Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೈಸೂರಲ್ಲಿ ಹೆಚ್ಚಿತು ಸಿದ್ದರಾಮಯ್ಯ ಕ್ರೇಜ್.. ಕಾರು, ಆಟೋ ಮೇಲೆಲ್ಲಾ ಸಿಎಂ ಹವಾ..!

Facebook
Twitter
Telegram
WhatsApp

ಮೈಸೂರು: ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತ ತನಿಖೆಗೆ ವಹಿಸಲಾಗಿದೆ. ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುವುದೊಂದೆ ಬಾಕಿ ಇದೆ. ಆದರೆ ಸಿದ್ದರಾಮಯ್ಯ ಅವರ ಬೆಂಬಲಿಗರು ಸದಾ ನಾವು ನಿಮ್ಮೊಂದಿಗೆ ಎಂಬ ಅಭಿಯಾನ ಶುರು ಮಾಡಿದ್ದಾರೆ. ಮೈಸೂರಿನಲ್ಲಿ ಕಾರ್ಯಕರ್ತರು ಬೆಂಬಲಿಗರು ಸಿದ್ದರಾಮಯ್ಯ ಅವರ ಪೋಸ್ಟರ್ ಹಿಡಿದು ಅಭಿಯಾನ ಶುರು ಮಾಡಿದ್ದಾರೆ. ವಾದ್ಯ ಮೇಳಗಳೊಂದಿಗೆ, ಸಿದ್ದರಾಮಯ್ಯ ಅವರ ಪೋಸ್ಟರ್ ಹಿಡಿದು, ನಾವೂ ನಿಮ್ಮೊಂದಿಗೆ ಇದ್ದೇವೆ‌ ಎಂದು ಘೋಷಣೆ ಮೊಳಗಿಸಿದ್ದಾರೆ.

ಅಷ್ಟೇ ಅಲ್ಲ ವಿಮಾನ ನಿಲ್ದಾಣದಲ್ಲಿ ಕಾರುಗಳ ಮೇಲೆ ಸಿದ್ದರಾಮಯ್ಯ ಅವರ ಭಾವಚಿತ್ರಗಳು ರಾರಾಜಿಸುತ್ತಿವೆ. ಇಂದು ಸಿದ್ದರಾಮಯ್ಯ ಅವರು ಮೈಸೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆ, ಸಾವಿರಾರು ಸಂಖ್ಯೆಯಲ್ಲಿ ಸಿದ್ದರಾಮಯ್ಯ ಅವರನ್ನು ಸ್ವಾಗತ ಮಾಡುವುದಕ್ಕೆ ಆಗಮಿಸಿದ್ದಾರೆ. ಎಲ್ಲಾ ಕಾರುಗಳ ಮೇಲೆ ನಾನು ಸಿದ್ದರಾಮಯ್ಯ ಅವರ ಪರ ಎಂದು ಪೋಸ್ಟರ್ ಗಳನ್ನು ಅಂಟಿಸಲಾಗಿದೆ‌.

ಇಂದು ಸಿದ್ದರಾಮಯ್ಯ ಅವರಿಗೆ ಮಹತ್ವದ ದಿನವಾಗಿದೆ. ಮೈಸೂರಿನ ಲೋಕಾಯುಕ್ತ ಪೊಲೀಸರು ಇಂದು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಿದ್ದಾರೆ. ಈ ಹಿನ್ನೆಲೆ ಎಲ್ಲಾ ಕಾರ್ಯಕರ್ತರು ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತಿದ್ದಾರೆ. ಇನ್ನೊಂದೆಡೆ ಬಿಜೆಪಿ ನಾಯಕರಲ್ಲಿ ಸಿದ್ದರಾಮಯ್ಯ ವಿರುದ್ಧ ಧ್ವನಿ ಕೇಳುತ್ತಿದೆ. ಮೊದಲು ರಾಜೀನಾಮೆ ಕೊಡಿ ಎಂದೇ ಒತ್ತಡ ಹಾಕುತ್ತಿದ್ದಾರೆ. ಯಾವುದೇ ರೀತಿಯ ತನಿಖೆಗೂ ನಾನು ಸಿದ್ಧ ಎಂಬುದನ್ನು ಸಿದ್ದರಾಮಯ್ಯ ಅವರು ಈಗಾಗಲೇ ಹೇಳಿದ್ದಾರೆ. ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಅವರ ಪರವಾಗಿಯೇ ಒಗ್ಗಟ್ಟಾಗಿದ್ದಾರೆ. ಈ ಹಿಂದೆ ಇದ್ದಂತೆ ಡಿಕೆಶಿ ಬಣ, ಸಿದ್ದರಾಮಯ್ಯ ಬಣ ಅಂತೇನಿಲ್ಲ. ಎಲ್ಲರೂ ಸಿದ್ದರಾಮಯ್ಯ ಪರವಾಗಿ ನಿಂತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎರಡನೆ ದಿನಕ್ಕೆ ಕಾಲಿಟ್ಟ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 27 : ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಹೆಚ್ಚಿನ ಒತ್ತಡವಾಗುವುದು ಸೇರಿದಂತೆ

ಹಂಪಿ ಉತ್ಸವದಂತೆ ದುರ್ಗೋತ್ಸವ ಆಚರಿಸುವಂತೆ ಕರುನಾಡ ವಿಜಯಸೇನೆ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 27 : ಐತಿಹಾಸಿಕ ಏಳು ಸುತ್ತಿನ ಕೋಟೆಯಿರುವ ಚಿತ್ರದುರ್ಗದಲ್ಲಿ ದುರ್ಗೋತ್ಸವ ಆಚರಿಸುವಂತೆ ಕರುನಾಡ ವಿಜಯಸೇನೆ

ಮೊಳಕಾಲ್ಮುರು ತಾ.ಪಂ ವ್ಯವಸ್ಥಾಪಕ ಅಮಾನತು

ಚಿತ್ರದುರ್ಗ. ಸೆ.27: ಪದೇ ಪದೇ ಕಚೇರಿ ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಾಗುವುದು ಹಾಗೂ ಕರ್ತವ್ಯದಲ್ಲಿ ನಿರ್ಲಕ್ಷö್ಯ ತೋರಿದ ಕಾರಣಕ್ಕಾಗಿ ಮೊಳಕಾಲ್ಮುರು ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ಅರುಣ್ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ

error: Content is protected !!