Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದ್ವೇಷದ ರಾಜಕಾರಣಕ್ಕೆ ಸಿಬಿಐ ಒಳಪಡಬಾರದು ಎಂಬ ದೃಷ್ಟಿಯಿಂದ ಈ ತೀರ್ಮಾನ : ಡಿಕೆಶಿ

Facebook
Twitter
Telegram
WhatsApp

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕೇಸಿನ ವಿಚಾರದಲ್ಲಿ ಸಚಿವ ಸಂಪುಟದಲ್ಲಿ ರಾಜ್ಯ ಸರ್ಕಾರದ ಅನುಮತಿ ಇಲ್ಲದೆ ಸಿಬಿಐ ಎಂಟ್ರಿಯಾಗುವಂತೆ ಇಲ್ಲ ಎಂಬ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

‘ಸಿಬಿಐನವರು ಏನೇನು ಮಾಡ್ತಾ ಇದ್ದಾರೆ ಎಂಬುದನ್ನು ನಾವೂ ಚರ್ಚೆ ಮಾಡೋದು ಬೇಡ. ಜೆಡಿಎಸ್ ನವರು ಏನ್ ಮಾಡಿದ್ರು, ಕುಮಾರಸ್ವಾಮಿ ಅವರು ಏನು ಮಾತಾಡಿದ್ರು, ಬಿಜೆಪಿ ಅವರು ಏನ್ ಮಾತಾಡಿದ್ರು ಅನ್ನೋದು ಗೊತ್ತಿದೆ. ಈಗ ಚರ್ಚೆ ಬೇಡ. ಅವರು ಎಷ್ಟು ಕೇಸ್ ಕೊಟ್ಟಿದ್ರು, ಕೇಸ್ ಏನಾಗಿದೆ, ಸಿಬಿಐ ರಿಪೋರ್ಟ್ ಏನಾಗಿದೆ ಎಂಬುದೆಲ್ಲವನ್ನು ಚರ್ಚೆ ಮಾಡೋದು ಬೇಡ ಎಂದಿದ್ದಾರೆ.

 

ಸಿದ್ದರಾಮಯ್ಯ ಅವರನ್ನು ಉಳಿಸಲು ಸಿಬಿಐ ದೂರ ಇಟ್ಟಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿ ಡಿಸಿಎಂ, ಸರ್ಕಾರ ಒಂದು ಚರ್ಚೆ ಮಾಡಿದೆ. ದ್ವೇಷದ ರಾಜಕಾರಣಕ್ಕೆ ಸಿಬಿಐ ಒಳಪಡಬಾರದು ಎಂಬ ದೃಷ್ಟಿಯಿಂದ ಈ ತೀರ್ಮಾನವನ್ನು ತೆಗೆದುಕೊಂಡಿದ್ದೇವೆ‌. ನಮ್ಮ ಅಧಿಕಾರಿಗಳು ಮಾಡುವುದಕ್ಕೆ ಆಗಲ್ಲ ಎಂದಾಗ ನೋಡೋಣಾ. ವಿಪಕ್ಷಗಳು ಮಾತಾಡ್ಲಿ. ಅವರಿಗೆಲ್ಲ ಉತ್ತರವನ್ನು ಬೇರೆ ಸಮಯದಲ್ಲಿ ಕೊಡೋಣಾ ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಇತ್ತ ವಿಪಕ್ಷ ನಾಯಕರು ಸಿದ್ದರಾಮಯ್ಯ ಅವರು ಮೊದಲು ರಾಜೀನಾಮೆ ನೀಡಲಿ ಎಂದೇ ಕೇಳುತ್ತಿದ್ದಾರೆ.

ರಾಜ್ಯಪಾಲರಿಂದ ಮಾಹಿತಿ ಸೋರಿಕೆ ಆರೋಪದ ಬಗ್ಗೆ ಮಾತನಾಡಿ, ಆ ಬಗ್ಗೆ ನಂಗೆ ಗೊತ್ತಿಲ್ಲ. ಅದು ಇಂಟರ್ನಲ್ ಮ್ಯಾಟರ್. ಯಾರೂ ಏನು ಬರೆದಿದ್ದಾರೆ ಎಂಬುದು ಗೊತ್ತಿಲ್ಲ. ರಾಜ್ಯಪಾಲರ ಆಫೀಸಲ್ಲಿ ಏನು ನಡೆದಿದೆ, ಲೋಕಾಯುಕ್ತ ಆಫೀಸಲ್ಲಿ ಏನು ನಡೆದಿದೆ ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ. ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎರಡನೆ ದಿನಕ್ಕೆ ಕಾಲಿಟ್ಟ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 27 : ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಹೆಚ್ಚಿನ ಒತ್ತಡವಾಗುವುದು ಸೇರಿದಂತೆ

ಹಂಪಿ ಉತ್ಸವದಂತೆ ದುರ್ಗೋತ್ಸವ ಆಚರಿಸುವಂತೆ ಕರುನಾಡ ವಿಜಯಸೇನೆ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 27 : ಐತಿಹಾಸಿಕ ಏಳು ಸುತ್ತಿನ ಕೋಟೆಯಿರುವ ಚಿತ್ರದುರ್ಗದಲ್ಲಿ ದುರ್ಗೋತ್ಸವ ಆಚರಿಸುವಂತೆ ಕರುನಾಡ ವಿಜಯಸೇನೆ

ಮೊಳಕಾಲ್ಮುರು ತಾ.ಪಂ ವ್ಯವಸ್ಥಾಪಕ ಅಮಾನತು

ಚಿತ್ರದುರ್ಗ. ಸೆ.27: ಪದೇ ಪದೇ ಕಚೇರಿ ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಾಗುವುದು ಹಾಗೂ ಕರ್ತವ್ಯದಲ್ಲಿ ನಿರ್ಲಕ್ಷö್ಯ ತೋರಿದ ಕಾರಣಕ್ಕಾಗಿ ಮೊಳಕಾಲ್ಮುರು ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ಅರುಣ್ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ

error: Content is protected !!