾವಿರದ ತನಕ ಇದೆಮ ಹಾಗಾದ್ರೆ ಯಾವೆಲ್ಲಾ ಹುದ್ದೆಗಳಿಗೆ ಕಾಲ್ ಫಾರ್ಮ್ ಮಾಡಿದ್ದಾರೆ ಎಂಬುದನ್ನು ಇಲ್ಲಿ ಮಾಹಿತಿ ನೀಡಲಾಗಿದೆ.

ಸ್ಟಾಫ್ ನರ್ಸ್ -45 ಹುದ್ದೆಗಳು ಖಾಲಿ ಇದಾವೆ. ಕಿರಿಯ ಆರೋಗ್ಯ ಸಹಾಯಕ -12, ಆಡಿಯೋಮೆಟ್ರಿಕ್ ಅಸಿಸ್ಟೆಂಟ್-01, ಬ್ಲಾಕ್ ಎಪಿಡೆಮಿಯೋಲಾಜಿಸ್ಟ್ -1, ಇನ್ ಸ್ಟ್ರಕ್ಟರ್ -1, ಜಿಲ್ಲಾ ಸಂಯೋಜಕರು -1, ಆಪ್ತ ಸಹಾಯಕ ಹುದ್ದೆ -1 ಬಾಕಿ ಇದೆ. ಇನ್ನು ಅರ್ಜಿಬ ಸಲ್ಲಿಸುವವರು ಆಯಾ ಹುದ್ದೆಗೆ ಸಂಬಂಧಿಸಿದ ವಿದ್ಯಾರ್ಹತೆ ಪಡೆದಿರಬೇಕು. ವಯಸ್ಸಿನ ಮಿತಿಯೂ45 ವರ್ಷ ತುಂಬಿರಬಾರದು. ಆಸಕ್ತರು Ballari.nic.in ವೆಬ್ಸೈಟ್ ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು. ಅರ್ಜಿ ಅಲ್ಲಿಯೇ ಪಡೆದು ಅಪ್ಲೈ ಮಾಡಬಹುದು. ಕಚೇರಿಯಿಂದಲೂ ನೇರವಾಗಿ ಪಡೆದು ಅಪ್ಲೈ ಮಾಡಲು ಅವಕಾಶವಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎರಡನೆ ದಿನಕ್ಕೆ ಕಾಲಿಟ್ಟ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 27 : ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಹೆಚ್ಚಿನ ಒತ್ತಡವಾಗುವುದು ಸೇರಿದಂತೆ

ಹಂಪಿ ಉತ್ಸವದಂತೆ ದುರ್ಗೋತ್ಸವ ಆಚರಿಸುವಂತೆ ಕರುನಾಡ ವಿಜಯಸೇನೆ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 27 : ಐತಿಹಾಸಿಕ ಏಳು ಸುತ್ತಿನ ಕೋಟೆಯಿರುವ ಚಿತ್ರದುರ್ಗದಲ್ಲಿ ದುರ್ಗೋತ್ಸವ ಆಚರಿಸುವಂತೆ ಕರುನಾಡ ವಿಜಯಸೇನೆ

ಮೊಳಕಾಲ್ಮುರು ತಾ.ಪಂ ವ್ಯವಸ್ಥಾಪಕ ಅಮಾನತು

ಚಿತ್ರದುರ್ಗ. ಸೆ.27: ಪದೇ ಪದೇ ಕಚೇರಿ ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಾಗುವುದು ಹಾಗೂ ಕರ್ತವ್ಯದಲ್ಲಿ ನಿರ್ಲಕ್ಷö್ಯ ತೋರಿದ ಕಾರಣಕ್ಕಾಗಿ ಮೊಳಕಾಲ್ಮುರು ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ಅರುಣ್ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ

error: Content is protected !!